AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದು ಆಗುತ್ತಿರುವ ಈ ಆಹಾರ ಪದಾರ್ಥ ತಿಂದರೆ ನಿಮ್ಮ ಆರೋಗ್ಯಕ್ಕೆ ಅಪಾಯ

ಬೆಂಗಳೂರಿನ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಕೇರಳದಿಂದ ಆಮದು ಆಗುವ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಪತ್ತೆ ಹಚ್ಚಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಈ ಎಲ್ಲಾ ಅಪಾಯಕಾರಿ ಪದಾರ್ಥಗಳ ಉತ್ಪಾದನಾ ಘಟಕಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.

ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದು ಆಗುತ್ತಿರುವ ಈ ಆಹಾರ ಪದಾರ್ಥ ತಿಂದರೆ ನಿಮ್ಮ ಆರೋಗ್ಯಕ್ಕೆ ಅಪಾಯ
ಅಧಿಕಾರಿಗಳಿಂದ ಪರಿಶೀಲನೆ
Vinay Kashappanavar
| Edited By: |

Updated on:Nov 09, 2024 | 8:45 AM

Share

ಬೆಂಗಳೂರು, ನವೆಂಬರ್​ 9: ಬೀದಿ ಬದಿ ಮಾರುವ ಮತ್ತು ಹೊರ ರಾಜ್ಯದಿಂದ ಆಮದು ಆಗುವ ಆಹಾರ ಪದಾರ್ಥಗಳನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (Food Safety Department) ನಿರಂತರವಾಗಿ ಪರೀಕ್ಷೆ ನಡೆಸುತ್ತಿದೆ. ಈಗಾಗಲೆ ಗೋಬಿ, ಪಾನಿಪುರಿ ಸೇರಿದಂತೆ ಅನೇಕ ತಿನಿಸುಗಳಿಗೆ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತವೆ ಎಂದು ತಿಳಿಸಿದೆ. ಇದೀಗ, ಕೇರಳದಿಂದ ಆಮದು ಆಗುವ ಖಾರಾ ಮಿಕ್ಚರ್​, ಚಿಪ್ಸ್​, ಹಲ್ವಾ, ಮುರುಕು, ರಸ್ಕ್​, ಡ್ರೈ ಫ್ರೂಟ್ಸ್​​ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಸಲಾಗುತ್ತಿದೆ. ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ಇಲಾಖೆ ತಿಳಿಸಿದೆ.

ಕಳೆದ ಮೂರು ತಿಂಗಳುಗಳಲ್ಲಿ ಕೇರಳದಿಂದ ರಾಜ್ಯದ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲಿ ಮಾರಾಟವಾಗುತ್ತಿದ್ದ ಖಾರಾ ಮಿಕ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈ ಫೂಟ್ಸ್​ಗಳು, ಸಿಹಿತಿಂಡಿಗಳು ಸೇರಿದಂತೆ ಹಲವು ವಿಧದ ಆಹಾರ ಪದಾರ್ಥಗಳ 90 ಮಾದರಿಗಳನ್ನು ಸಂಗ್ರಹಿಸಿ ಇಲಾಖೆ ಪರಿಶೀಲನೆ ನಡೆಸಿದೆ.

ಅವುಗಳಲ್ಲಿ 31 ಮಾದರಿಗಳಿಗೆ Alura Red, Carmoisine, Tartrazine, Sunset Yellow ಸೇರಿದಂತೆ ಕೃತಕ ಬಣ್ಣಗಳನ್ನು ಬಳಸಿರುವುದು ವಿಶ್ಲೇಷಣಾ ಫಲಿತಾಂಶದಲ್ಲಿ ಖಚಿವಾಗಿದೆ. ಅಲ್ಲದೇ, ಹಲವಾರು ಆಹಾರ ಪದಾರ್ಥಗಳ ಪೊಟ್ಟಣಗಳ ಮೇಲೆ ತಯಾರಿಕಾ ದಿನಾಂಕ, ತಯಾರಿಕೆ ಮಾಡುವವರ ವಿವರಗಳು ಇಲ್ಲದೆ ಇರುವುದು, ತಯಾರಿಕಾ ದಿನಾಂಕವನ್ನು ನಮೂದು ನೊಂದಣಿ/ಪರವಾನಿಗೆ ಸಂಖ್ಯೆ ಮುದ್ರಿತವಾಗಿಲ್ಲ.

ಈ ಎಲ್ಲ ಪದಾರ್ಥಗಳು ಆರೋಗ್ಯಕ್ಕೆ ಹಾನಿಕಾರಕ. ಹೀಗಾಗಿ, ಈ ಪದಾರ್ಥಗಳನ್ನು ತಯಾರಿಸುವ ತಯಾರಿಕ ಘಟಕಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಗಣಮಟ್ಟ ಇಲಾಖೆ ಆಯುಕ್ತರಿಗೆ ಮತ್ತು ಕೇರಳ ರಾಜ್ಯ ಸರ್ಕಾರಕ್ಕೆ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಬಂದಿದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್: ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಅಲ್ಲದೇ, ಚೀನಾದಿಂದ ಆಮದು ಆಗುತ್ತಿದೆ ಎಂದು ಹೇಳಲಾದ ಬೆಳ್ಳುಳ್ಳಿಗಳನ್ನೂ ಇಲಾಖೆ ಪರಿಶೀಲನೆ ನಡೆಸಿ ವರದಿ ನೀಡಿದೆ. ಹಾಗೇ, ದೀಪಾವಳಿ ಸಂದರ್ಭದಲ್ಲಿ ಮಾರಾಟವಾದ ಸಿಹಿ ತಿಂಡಿಗಳನ್ನೂ ಕೂಡ ಇಲಾಖೆ ಪರೀಕ್ಷಿಸಿ ವರದಿ ನೀಡಿದೆ.

ಚೀನಾದ ಬೆಳ್ಳುಳ್ಳಿ ಅನ್​ ಸೇಫ್​

ಚೀನಾ ದೇಶದಿಂದ ಸರಬರಾಜಾಗುತ್ತಿರುವುದಾಗಿ ಹೇಳಲಾದ ಕೃತಕ ಅಥವಾ ನಿಷೇಧಿತ ಬೆಳ್ಳುಳ್ಳಿಯು ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆ ವಿಶೇಷ ಆಂದೋಲನ ಕೈಗೊಂಡು, ರಾಜ್ಯಾದ್ಯಂತ 154 ಬೆಳ್ಳುಳ್ಳಿ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಿತು.

147 ಮಾದರಿಗಳಲ್ಲಿ ಸುರಕ್ಷಿತ ಮತ್ತು 07 ಮಾದರಿಗಳಲ್ಲಿ ಫಂಗಸ್​ ಬೆಳವಣಿಗೆಯಾಗಿದ್ದು, ಕೊಳೆತಿದ್ದ ಹಿನ್ನೆಲೆಯಲ್ಲಿ ಅಸುರಕ್ಷಿತ ಎಂದು ವರದಿ ನೀಡಿದೆ.

ಸಿಹಿ ತಿಂಡಿಗಳಲ್ಲಿ ಕೃತಕ ಬಣ್ಣ ಬಳಕೆ

ದೀಪಾವಳಿ ಹಬ್ಬದ ಸಮಯದಲ್ಲಿ ಹೆಚ್ಚಿನ ಸಿಹಿ ತಿಂಡಿಗಳು ಮಾರಾಟವಾಗುವ ಹಿನ್ನೆಲೆಯಲ್ಲಿ 151 ಸಿಹಿ ತಿಂಡಿಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಯಿತು. ಇದರಲ್ಲಿ 143 ಮಾದರಿಗಳು ಸುರಕ್ಷಿತ ಮತ್ತು 09 ಮಾದರಿಗಳಲ್ಲಿ ಕೃತಕ ಬಣ್ಣಗಳ ಬಳಕೆ ಕಂಡುಬಂದಿದ್ದು ಅಸುರಕ್ಷಿತ ಎಂದು ವರದಿ ನೀಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Sat, 9 November 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ