AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ

IISC Bengaluru Covid Vaccine: ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ನಿರ್ದೇಶಕ ಪ್ರೊ.ರಂಗರಾಜನ್ ಈ ವಿಷಯ ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 14, 2021 | 8:52 PM

Share

ಬೆಂಗಳೂರು: ನಗರದ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಈಗ ಬಳಕೆಯಲ್ಲಿರುವದಕ್ಕಿಂತ ಹೆಚ್ಚು ಪರಿಣಾಮಕಾರಿಯಾದ ಕೊವಿಡ್ ಲಸಿಕೆ ಮತ್ತು ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಕುರಿತು ಸ್ವತಃ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ನಿರ್ದೇಶಕ ಪ್ರೊ.ರಂಗರಾಜನ್ ತಿಳಿಸಿದ್ದಾಗಿ ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ರಂಗರಾಜನ್ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಲ್ಲದೇ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಆಕ್ಸಿಜನ್ ಕಾನ್ಸ್ಂಟ್ರೇಟರ್ ಮತ್ತು ಲಸಿಕೆಯನ್ನು ಅಭಿವೃದ್ಧಿಪಡಿಸಿದ ನಂತರ ತುರ್ತು ಬಳಕೆಗೆ ಅನುಮತಿ ಪಡೆಯಲು ನೆರವಾಗುವಂತೆ ಪ್ರೊ.ರಂಗರಾಜನ್ ಆರೋಗ್ಯ ಸಚಿವ ಡಾ.ಸುಧಾಕರ್ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಆರೋಗ್ಯ ಸಚಿವ ಡಾ.ಸುಧಾಕರ್, ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ಗೆ ಅಗತ್ಯವಿರುವ ಎಲ್ಲ ಬಗೆಯ ನೆರವನ್ನೂ ಕರ್ನಾಟಕ ಸರ್ಕಾರ ನೀಡಲಿದೆ. ಅಲ್ಲದೆ ಕೇಂದ್ರ ಸರ್ಕಾರದಿಂದಲೂ ನೆರವು ಪಡೆಯಲು ಯಾವುದೇ ಕ್ಷಣಕ್ಕೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಾಮಾನ್ಯ ಉಷ್ಣಾಂಶ 30 ಡಿಗ್ರಿ ಸೆಲ್ಶಿಯಸ್​ನಲ್ಲೂ ಸಂಗ್ರಹಿಸಿ ಇಡಬಹುದಾದ ಕೊವಿಡ್ ಲಸಿಕೆಯನ್ನು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಅಭಿವೃದ್ಧಿಪಡಿಸುತ್ತಿದೆ. ಜತೆಗೆ ಅಭಿವೃದ್ಧಿಪಡಿಸುತ್ತಿರುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ಳು ಸದ್ಯ ಬಳಕೆಯಲ್ಲಿರುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳಿಗಿಂತ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲವು ಎಂದು ಪ್ರೊ. ರಂಗರಾಜನ್ ಸಂವಾದದಲ್ಲಿ ಹೇಳಿದ್ದಾಗಿ ಹಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಇದನ್ನೂ ಓದಿ: Sputnik V: ಸ್ಪುಟ್ನಿಕ್​ ವಿ ಕೊರೊನಾ ಲಸಿಕೆ ಒಂದು ಡೋಸ್​ಗೆ 995.40 ರೂ; ಭಾರತದಲ್ಲಿ ಉತ್ಪಾದನೆ ಆರಂಭವಾದ ನಂತರ ಬೆಲೆ ತಗ್ಗುವ ಸಾಧ್ಯತೆ

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 41,779 ಜನರಿಗೆ ಕೊವಿಡ್ ದೃಢ, 373 ಜನರು ನಿಧನ (Bengaluru Indian Institute of Science developing Covid 19 vaccine)

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ