AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭ; ಅಧಿಕಾರಿಗಳಿಂದ ಪರಿಶೀಲನೆ

ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಒತ್ತುವರಿ ಮಾಡಿಕೊಂಡವರಲ್ಲಿ ಮತ್ತೆ ನಡುಕ ಉಂಟುಮಾಡಿದೆ.

Bangalore: ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭ; ಅಧಿಕಾರಿಗಳಿಂದ ಪರಿಶೀಲನೆ
ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಆರಂಭImage Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 10, 2022 | 12:39 PM

Share

ಬೆಂಗಳೂರು: ಕೆಲವು ದಿನಗಳಿಂದ ನಿಂತುಹೋಗಿದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಒತ್ತುವರಿ ಮಾಡಿಕೊಂಡವರಲ್ಲಿ ಮತ್ತೆ ನಡುಕ ಉಂಟುಮಾಡಿದೆ. ಇಂದು ಮಹದೇವಪುರ ಭಾಗದಲ್ಲಿ ಬುಲ್ಡೋಜರ್ ಸುದ್ದು ಮಾಡಲಿದ್ದು, ಈಗಾಗಲೇ ಕಂದಾಯ ಇಲಾಖೆ (Revenue Department) ಮತ್ತು ಬಿಬಿಎಂಪಿ (BBMP)ಯಿಂದ ಸರ್ವೆ ಕಾರ್ಯ ನಡೆಸಲಾಗಿದೆ. ಪೂರ್ವ ಪಾರ್ಕ್ ​ರಿಡ್ಜ್​​ನ​ ಎರಡು ಐಷಾರಾಮಿ ವಿಲ್ಲಾ, ಸಭಾಂಗಣವನ್ನು ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು, ನಾಳೆ ಕಟ್ಟಡ ತೆರವು ಕಾರ್ಯ ನಡೆಯಲಿದೆ. ವಿಲ್ಲಾದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗದ ರೀತಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ರಾಜಧಾನಿ ಬೆಮಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆಯಾ ಎಂಬ ಅನುಮಾನಗಳ ನಡುವೆ ಬಿಬಿಎಂಪಿ ಸೋಮವಾರದಿಂದ ಮತ್ತೆ ಆರಂಭಿಸಿದೆ. ಇದರ ಹೊರತಾಗಿ ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಇಕೋಸ್ಪೇಸ್​ ಕಂಪನಿಯ (Ecospace company) ಒತ್ತುವರಿ ಜಾಗ ತೆರವು ಮಾಡಲು ಅಧಿಕಾರಿಗಳಿಗೆ ಫ್ರೀಹ್ಯಾಂಡ್ ನೀಡಲಾಗಿದೆ. ಇದರೊಂದಿಗೆ ಇಕೋಸ್ಪೇಸ್​ ಒಳಗಿರುವ 12 ಅಂತಸ್ತಿನ 2 ಕಟ್ಟಡ ತೆರವು ನಿಶ್ಚಿತವಾಗಿದೆ. ಸಾವಳಕೆರೆಯಿಂದ ಬೆಳ್ಳಂದೂರು ಕೆರೆಗೆ ಸಂಪರ್ಕ ಸಲ್ಲಿಸುವ ರಾಜಕಾಲುವೆ ಮಾರ್ಗದಲ್ಲಿ500 ಮೀಟರ್​ ಉದ್ದ, 40-50 ಅಡಿ ಅಗಲದ ಜಾಗ ಒತ್ತುವರಿಯಾಗಿದೆ.

ದೊಡ್ಡ ಸ್ಟ್ರಕ್ಚರ್​​ಗಳಿಗೆ ಸ್ಟೇ

ರಾಜಕಾಲುವೆ ಒತ್ತುವರಿ ವಿಚಾರ ಸಂಬಂಧ ಮಾತನಾಡಿದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ, ಇಂದು ಕಾಂಪೌಡ್ ವಾಲ್, ಖಾಲಿಜಾಗ, ಶೆಡ್ ಮಾತ್ರ ತೆರವು ಮಾಡುತ್ತೇವೆ. ದೊಡ್ಡ ಸ್ಟ್ರಕ್ಚರ್​ಗಳಿಗೆ ಸ್ಟೇ ಆರ್ಡರ್ ಇದೆ. ಹೀಗಾಗಿ ತಹಶೀಲ್ದಾರ್ ನೋಟಿಸ್ ಕೊಟ್ಟು ರಿ ಸರ್ವೆ ಆಗಬೇಕು. ಇದಕ್ಕೆ ಎರಡರಿಂದ ಮೂರು ದಿನ ಹಿಡಿಯಬಹುದು. ತಹಶೀಲ್ದಾರ್ ನಮಗೆ ಆದೇಶ ನೀಡಿದ ತಕ್ಷಣ ದೊಡ್ಡ ಕಟ್ಟಡಗಳನ್ನೂ ತೆರವು ಮಾಡುತ್ತೇವೆ. ಇದಕ್ಕೆ ಮೂರು ದಿನಗಳಾಗಬಹುದು. ಅದು ಬಿಟ್ಟು ನಾವು ಏಕಾಏಕಿ ಒಡೆದುಹಾಕಲು ಸಾಧ್ಯವಿಲ್ಲ. ಇವತ್ತು ನಾಳೆ ಎಲ್ಲೆಲ್ಲಿ ಅಡ್ಡಿ ಇಲ್ಲವೋ ಅಲ್ಲೆಲ್ಲಾ ತೆರವು ಮಾಡುತ್ತೇವೆ ಎಂದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Mon, 10 October 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ