AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನಗಳಲ್ಲಿ ಬೆಂಗಳೂರು, ಹೈದರಾಬಾದ್ ವಂದೇ ಭಾರತ್ ರೈಲು ಸಂಚಾರ ಆರಂಭ; ಎಲ್ಲೆಲ್ಲಿ ನಿಲುಗಡೆ? ಇಲ್ಲಿದೆ ವಿವರ

Bengaluru-Hyderabad Vande Bharat Express; ಈ ರೈಲು ಯಶವಂತಪುರದಿಂದ ಕಾಚೀಗುಡ ನಡುವಿನ 610 ಕಿ.ಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ. ದಕ್ಷಿಣ ಭಾರತದ ಎರಡು ಐಟಿ ನಗರಗಳ ನಡುವಿನ ರೈಲು ಪ್ರಯಾಣದ ಸಮಯವನ್ನು ಎರಡು ಗಂಟೆಗಳಷ್ಟು ಕಡಿಮೆ ಮಾಡಲಿದೆ. ಪ್ರಸ್ತುತ, ಎರಡು ನಗರಗಳ ನಡುವಿನ ವೇಗದ ರೈಲು ದುರಂತೊ ಎಕ್ಸ್‌ಪ್ರೆಸ್ ಆಗಿದೆ.

ಕೆಲವೇ ದಿನಗಳಲ್ಲಿ ಬೆಂಗಳೂರು, ಹೈದರಾಬಾದ್ ವಂದೇ ಭಾರತ್ ರೈಲು ಸಂಚಾರ ಆರಂಭ; ಎಲ್ಲೆಲ್ಲಿ ನಿಲುಗಡೆ? ಇಲ್ಲಿದೆ ವಿವರ
ವಂದೇ ಭಾರತ್ ರೈಲು
ಗಣಪತಿ ಶರ್ಮಾ
|

Updated on: Aug 21, 2023 | 2:41 PM

Share

ಬೆಂಗಳೂರು, ಆಗಸ್ಟ್ 21: ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ವಂದೇ ಭಾರತ್ ರೈಲು (Bengaluru Hyderabad Vande Bharat train) ಆಗಸ್ಟ್ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ ಈ ರೈಲು ಸೇಡಂ (Sedam), ರಾಯಚೂರು (Raichur) ಮತ್ತು ಗುಂತಕಲ್ (Guntakal) ಜಂಕ್ಷನ್‌ಗಳಲ್ಲಿ ನಿಲುಗಡೆ ಮಾಡುವ ಸಾಧ್ಯತೆ ಇದೆ. ಚೆನ್ನೈ-ಬೆಂಗಳೂರು-ಮೈಸೂರು ಮತ್ತು ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ರೈಲುಗಳ ನಂತರ ಕರ್ನಾಟಕದ ಮೂರನೇ ವಂದೇ ಭಾರತ್ ರೈಲು ಇದಾಗಿರಲಿದೆ.

ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ 16 ಬೋಗಿಗಳ ರೈಲಾಗಿದ್ದು, 14 ಚೇರ್ ಕಾರ್ ಮತ್ತು ಎರಡು ಎಕ್ಸಿಕ್ಯೂಟಿವ್ ಕ್ಲಾಸ್ ಕೋಚ್‌ಗಳನ್ನು ಹೊಂದಿದೆ. ಈ ರೈಲು ಆರಂಭದಲ್ಲಿ ಯಶವಂತಪುರ, ಧರ್ಮಾವರಂ, ಧೋನೆ, ಕರ್ನೂಲ್ ಸಿಟಿ, ಗದ್ವಾಲ್ ಜಂಕ್ಷನ್, ಮಹೆಬೂಬ್‌ನಗರ, ಶಾದ್‌ನಗರ ಮತ್ತು ಕಾಚೀಗುಡ ಮೂಲಕ ಸಂಚರಿಸಲಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಈ ರೈಲು ಯಶವಂತಪುರದಿಂದ ಕಾಚೀಗುಡ ನಡುವಿನ 610 ಕಿ.ಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ. ದಕ್ಷಿಣ ಭಾರತದ ಎರಡು ಐಟಿ ನಗರಗಳ ನಡುವಿನ ರೈಲು ಪ್ರಯಾಣದ ಸಮಯವನ್ನು ಎರಡು ಗಂಟೆಗಳಷ್ಟು ಕಡಿಮೆ ಮಾಡಲಿದೆ. ಪ್ರಸ್ತುತ, ಎರಡು ನಗರಗಳ ನಡುವಿನ ವೇಗದ ರೈಲು ದುರಂತೊ ಎಕ್ಸ್‌ಪ್ರೆಸ್ ಆಗಿದ್ದು, ಇದು ಒಂಬತ್ತು ಗಂಟೆ ಸಮಯ ತೆಗೆದುಕೊಳ್ಳುತ್ತದೆ.

ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ಪ್ರಾರಂಭವಾಗಿದ್ದು, ಔಪಚಾರಿಕ ಕಾರ್ಯವಿಧಾನದ ನಂತರ ರೈಲು ಸೇವೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯ ಅಧಿಕಾರಿಯ ಹೇಳಿಕೆಯನ್ನು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Vande Bharat Train: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನೊಳಗೆ ಕಸದ ರಾಶಿ; ವೈರಲ್ ಫೋಟೋಗೆ ಜನರ ಪ್ರತಿಕ್ರಿಯೆ ನೋಡಿ

ಕರ್ನಾಟಕದಿಂದ ಎರಡು ವಂದೇ ಭಾರತ್ ರೈಲುಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಹುಬ್ಬಳ್ಳಿ-ಧಾರವಾಡ ರೈಲು ಜೂನ್ 27 ರಂದು ಪ್ರಾರಂಭವಾಗಿದ್ದು, ಮಂಗಳವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವೆ ಪ್ರಯಾಣಿಸಲು ಸುಮಾರು 7 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ ನವೆಂಬರ್‌ನಲ್ಲಿ ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. 504 ಕಿ.ಮೀ ದೂರವನ್ನು ಕ್ರಮಿಸಲು ಈ ರೈಲು ಆರೂವರೆ ಗಂಟೆ ತೆಗೆದುಕೊಳ್ಳುತ್ತದೆ.

ಕರ್ನಾಟಕಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?