Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭ; ಅಧಿಕಾರಿಗಳಿಂದ ಪರಿಶೀಲನೆ

ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಒತ್ತುವರಿ ಮಾಡಿಕೊಂಡವರಲ್ಲಿ ಮತ್ತೆ ನಡುಕ ಉಂಟುಮಾಡಿದೆ.

Bangalore: ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭ; ಅಧಿಕಾರಿಗಳಿಂದ ಪರಿಶೀಲನೆ
ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭImage Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Oct 10, 2022 | 12:39 PM

ಬೆಂಗಳೂರು: ಕೆಲವು ದಿನಗಳಿಂದ ನಿಂತುಹೋಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಒತ್ತುವರಿ ಮಾಡಿಕೊಂಡವರಲ್ಲಿ ಮತ್ತೆ ನಡುಕ ಉಂಟುಮಾಡಿದೆ. ಇಂದು ಮಹದೇವಪುರ ಭಾಗದಲ್ಲಿ ಬುಲ್ಡೋಜರ್ ಸುದ್ದು ಮಾಡಲಿದ್ದು, ಈಗಾಗಲೇ ಕಂದಾಯ ಇಲಾಖೆ (Revenue Department) ಮತ್ತು ಬಿಬಿಎಂಪಿ (BBMP)ಯಿಂದ ಸರ್ವೆ ಕಾರ್ಯ ನಡೆಸಲಾಗಿದೆ. ಪೂರ್ವ ಪಾರ್ಕ್ ​ರಿಡ್ಜ್​​ನ​ ಎರಡು ಐಷಾರಾಮಿ ವಿಲ್ಲಾ, ಸಭಾಂಗಣವನ್ನು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು, ನಾಳೆ ಕಟ್ಟಡ ತೆರವು ಕಾರ್ಯ ನಡೆಯಲಿದೆ. ವಿಲ್ಲಾದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗದ ರೀತಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ರಾಜಧಾನಿ ಬೆಮಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆಯಾ ಎಂಬ ಅನುಮಾನಗಳ ನಡುವೆ ಬಿಬಿಎಂಪಿ ಸೋಮವಾರದಿಂದ ಮತ್ತೆ ಆರಂಭಿಸಿದೆ. ಇದರ ಹೊರತಾಗಿ ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಇಕೋಸ್ಪೇಸ್​ ಕಂಪನಿಯ (Ecospace company) ಒತ್ತುವರಿ ಜಾಗ ತೆರವು ಮಾಡಲು ಅಧಿಕಾರಿಗಳಿಗೆ ಫ್ರೀಹ್ಯಾಂಡ್ ನೀಡಲಾಗಿದೆ. ಇದರೊಂದಿಗೆ ಇಕೋಸ್ಪೇಸ್​ ಒಳಗಿರುವ 12 ಅಂತಸ್ತಿನ 2 ಕಟ್ಟಡ ತೆರವು ನಿಶ್ಚಿತವಾಗಿದೆ. ಸಾವಳಕೆರೆಯಿಂದ ಬೆಳ್ಳಂದೂರು ಕೆರೆಗೆ ಸಂಪರ್ಕ ಸಲ್ಲಿಸುವ ರಾಜಕಾಲುವೆ ಮಾರ್ಗದಲ್ಲಿ500 ಮೀಟರ್​ ಉದ್ದ, 40-50 ಅಡಿ ಅಗಲದ ಜಾಗ ಒತ್ತುವರಿಯಾಗಿದೆ.

ದೊಡ್ಡ ಸ್ಟ್ರಕ್ಚರ್​​ಗಳಿಗೆ ಸ್ಟೇ

ರಾಜಕಾಲುವೆ ಒತ್ತುವರಿ ವಿಚಾರ ಸಂಬಂಧ ಮಾತನಾಡಿದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ, ಇಂದು ಕಾಂಪೌಡ್ ವಾಲ್, ಖಾಲಿಜಾಗ, ಶೆಡ್ ಮಾತ್ರ ತೆರವು ಮಾಡುತ್ತೇವೆ. ದೊಡ್ಡ ಸ್ಟ್ರಕ್ಚರ್​ಗಳಿಗೆ ಸ್ಟೇ ಆರ್ಡರ್ ಇದೆ. ಹೀಗಾಗಿ ತಹಶೀಲ್ದಾರ್ ನೋಟಿಸ್ ಕೊಟ್ಟು ರಿ ಸರ್ವೆ ಆಗಬೇಕು. ಇದಕ್ಕೆ ಎರಡರಿಂದ ಮೂರು ದಿನ ಹಿಡಿಯಬಹುದು. ತಹಶೀಲ್ದಾರ್ ನಮಗೆ ಆದೇಶ ನೀಡಿದ ತಕ್ಷಣ ದೊಡ್ಡ ಕಟ್ಟಡಗಳನ್ನೂ ತೆರವು ಮಾಡುತ್ತೇವೆ. ಇದಕ್ಕೆ ಮೂರು ದಿನಗಳಾಗಬಹುದು. ಅದು ಬಿಟ್ಟು ನಾವು ಏಕಾಏಕಿ ಒಡೆದುಹಾಕಲು ಸಾಧ್ಯವಿಲ್ಲ. ಇವತ್ತು ನಾಳೆ ಎಲ್ಲೆಲ್ಲಿ ಅಡ್ಡಿ ಇಲ್ಲವೋ ಅಲ್ಲೆಲ್ಲಾ ತೆರವು ಮಾಡುತ್ತೇವೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Mon, 10 October 22

ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು