AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭ; ಅಧಿಕಾರಿಗಳಿಂದ ಪರಿಶೀಲನೆ

ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಒತ್ತುವರಿ ಮಾಡಿಕೊಂಡವರಲ್ಲಿ ಮತ್ತೆ ನಡುಕ ಉಂಟುಮಾಡಿದೆ.

Bangalore: ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭ; ಅಧಿಕಾರಿಗಳಿಂದ ಪರಿಶೀಲನೆ
ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 10, 2022 | 12:39 PM

Share

ಬೆಂಗಳೂರು: ಕೆಲವು ದಿನಗಳಿಂದ ನಿಂತುಹೋಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಒತ್ತುವರಿ ಮಾಡಿಕೊಂಡವರಲ್ಲಿ ಮತ್ತೆ ನಡುಕ ಉಂಟುಮಾಡಿದೆ. ಇಂದು ಮಹದೇವಪುರ ಭಾಗದಲ್ಲಿ ಬುಲ್ಡೋಜರ್ ಸುದ್ದು ಮಾಡಲಿದ್ದು, ಈಗಾಗಲೇ ಕಂದಾಯ ಇಲಾಖೆ (Revenue Department) ಮತ್ತು ಬಿಬಿಎಂಪಿ (BBMP)ಯಿಂದ ಸರ್ವೆ ಕಾರ್ಯ ನಡೆಸಲಾಗಿದೆ. ಪೂರ್ವ ಪಾರ್ಕ್ ​ರಿಡ್ಜ್​​ನ​ ಎರಡು ಐಷಾರಾಮಿ ವಿಲ್ಲಾ, ಸಭಾಂಗಣವನ್ನು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು, ನಾಳೆ ಕಟ್ಟಡ ತೆರವು ಕಾರ್ಯ ನಡೆಯಲಿದೆ. ವಿಲ್ಲಾದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗದ ರೀತಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ರಾಜಧಾನಿ ಬೆಮಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆಯಾ ಎಂಬ ಅನುಮಾನಗಳ ನಡುವೆ ಬಿಬಿಎಂಪಿ ಸೋಮವಾರದಿಂದ ಮತ್ತೆ ಆರಂಭಿಸಿದೆ. ಇದರ ಹೊರತಾಗಿ ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಇಕೋಸ್ಪೇಸ್​ ಕಂಪನಿಯ (Ecospace company) ಒತ್ತುವರಿ ಜಾಗ ತೆರವು ಮಾಡಲು ಅಧಿಕಾರಿಗಳಿಗೆ ಫ್ರೀಹ್ಯಾಂಡ್ ನೀಡಲಾಗಿದೆ. ಇದರೊಂದಿಗೆ ಇಕೋಸ್ಪೇಸ್​ ಒಳಗಿರುವ 12 ಅಂತಸ್ತಿನ 2 ಕಟ್ಟಡ ತೆರವು ನಿಶ್ಚಿತವಾಗಿದೆ. ಸಾವಳಕೆರೆಯಿಂದ ಬೆಳ್ಳಂದೂರು ಕೆರೆಗೆ ಸಂಪರ್ಕ ಸಲ್ಲಿಸುವ ರಾಜಕಾಲುವೆ ಮಾರ್ಗದಲ್ಲಿ500 ಮೀಟರ್​ ಉದ್ದ, 40-50 ಅಡಿ ಅಗಲದ ಜಾಗ ಒತ್ತುವರಿಯಾಗಿದೆ.

ದೊಡ್ಡ ಸ್ಟ್ರಕ್ಚರ್​​ಗಳಿಗೆ ಸ್ಟೇ

ರಾಜಕಾಲುವೆ ಒತ್ತುವರಿ ವಿಚಾರ ಸಂಬಂಧ ಮಾತನಾಡಿದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ, ಇಂದು ಕಾಂಪೌಡ್ ವಾಲ್, ಖಾಲಿಜಾಗ, ಶೆಡ್ ಮಾತ್ರ ತೆರವು ಮಾಡುತ್ತೇವೆ. ದೊಡ್ಡ ಸ್ಟ್ರಕ್ಚರ್​ಗಳಿಗೆ ಸ್ಟೇ ಆರ್ಡರ್ ಇದೆ. ಹೀಗಾಗಿ ತಹಶೀಲ್ದಾರ್ ನೋಟಿಸ್ ಕೊಟ್ಟು ರಿ ಸರ್ವೆ ಆಗಬೇಕು. ಇದಕ್ಕೆ ಎರಡರಿಂದ ಮೂರು ದಿನ ಹಿಡಿಯಬಹುದು. ತಹಶೀಲ್ದಾರ್ ನಮಗೆ ಆದೇಶ ನೀಡಿದ ತಕ್ಷಣ ದೊಡ್ಡ ಕಟ್ಟಡಗಳನ್ನೂ ತೆರವು ಮಾಡುತ್ತೇವೆ. ಇದಕ್ಕೆ ಮೂರು ದಿನಗಳಾಗಬಹುದು. ಅದು ಬಿಟ್ಟು ನಾವು ಏಕಾಏಕಿ ಒಡೆದುಹಾಕಲು ಸಾಧ್ಯವಿಲ್ಲ. ಇವತ್ತು ನಾಳೆ ಎಲ್ಲೆಲ್ಲಿ ಅಡ್ಡಿ ಇಲ್ಲವೋ ಅಲ್ಲೆಲ್ಲಾ ತೆರವು ಮಾಡುತ್ತೇವೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Mon, 10 October 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್