AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ

IISC Bengaluru Covid Vaccine: ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ನಿರ್ದೇಶಕ ಪ್ರೊ.ರಂಗರಾಜನ್ ಈ ವಿಷಯ ಬಹಿರಂಗಪಡಿಸಿದ್ದಾರೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಶೀಘ್ರದಲ್ಲೇ ಕೊವಿಡ್ ಲಸಿಕೆ ಅಭಿವೃದ್ಧಿ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 14, 2021 | 8:52 PM

Share

ಬೆಂಗಳೂರು: ನಗರದ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಈಗ ಬಳಕೆಯಲ್ಲಿರುವದಕ್ಕಿಂತ ಹೆಚ್ಚು ಪರಿಣಾಮಕಾರಿಯಾದ ಕೊವಿಡ್ ಲಸಿಕೆ ಮತ್ತು ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಈ ಕುರಿತು ಸ್ವತಃ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ನಿರ್ದೇಶಕ ಪ್ರೊ.ರಂಗರಾಜನ್ ತಿಳಿಸಿದ್ದಾಗಿ ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಕರ್ನಾಟಕದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಜತೆ ನಡೆಸಿದ ವರ್ಚುವಲ್ ಸಂವಾದದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ರಂಗರಾಜನ್ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಲ್ಲದೇ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಆಕ್ಸಿಜನ್ ಕಾನ್ಸ್ಂಟ್ರೇಟರ್ ಮತ್ತು ಲಸಿಕೆಯನ್ನು ಅಭಿವೃದ್ಧಿಪಡಿಸಿದ ನಂತರ ತುರ್ತು ಬಳಕೆಗೆ ಅನುಮತಿ ಪಡೆಯಲು ನೆರವಾಗುವಂತೆ ಪ್ರೊ.ರಂಗರಾಜನ್ ಆರೋಗ್ಯ ಸಚಿವ ಡಾ.ಸುಧಾಕರ್ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಆರೋಗ್ಯ ಸಚಿವ ಡಾ.ಸುಧಾಕರ್, ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ಗೆ ಅಗತ್ಯವಿರುವ ಎಲ್ಲ ಬಗೆಯ ನೆರವನ್ನೂ ಕರ್ನಾಟಕ ಸರ್ಕಾರ ನೀಡಲಿದೆ. ಅಲ್ಲದೆ ಕೇಂದ್ರ ಸರ್ಕಾರದಿಂದಲೂ ನೆರವು ಪಡೆಯಲು ಯಾವುದೇ ಕ್ಷಣಕ್ಕೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಾಮಾನ್ಯ ಉಷ್ಣಾಂಶ 30 ಡಿಗ್ರಿ ಸೆಲ್ಶಿಯಸ್​ನಲ್ಲೂ ಸಂಗ್ರಹಿಸಿ ಇಡಬಹುದಾದ ಕೊವಿಡ್ ಲಸಿಕೆಯನ್ನು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ ಅಭಿವೃದ್ಧಿಪಡಿಸುತ್ತಿದೆ. ಜತೆಗೆ ಅಭಿವೃದ್ಧಿಪಡಿಸುತ್ತಿರುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ಳು ಸದ್ಯ ಬಳಕೆಯಲ್ಲಿರುವ ಆಕ್ಸಿಜನ್ ಕಾನ್ಸ್ಂಟ್ರೇಟರ್​ಗಳಿಗಿಂತ ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲವು ಎಂದು ಪ್ರೊ. ರಂಗರಾಜನ್ ಸಂವಾದದಲ್ಲಿ ಹೇಳಿದ್ದಾಗಿ ಹಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ.

ಇದನ್ನೂ ಓದಿ: Sputnik V: ಸ್ಪುಟ್ನಿಕ್​ ವಿ ಕೊರೊನಾ ಲಸಿಕೆ ಒಂದು ಡೋಸ್​ಗೆ 995.40 ರೂ; ಭಾರತದಲ್ಲಿ ಉತ್ಪಾದನೆ ಆರಂಭವಾದ ನಂತರ ಬೆಲೆ ತಗ್ಗುವ ಸಾಧ್ಯತೆ

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 41,779 ಜನರಿಗೆ ಕೊವಿಡ್ ದೃಢ, 373 ಜನರು ನಿಧನ (Bengaluru Indian Institute of Science developing Covid 19 vaccine)

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​