AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನನ್ನ ಮಗಳ ವಿಚಾರಕ್ಕೆ ಬರಬೇಡ ಎಂದಿದ್ದಕ್ಕೆ ಬಾಲಕಿ ತಂದೆಯ ಕೊಲೆ

ಪ್ರೀತಿಸುವಂತೆ ಮಗಳ ಹಿಂದೆ ಬಿದ್ದಿದ್ದ ವ್ಯಕ್ತಿಗೆ ಬುದ್ದಿವಾದ ಹೇಳಲು ಹೋದ ತಂದೆಯನ್ನೇ ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಂಜಪ್ಪ ಸರ್ಕಲ್ ಬಳಿ ನಡೆದಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನನ್ನ ಮಗಳ ವಿಚಾರಕ್ಕೆ ಬರಬೇಡ ಎಂದಿದ್ದಕ್ಕೆ ಬಾಲಕಿ ತಂದೆಯ ಕೊಲೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 03, 2023 | 7:13 AM

Share

ಬೆಂಗಳೂರು: ನನ್ನ ಮಗಳ (Daughter) ವಿಚಾರಕ್ಕೆ ಬರಬೇಡ ಎಂದು ಬುದ್ದಿ ಹೇಳಲು ಹೋಗಿದ್ದ ತಂದೆಯನ್ನೇ (Father) ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ (Police) ಠಾಣಾ ವ್ಯಾಪ್ತಿಯ ನಂಜಪ್ಪ ಸರ್ಕಲ್ ಬಳಿ ನಡೆದಿದೆ. ಅನ್ವರ್ ಹುಸೇನ್ ಕೊಲೆಯಾದ ವ್ಯಕ್ತಿ. ಝಹೀದ್ ಕೊಲೆಗೈದ ಆರೋಪಿ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲವು ದಿನಗಳಿಂದ ಆರೋಪಿ ಝಹೀದ್ ಪ್ರೀತಿಸುವಂತೆ 15 ವರ್ಷದ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದಿದ್ದನು. ಈ ವಿಚಾರವನ್ನು ಅಪ್ರಾಪ್ತ ಬಾಲಕಿ ತಂದೆ ಅನ್ವರ್ ಹುಸೇನ್​ ಬಳಿ ಹೇಳಿಕೊಂಡಿದ್ದಳು. ಹೀಗಾಗಿ ಅನ್ವರ್​ ಹುಸೇನ್​​ ಮೂರು ತಿಂಗಳ ಹಿಂದೆಯೇ ಆರೋಪಿ ಝಹೀದ್​​ಗೆ ಬುದ್ದಿ ಹೇಳಿದ್ದರು. ಆದರೂ ಮಾತು ಕೇಳದ ಝಹೀದ್ ಪ್ರೀತಿಸುವಂತೆ ಮತ್ತೆ ದುಂಬಾಲು ಬಿದ್ದಿದ್ದನು.

ಇದನ್ನೂ ಓದಿ: ಪ್ರೇಯಸಿಯ ಕತ್ತು ಕೊಯ್ದು ಕೊಂದು, ಅಂಬಾಲಿ ಘಾಟ್​​ನಲ್ಲಿ ಎಸೆದ ಪ್ರೇಮಿ

ಈ ವಿಚಾರವನ್ನು ಝಹೀದ್ ಅಣ್ಣ ಬಿಲಾಲ್ ಹಾಗೂ ಕುಟುಂಬಸ್ಥರಿಗೆ ತಿಳಿಸಲೆಂದು ನಿನ್ನೆ (ಸೆ.01) ರಾತ್ರಿ ಅನ್ವರ್​ ಹುಸೇನ್ ಆರೋಪಿಯ ಮನೆ ಬಳಿ ಹೋಗಿದ್ದಾರೆ. ಕುಟಂಬಸ್ಥರೊಂದಿಗೆ ಅನ್ವರ್​​ ಹುಸೇನ್​ ಮಾತನಾಡುತ್ತಿರುವಾಗಲೇ, ಝಹೀದ್ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಬಂದು ಏಕಾಏಕಿ ಅನ್ವರ್ ಹುಸೇನ್ ಕುತ್ತಿಗೆಗೆ ಇರಿದಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅನ್ವರ್​ ಹುಸೇನ್​​ರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅನ್ವರ್​ ಹುಸೇನ್ ಮೃತಪಟ್ಟಿದ್ದಾರೆ. ಇನ್ನು ಪ್ರಕರಣ ಸಂಬಂಧ ಝಹೀದ್ ಅಣ್ಣ ಬಿಲಾಲ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ತಲೆಮರಿಸಿಕೊಂಡಿರುವ ಅರೋಪಿ ಝಹೀದ್​ಗಾಗಿ ಹುಡಕಾಟ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Sun, 3 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!