AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ

Bengaluru – Ernakulam Vande Bharat Express; ಬೆಂಗಳೂರು ಮತ್ತು ಕೇರಳದ ಎರ್ನಾಕುಲಂ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಬುಧವಾರದಿಂದ ಕಾರ್ಯಾರಂಭ ಮಾಡಲಿದೆ. ರೈಲು ಹೊರಡುವ ಸಮಯ, ತಲುಪುವ ಸಮಯ, ಯಾವ ದಿನಗಳಲ್ಲಿ ಸೇವೆ ಲಭ್ಯವಿದೆ ಇತ್ಯಾದಿ ಮಾಹಿತಿ ಇಲ್ಲಿದೆ.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ
ವಂದೇ ಭಾರತ್ ಎಕ್ಸ್‌ಪ್ರೆಸ್Image Credit source: Getty Images
ಗಣಪತಿ ಶರ್ಮಾ
|

Updated on: Jul 29, 2024 | 9:18 AM

Share

ಬೆಂಗಳೂರು, ಜುಲೈ 29: ಭಾರತೀಯ ರೈಲ್ವೇಯು ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಜುಲೈ 31 ರಂದು ಪ್ರಾರಂಭಿಸಲು ಸಜ್ಜಾಗಿದೆ. ಇದರಿಂದ ಕರ್ನಾಟಕ, ಅದರಲ್ಲೂ ಬೆಂಗಳೂರಿನ ಹಾಗೂ ಕೇರಳ ಪ್ರಯಾಣಿಕರಿಗೆ ಬಹಳ ಪ್ರಯೋಜನವಾಗಲಿದೆ. ಈ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ವಾರಕ್ಕೆ ಮೂರು ಬಾರಿ ಉಭಯ ನಗರಗಳ ಮಧ್ಯೆ ಸಂಚರಿಸಲಿದೆ. ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ನೀಡುವುದು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೈಲು ಆರಂಭಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

8 ಕೋಚ್​​ಗಳ ವಿಶೇಷ ರೈಲು

ರೈಲ್ವೆ ಇಲಾಖೆ ಮೂಲಗಳ ಪ್ರಕಾರ, ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಟು ಕೋಚ್‌ಗಳನ್ನು ಹೊಂದಿರಲಿದೆ. ಇದು ಸೆಮಿ-ಹೈ-ಸ್ಪೀಡ್ ರೈಲು ಆಗಿರುತ್ತದೆ.

ರೈಲು ಹೊರಡುವ, ತಲುಪುವ ಸಮಯ ವಿವರ

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಎರ್ನಾಕುಲಂ ಜಂಕ್ಷನ್‌ನಿಂದ (ERS) ಮಧ್ಯಾಹ್ನ 12:50 ಕ್ಕೆ ಪ್ರಯಾಣವನ್ನು ಆರಂಭಿಸಿ ರಾತ್ರಿ 10 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ತಲುಪಲಿದೆ. ರೈಲು ಬೆಂಗಳೂರಿನಿಂದ ಬೆಳಗ್ಗೆ 5:30ಕ್ಕೆ ಹೊರಟು 2.20 ಕ್ಕೆ ಎರ್ನಾಕುಲಂ ತಲುಪಲಿದೆ.

ಯಾವಗಲೆಲ್ಲ ವಂದೇ ಭಾರತ್ ಸಂಚಾರ?

ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಸೇವೆ ಎರ್ನಾಕುಲಂನಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ಪ್ರತಿ ವಾರ ಲಭ್ಯವಾಗಲಿದೆ. ಬೆಂಗಳೂರಿನಿಂದ ಪ್ರತಿ ವಾರ ಗುರುವಾರ, ಶನಿವಾರ ಮತ್ತು ಸೋಮವಾರ ಲಭ್ಯವಿರುತ್ತವೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ತ್ರಿಶೂರ್, ತಿರುಪುರ್, ಪಾಲಕ್ಕಾಡ್, ಪೊಡನ್ನೂರ್, ಈರೋಡ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಸೇಲಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ