AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪರ್ಸ್ ಹುಡುಕಲು ನೆರವಾಗಲಿಲ್ಲವೆಂದು ಬಾಂಬ್ ಬೆದರಿಕೆ ಕರೆ ಮಾಡಿದ ವಿಮಾನ ಪ್ರಯಾಣಿಕ ಅರೆಸ್ಟ್

Bomb Threat: ಎಸ್​​​ಜಿ 8536 ಸಂಖ್ಯೆಯ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಚಾರ್ಮಿಯಾ ಕೃತಿಯಸಗಿದ್ದಾನೆ. ವಿಮಾನದಲ್ಲಿ ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿಯು ಕೃತ್ಯ ಎಸಗಿದ್ದಾನೆ.

ಬೆಂಗಳೂರು: ಪರ್ಸ್ ಹುಡುಕಲು ನೆರವಾಗಲಿಲ್ಲವೆಂದು ಬಾಂಬ್ ಬೆದರಿಕೆ ಕರೆ ಮಾಡಿದ ವಿಮಾನ ಪ್ರಯಾಣಿಕ ಅರೆಸ್ಟ್
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
TV9 Web
| Edited By: |

Updated on: Dec 30, 2023 | 4:59 PM

Share

ಬೆಂಗಳೂರು, ಡಿಸೆಂಬರ್ 30: ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ವಿಮಾನ ಪ್ರಯಾಣಿಕನೊಬ್ಬ ವಿಮಾನಯಾನ ಸಂಸ್ಥೆಯ ಕಾಲ್ ಸೆಂಟರ್​​​ಗೆ ಬಾಂಬ್​ ಬೆದರಿಕೆ (Bomb Threat) ಕರೆ ಮಾಡಿದ ವಿದ್ಯಮಾನ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಆರೋಪಿ ಜೈಲು ಪಾಲಾಗಿದ್ದಾನೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಕಾಲ್ ಸೆಂಟರ್​​​ಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕಳೆದ 26ರಂದು ಬೆದರಿಕೆ ಕರೆ ಬಂದಿತ್ತು. ಬಂಧಿತ ಆರೋಪಿಯನ್ನು ಶ್ರೇಯಸ್ ಚಾರ್ಮಿಯಾ ಎಂದು ಗುರುತಿಸಲಾಗಿದೆ.

ಎಸ್​​​ಜಿ 8536 ಸಂಖ್ಯೆಯ ಸ್ಪೈಸ್ ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಚಾರ್ಮಿಯಾ ಕೃತಿಯಸಗಿದ್ದಾನೆ. ವಿಮಾನದಲ್ಲಿ ಪರ್ಸ್ ಹುಡುಕಲು ಸಹಕರಿಸಲಿಲ್ಲ ಎಂಬ ಕಾರಣಕ್ಕೆ ಆರೋಪಿಯು ಕೃತ್ಯ ಎಸಗಿದ್ದಾನೆ. ಆರೋಪಿ ಶ್ರೇಯಸ್ ಚಾರ್ಮಿಯಾ ವಿರುದ್ಧ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ಹುಸಿ ಬಾಂಬ್ ಬೆದರಿಕೆ ಕರೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಬೆಂಗಳೂರಿನ ಸುಮಾರು 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದವು. ಇದಾದ ಕೆಲವೇ ದಿನಗಳಲ್ಲಿ ರಾಜಭವನಕ್ಕೆ ವ್ಯಕ್ತಿ ಒಬ್ಬ ಬಾಂಬ್ ಬೆದರಿಕೆ ಕರೆ ಮಾಡಿದ್ದ. ರಾಷ್ಟ್ರೀಯ ತನಿಖಾ ಸಂಸ್ಥೆಯ ಬಗ್ಗೆ ಮಾಹಿತಿ ಕೇಳಿದ್ದೆ, ಹೀಗಾಗಿ ಪರಿಶೀಲಿಸೋಣವೆಂದು ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಗಿ ತನಿಖೆ ವೇಳೆ ಆರೋಪಿ ಬಾಯಿಬಿಟ್ಟಿದ್ದ. ಈ ಮಧ್ಯೆ, ಕೆಲಸದಿಂದ ತೆಗೆದುಹಾಕಿದ್ದಕ್ಕೆ ಯುವತಿ ಒಬ್ಬಳು ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ