AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲುಮೆ ಪ್ರಕರಣ: ಲೋಕೇಶ್ ವಿರುದ್ಧ ದೂರು ದಾಖಲು, ಆರೋಪಿಯ ಬಂಧನಕ್ಕೆ ಶೋಧ ಕಾರ್ಯ

ಮತದಾದನದ ಬಗ್ಗೆ ಜಾಗೃತಿ ಮೂಡಿಸಲು ಎನ್​ಜಿಒಗೆ ಬಿಬಿಎಂಪಿ ಅನುಮತಿ ನೀಡಿತ್ತು. ಇದನ್ನು ದುರುಪಯೋಗ ಪಡಿಸಿಕೊಂಡ ಆರೋಪದಡಿ ಲೋಕೇಶ್​ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಚಿಲುಮೆ ಪ್ರಕರಣ: ಲೋಕೇಶ್ ವಿರುದ್ಧ ದೂರು ದಾಖಲು, ಆರೋಪಿಯ ಬಂಧನಕ್ಕೆ ಶೋಧ ಕಾರ್ಯ
ಚಿಲುಮೆ ಪ್ರಕರಣ: ಲೋಕೇಶ್ ವಿರುದ್ಧ ದೂರು ದಾಖಲು, ಆರೋಪಿಯ ಬಂಧನಕ್ಕೆ ಶೋಧ ಕಾರ್ಯ
TV9 Web
| Edited By: Rakesh Nayak Manchi|

Updated on:Nov 19, 2022 | 1:37 PM

Share

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ (Voters Data Scam, Voters ID Revision) ಆರೋಪ ಸಂಬಂಧ ಬಿಬಿಎಂಪಿ ನೀಡಿದ ದೂರು ಆಧರಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ನಗರದ ವೈಟ್​ಫಿಲ್ಡ್​​ ವಿಭಾಗದ ಡಿಸಿಪಿ ಗಿರೀಶ್ ಹೇಳಿಕೆ ನೀಡಿದ್ದಾರೆ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಎನ್​ಜಿಒಗೆ ಬಿಬಿಎಂಪಿ ಅನುಮತಿ ನೀಡಿತ್ತು. ಆದರೆ ಇದನ್ನು ದುರುಪಯೋಗ ಪಡಿಸಿಕೊಂಡ ಆರೋಪದಡಿ ಲೋಕೇಶ್​ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ಆರೋಪಿ ಲೋಕೇಶ್​​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ. ಪ್ರಕರಣ ಸಂಬಂಧ ದೂರು ನೀಡಿದ ಚಂದ್ರಶೇಖರ್​ನನ್ನೂ ಬಿಬಿಎಂಪಿ (BBMP) ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ. ಈ ಸಂಬಂಧವೂ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ತನಿಖೆ ವೇಳೆ ರವಿಕುಮಾರ್​ನ​ ಒಂದೊಂದೇ​ ವಿಚಾರಗಳು ಬೆಳಕಿಗೆ

ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆಯಲಾಗಿದೆ. ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಹಲಸೂರು ಗೇಟ್​ ಪೊಲೀಸರು ನಿನ್ನೆ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ಚಿಲುಮೆ ಕಚೇರಿ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ನಡೆಸಿದ್ದರು. ಸದ್ಯ ರವಿಕುಮಾರ್ ವಿಚಾರನೆ ಮುಂದುವರೆದಿದ್ದು, ಒಂದೊಂದೇ ವಿಚಾರ ಬೆಳಕಿಗೆ ಬರುತ್ತಿದೆ.

ಇದನ್ನೂ ಓದಿ: ಮತದಾರರ ಮಾಹಿತಿ ಕಳವು: ಚಿಲುಮೆ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ

ದಾಬಸ್​ಪೇಟೆ ನಿವಾಸಿಯಾಗಿರುವ ರವಿಕುಮಾರ್, ಮೊದಲು ರಿಯಲ್​ ಎಸ್ಟೇಟ್​​ ವ್ಯವಹಾರ ನಡೆಸಿಕೊಂಡಿದ್ದನು. ಬಳಿಕ ರಾಜಕಾರಣಿಗಳು ಹಾಗೂ ದೊಡ್ಡ ವ್ಯಕ್ತಿಗಳ ಸಂಪರ್ಕವಾಗಿದೆ. ಬಳಿಕ ಆಪ್ತರು ಹಾಗೂ ಹಿತೈಷಿಗಳ ಸಲಹೆ ಮೇರೆಗೆ ಚಿಲುಮೆ ಎಂಬ NGO ವನ್ನು ಸ್ಥಾಪಿಸಿದ್ದಾನೆ. ಬಳಿಕ ಸರ್ಕಾರಿ ಸಂಸ್ಥೆಗಳ ಮೂಲಕ ಪ್ರಾಜೆಕ್ಟ್​​ ಪಡೆದು ಸರ್ವೆ ಕಾರ್ಯ​​ ನಡೆಸುತ್ತಿದ್ದನು. ಹೀಗೆ 2012ರಿಂದ ಹಲವು ಸರ್ವೆಗಳನ್ನು ನಡೆಸಿದ್ದ ಆರೋಪಿ ರವಿಕುಮಾರ್​, ಬಿಬಿಎಂಪಿ ಮೂಲಕ ಚುನಾವಣಾ ಜಾಗೃತಿ ಕೆಲಸಕ್ಕೂ ಕೈಹಾಕಿದ್ದ. ಅದರಂತೆ ಸರ್ವೆ ಹೆಸರಿನಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಿ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Sat, 19 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ