AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಪರಕ್ಕೆ ಅವಕಾಶ ಕೊಡದ ಹಿನ್ನೆಲೆ ಬೇಸರ; ಹೂಗಳನ್ನು ಕಸಕ್ಕೆ ಎಸೆದು ಆಕ್ರೋಶ ಹೊರಹಾಕಿದ ವ್ಯಾಪರಸ್ಥರು

ಮದುವೆ ಇಲ್ಲ, ದೇವಸ್ಥಾನ ಇಲ್ಲ, ಯಾವುದೇ ಸಮಾರಂಭ ಇಲ್ಲ. ಸತ್ತವರ ಪೂಜೆಗೆ ಮಾತ್ರ ಬೇಕಾಗುವಷ್ಟು ಹೂವನ್ನು ವ್ಯಾಪಾರಿಗಳು ತಂದಿದ್ದರು. ಹೀಗಿದ್ದರೂ ಮಾರಟಕ್ಕೆ ಕಡಿಮೆ ಅವಧಿ ನಿಗದಿ ಹಿನ್ನಲೆಯಲ್ಲಿ ಹೂವುಗಳು ಬಾಡಿ ಹೋಗಿದೆ. ಇದರಿಂದ ಬೇಸರಗೊಂಡ ಹೂವಿನ ವ್ಯಾಪಾರಿಗಳು ವ್ಯಾಪಾರಕ್ಕೆ ತಂದ ಹೂಗಳನ್ನು ಕಸಕ್ಕೆ ಎಸೆದಿದ್ದಾರೆ.

ವ್ಯಾಪರಕ್ಕೆ ಅವಕಾಶ ಕೊಡದ ಹಿನ್ನೆಲೆ ಬೇಸರ; ಹೂಗಳನ್ನು ಕಸಕ್ಕೆ ಎಸೆದು ಆಕ್ರೋಶ ಹೊರಹಾಕಿದ ವ್ಯಾಪರಸ್ಥರು
ಹೂವುಗಳನ್ನು ರಸ್ತೆ ಬದಿಗೆ ಎಸೆದಿರುವ ದೃಶ್ಯ
preethi shettigar
|

Updated on:May 11, 2021 | 10:30 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಇಡೀ ದೇಶವೇ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸುಧಾರಿಸಲು ಲಾಕ್​ಡೌನ್ ಘೋಷಣೆ ಮಾಡಿದೆ. ಆದರೆ ಇದರಿಂದ ನಿತ್ಯ ದುಡಿದು ಜೀವನ ನಡೆಸುತ್ತಿದ್ದ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಅದರಲ್ಲೂ ಬೆಂಗಳೂರಿನ ಹೂವಿನ ವ್ಯಾಪಾರಿಗಳ ಸ್ಥಿತಿ ತೀರ ಹದಗೆಟ್ಟಿದ್ದು, ಟಿವಿ9 ಬಳಿ ಆಕ್ರೋಶದ ಕಣ್ಣೀರು ಹೊರ ಹಾಕಿದ್ದಾರೆ.

ದಿನದ ವ್ಯಾಪಾರ ಮಾಡಿ ಬದುಕು ಮಾಡೊಕೆ ಕಷ್ಟವಾಗುತ್ತಿದೆ. ಮಕ್ಕಳ ವಿದ್ಯಾಬ್ಯಾಸ ಹೊಯ್ತು, ಹೊದರೆ ಹೊಗಲಿ ಬಿಡಿ. ಆದರೆ ಮೂರು‌ ಹೊತ್ತಿನ ಊಟಕ್ಕೆ ನಾವು ಏನು ಮಾಡಬೇಕು. ಕೊರೊನಾ ಸೊಂಕಿತರು ನೂರಾರು ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. ಮೃತರ ಪೂಜೆಗೆ ಹೂ ಅಗತ್ಯವಾಗಿದೆ. ಅದನ್ನು ಮಾರಟ ಮಾಡಲು ಹೆಚ್ಚಿನ ಸಮಯ ಕೊಡಿ. ನಾವು ಬೆಳಿಗ್ಗೆಯೇ ಹೂಗಳನ್ನು ತರುತ್ತೇವೆ. ತಂದು ಇಟ್ಟ ಕೆಲವೇ ಗಂಟೆಯಲ್ಲಿ ಮುಚ್ಚಿಸುತ್ತೀರಿ. ಹೀಗೆ ಮಾಡಿದರೆ ನಮ್ಮ ಬದುಕು ಹೇಗೆ? ಮಕ್ಕಳ ವಿದ್ಯಾಬ್ಯಾಸ, ಊಟ, ಮನೆ ಬಾಡಿಗೆ ಹೇಗೆ ನೊಡೊದು. ಸರ್ಕಾರ ಲಾಕ್​ಡೌನ್ ಮಾಡಲಿ. ಆದರೆ ನಮ್ಮಂತವರ ಕಡೆ ಸ್ವಲ್ಪ ಗಮನ ಹರಿಸಲಿ ಎಂದು ಹೂವಿನ ವ್ಯಾಪಾರಿ ರಾಮು ಅಳಲು ತೋಡಿಕೊಂಡಿದ್ದಾರೆ.

ವ್ಯಾಪಾರ ಇಲ್ಲದೆ ತಂದ ಹೂಗಳನ್ನು ಕಸಕ್ಕೆ ಎಸೆದ ವ್ಯಾಪಾರಿಗಳು ಮದುವೆ ಇಲ್ಲ, ದೇವಸ್ಥಾನ ಇಲ್ಲ, ಯಾವುದೇ ಸಮಾರಂಭ ಇಲ್ಲ. ಸತ್ತವರ ಪೂಜೆಗೆ ಮಾತ್ರ ಬೇಕಾಗುವಷ್ಟು ಹೂವನ್ನು ವ್ಯಾಪಾರಿಗಳು ತಂದಿದ್ದರು. ಹೀಗಿದ್ದರೂ ಮಾರಟಕ್ಕೆ ಕಡಿಮೆ ಅವಧಿ ನಿಗದಿ ಹಿನ್ನಲೆಯಲ್ಲಿ ಹೂವುಗಳು ಬಾಡಿ ಹೋಗಿದೆ. ಇದರಿಂದ ಬೇಸರಗೊಂಡ ಹೂವಿನ ವ್ಯಾಪಾರಿಗಳು ವ್ಯಾಪಾರಕ್ಕೆ ತಂದ ಹೂಗಳನ್ನು ಕಸಕ್ಕೆ ಎಸೆದಿದ್ದಾರೆ.

ಇದನ್ನೂ ಓದಿ:

Sanitiser: ಕೊರೊನಾ ಆತಂಕ ನಿವಾರಣೆಗೂ ಮೊದಲೇ ಪಾತಾಳಕ್ಕಿಳಿದ ಸ್ಯಾನಿಟೈಸರ್​​ ವ್ಯಾಪಾರ, ಮಾಸ್ಕ್​ ಮಾರಾಟವೂ ಕುಸಿತ

ದ್ವಿಚಕ್ರ ವಾಹನದಲ್ಲಿ ಮೀನು ಮಾರಾಟಕ್ಕೆ ಅವಕಾಶ; ಮಹಿಳಾ ವ್ಯಾಪಾರಿಗಳಲ್ಲಿ ಹೆಚ್ಚಿದ ಆತಂಕ

Published On - 10:28 am, Tue, 11 May 21

Follow Us
preethi shettigar
preethi shettigar
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು