AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ

Bengaluru – Ernakulam Vande Bharat Express; ಬೆಂಗಳೂರು ಮತ್ತು ಕೇರಳದ ಎರ್ನಾಕುಲಂ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಬುಧವಾರದಿಂದ ಕಾರ್ಯಾರಂಭ ಮಾಡಲಿದೆ. ರೈಲು ಹೊರಡುವ ಸಮಯ, ತಲುಪುವ ಸಮಯ, ಯಾವ ದಿನಗಳಲ್ಲಿ ಸೇವೆ ಲಭ್ಯವಿದೆ ಇತ್ಯಾದಿ ಮಾಹಿತಿ ಇಲ್ಲಿದೆ.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ
ವಂದೇ ಭಾರತ್ ಎಕ್ಸ್‌ಪ್ರೆಸ್Image Credit source: Getty Images
ಗಣಪತಿ ಶರ್ಮಾ
|

Updated on: Jul 29, 2024 | 9:18 AM

Share

ಬೆಂಗಳೂರು, ಜುಲೈ 29: ಭಾರತೀಯ ರೈಲ್ವೇಯು ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಜುಲೈ 31 ರಂದು ಪ್ರಾರಂಭಿಸಲು ಸಜ್ಜಾಗಿದೆ. ಇದರಿಂದ ಕರ್ನಾಟಕ, ಅದರಲ್ಲೂ ಬೆಂಗಳೂರಿನ ಹಾಗೂ ಕೇರಳ ಪ್ರಯಾಣಿಕರಿಗೆ ಬಹಳ ಪ್ರಯೋಜನವಾಗಲಿದೆ. ಈ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ವಾರಕ್ಕೆ ಮೂರು ಬಾರಿ ಉಭಯ ನಗರಗಳ ಮಧ್ಯೆ ಸಂಚರಿಸಲಿದೆ. ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ನೀಡುವುದು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೈಲು ಆರಂಭಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

8 ಕೋಚ್​​ಗಳ ವಿಶೇಷ ರೈಲು

ರೈಲ್ವೆ ಇಲಾಖೆ ಮೂಲಗಳ ಪ್ರಕಾರ, ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಟು ಕೋಚ್‌ಗಳನ್ನು ಹೊಂದಿರಲಿದೆ. ಇದು ಸೆಮಿ-ಹೈ-ಸ್ಪೀಡ್ ರೈಲು ಆಗಿರುತ್ತದೆ.

ರೈಲು ಹೊರಡುವ, ತಲುಪುವ ಸಮಯ ವಿವರ

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಎರ್ನಾಕುಲಂ ಜಂಕ್ಷನ್‌ನಿಂದ (ERS) ಮಧ್ಯಾಹ್ನ 12:50 ಕ್ಕೆ ಪ್ರಯಾಣವನ್ನು ಆರಂಭಿಸಿ ರಾತ್ರಿ 10 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ತಲುಪಲಿದೆ. ರೈಲು ಬೆಂಗಳೂರಿನಿಂದ ಬೆಳಗ್ಗೆ 5:30ಕ್ಕೆ ಹೊರಟು 2.20 ಕ್ಕೆ ಎರ್ನಾಕುಲಂ ತಲುಪಲಿದೆ.

ಯಾವಗಲೆಲ್ಲ ವಂದೇ ಭಾರತ್ ಸಂಚಾರ?

ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಸೇವೆ ಎರ್ನಾಕುಲಂನಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ಪ್ರತಿ ವಾರ ಲಭ್ಯವಾಗಲಿದೆ. ಬೆಂಗಳೂರಿನಿಂದ ಪ್ರತಿ ವಾರ ಗುರುವಾರ, ಶನಿವಾರ ಮತ್ತು ಸೋಮವಾರ ಲಭ್ಯವಿರುತ್ತವೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ತ್ರಿಶೂರ್, ತಿರುಪುರ್, ಪಾಲಕ್ಕಾಡ್, ಪೊಡನ್ನೂರ್, ಈರೋಡ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಸೇಲಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?