Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ

Bengaluru – Ernakulam Vande Bharat Express; ಬೆಂಗಳೂರು ಮತ್ತು ಕೇರಳದ ಎರ್ನಾಕುಲಂ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಬುಧವಾರದಿಂದ ಕಾರ್ಯಾರಂಭ ಮಾಡಲಿದೆ. ರೈಲು ಹೊರಡುವ ಸಮಯ, ತಲುಪುವ ಸಮಯ, ಯಾವ ದಿನಗಳಲ್ಲಿ ಸೇವೆ ಲಭ್ಯವಿದೆ ಇತ್ಯಾದಿ ಮಾಹಿತಿ ಇಲ್ಲಿದೆ.

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್​​​ಪ್ರೆಸ್​​ ಬುಧವಾರದಿಂದ ಆರಂಭ; ಇಲ್ಲಿದೆ ರೈಲಿನ ಸಮಯ, ವೇಳಾಪಟ್ಟಿ
ವಂದೇ ಭಾರತ್ ಎಕ್ಸ್‌ಪ್ರೆಸ್Image Credit source: Getty Images
Follow us
Ganapathi Sharma
|

Updated on: Jul 29, 2024 | 9:18 AM

ಬೆಂಗಳೂರು, ಜುಲೈ 29: ಭಾರತೀಯ ರೈಲ್ವೇಯು ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಜುಲೈ 31 ರಂದು ಪ್ರಾರಂಭಿಸಲು ಸಜ್ಜಾಗಿದೆ. ಇದರಿಂದ ಕರ್ನಾಟಕ, ಅದರಲ್ಲೂ ಬೆಂಗಳೂರಿನ ಹಾಗೂ ಕೇರಳ ಪ್ರಯಾಣಿಕರಿಗೆ ಬಹಳ ಪ್ರಯೋಜನವಾಗಲಿದೆ. ಈ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ವಾರಕ್ಕೆ ಮೂರು ಬಾರಿ ಉಭಯ ನಗರಗಳ ಮಧ್ಯೆ ಸಂಚರಿಸಲಿದೆ. ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ನೀಡುವುದು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ರೈಲು ಆರಂಭಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

8 ಕೋಚ್​​ಗಳ ವಿಶೇಷ ರೈಲು

ರೈಲ್ವೆ ಇಲಾಖೆ ಮೂಲಗಳ ಪ್ರಕಾರ, ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಟು ಕೋಚ್‌ಗಳನ್ನು ಹೊಂದಿರಲಿದೆ. ಇದು ಸೆಮಿ-ಹೈ-ಸ್ಪೀಡ್ ರೈಲು ಆಗಿರುತ್ತದೆ.

ರೈಲು ಹೊರಡುವ, ತಲುಪುವ ಸಮಯ ವಿವರ

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಎರ್ನಾಕುಲಂ ಜಂಕ್ಷನ್‌ನಿಂದ (ERS) ಮಧ್ಯಾಹ್ನ 12:50 ಕ್ಕೆ ಪ್ರಯಾಣವನ್ನು ಆರಂಭಿಸಿ ರಾತ್ರಿ 10 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ತಲುಪಲಿದೆ. ರೈಲು ಬೆಂಗಳೂರಿನಿಂದ ಬೆಳಗ್ಗೆ 5:30ಕ್ಕೆ ಹೊರಟು 2.20 ಕ್ಕೆ ಎರ್ನಾಕುಲಂ ತಲುಪಲಿದೆ.

ಯಾವಗಲೆಲ್ಲ ವಂದೇ ಭಾರತ್ ಸಂಚಾರ?

ವಂದೇ ಭಾರತ್ ಎಕ್ಸ್​ಪ್ರೆಸ್ ವಿಶೇಷ ರೈಲು ಸೇವೆ ಎರ್ನಾಕುಲಂನಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರದಂದು ಪ್ರತಿ ವಾರ ಲಭ್ಯವಾಗಲಿದೆ. ಬೆಂಗಳೂರಿನಿಂದ ಪ್ರತಿ ವಾರ ಗುರುವಾರ, ಶನಿವಾರ ಮತ್ತು ಸೋಮವಾರ ಲಭ್ಯವಿರುತ್ತವೆ.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರೈಲು ಸಂಚಾರ ಸದ್ಯಕ್ಕೆ ಅನುಮಾನ: ರೈಲ್ವೆ ಇಲಾಖೆ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ತ್ರಿಶೂರ್, ತಿರುಪುರ್, ಪಾಲಕ್ಕಾಡ್, ಪೊಡನ್ನೂರ್, ಈರೋಡ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಸೇಲಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ