Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಸಿಎಂ ಭರವಸೆ ಬಳಿಕ ಕಸದ ಲಾರಿ ಹಾಗೂ ಆಟೋ ಚಾಲಕರ ಮುಷ್ಕರ ವಾಪಸ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಭರವಸೆ ಮೇರೆಗೆ ಕಸದ ಲಾರಿ ಹಾಗೂ ಆಟೋ ಚಾಲಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ ವಿಲೇವಾರಿ ಮಾಡುವ ವಾಹನಗಳ ಚಾಲಕರು ಮತ್ತು ಸಹಾಯಕರು ತಮ್ಮ ಸೇವೆಯನ್ನು ಬಿಬಿಎಂಪಿಯಲ್ಲಿ ಕಾಯಂ ವಿಲೀನ ಮಾಡಿಕೊಳ್ಳುವಂತೆ ಆಗ್ರಹಿಸಿ ಸೋಮವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಬೆಂಗಳೂರು: ಡಿಸಿಎಂ ಭರವಸೆ ಬಳಿಕ ಕಸದ ಲಾರಿ ಹಾಗೂ ಆಟೋ ಚಾಲಕರ ಮುಷ್ಕರ ವಾಪಸ್
ಡಿಕೆ ಶಿವಕುಮಾರ್Image Credit source: Times Of India
Follow us
ಶಾಂತಮೂರ್ತಿ
| Updated By: ನಯನಾ ರಾಜೀವ್

Updated on:Dec 04, 2024 | 8:58 AM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಭರವಸೆ ಮೇರೆಗೆ ಕಸದ ಲಾರಿ ಹಾಗೂ ಆಟೋ ಚಾಲಕರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಮನೆ ಮನೆಗಳಿಂದ ಕಸ ಸಂಗ್ರಹಿಸುವ ಹಾಗೂ ವಿಲೇವಾರಿ ಮಾಡುವ ವಾಹನಗಳ ಚಾಲಕರು ಮತ್ತು ಸಹಾಯಕರು ತಮ್ಮ ಸೇವೆಯನ್ನು ಬಿಬಿಎಂಪಿಯಲ್ಲಿ ಕಾಯಂ ವಿಲೀನ ಮಾಡಿಕೊಳ್ಳುವಂತೆ ಆಗ್ರಹಿಸಿ ಸೋಮವಾರದಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಪಿಡಿ ಸಾಲಪ್ಪನವರ ವರದಿ ಜಾರಿಗೊಳಿಸಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಮತ್ತು ರಾಹುಲ್‌ ಗಾಂಧಿಯವರು ನೀಡಿದ ಭರವಸೆಯಂತೆ ಚಾಲಕರು, ಸಹಾಯಕರು, ಲೋಡರ್ಸ್‌ಗಳ ಸೇವೆಯನ್ನು ಕಾಯಂ ವಿಲೀನಗೊಳಿಸಬೇಕು ಎಂದು ಹೇಳಿದ್ದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಕರ್ನಾಟಕ ಸಂರಕ್ಷಣಾ ಟ್ರೇಡ್ ಯೂನಿಯನ್ ಸಂಘಟನೆಯಡಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೋರಾಟದಿಂದ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗಿತ್ತು. ಸಾವಿರ ಟನ್​ಗೂ ಹೆಚ್ಚಿನ ಕಸ ವಿಲೇವಾರಿಯಾಗಿರಲಿಲ್ಲ. ಬುಧವಾರದಿಂದ ಕಸ ಸಂಗ್ರಹ ವಿಲೇವಾರಿ ಕೆಲಸ ಆರಂಭಿಸುವುದಾಗಿ ಮುಖಂಡರು ಹೇಳಿದ್ದಾರೆ.

ಮತ್ತಷ್ಟು ಓದಿ: ಕೆಎಸ್​​ಆರ್​ಟಿಸಿ, ಬಿಎಂಟಿಸಿ ನೌಕರರ ಮುಷ್ಕರಕ್ಕೆ ದಿನಾಂಕ ನಿಗದಿ: ಬಸ್ ಸಂಚಾರ ಬಂದ್ ಯಾವಾಗಿನಿಂದ ನೋಡಿ

ನಿನ್ನೆ ಸಂಜೆ ವೇಳೆ ಪೊಲೀಸ್​ ಅಧಿಕಾರಿಗಳ ಮೂಲಕ ಪುನಃ ದೂರವಾಣಿ ಕರೆ ಮಾಡಿದ ಡಿಕೆ ಶಿವಕುಮಾರ್ ಅವರು ಸ್ಪಷ್ಟ ಭರವಸೆ ನೀಡಿದ ಬಳಿಕ ಧರಣಿಯನ್ನು ಹಿಂಪಡೆದಿದ್ದಾರೆ. ನಮ್ಮ ಸರ್ಕಾರ ಪೌರಾಡಳಿತ ಇಲಾಖೆ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸಾಕಷ್ಟು ಪರಿಹಾರಗಳನ್ನು ನೀಡಿದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲಾ ಸಂಘಟನೆಗಳೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

55 ವರ್ಷ ತುಂಬಿದ ಪೌರಕಾರ್ಮಿಕರ ಸೇವೆಯನ್ನು ಅನುಭವದ ಆಧಾರದಲ್ಲಿ ಕಾಯಂ ವಿಲೀನ ಮಾಡಬೇಕು. 500 ಜನರಿಗೆ ಒಬ್ಬ ಪೌರಕಾರ್ಮಿಕರಂತೆ 32 ಸಾವಿರ ಪೌರಕಾರ್ಮಿಕರನ್ನು ನೇರ ಪಾವತಿಯಡಿ ಹೊಸದಾಗಿ ಕೆಲಸಕ್ಕೆ ನೇಮಿಸಬೇಕು ಎನ್ನುವ ಬೇಡಿಕೆಯೂ ಮುಂದಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:58 am, Wed, 4 December 24

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ