AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದರು.

ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on:Dec 09, 2023 | 9:04 PM

Share

ವಿಜಯಪುರ, ಡಿ.9: ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಯತ್ನಾಳ್ ಅವರು ಎಕ್ಸ್​ನಲ್ಲಿ (ಟ್ವಿಟರ್) ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿದೆ. ನಗರದಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂಬ ಅಂಶವನ್ನು ಎನ್‌ಐಎ ಅಧಿಕಾರಿಗಳ ಇಂದಿನ ದಾಳಿಯಿಂದ ಸಾಬೀತುಪಡಿಸಲಾಗಿದೆ. ಮುಸ್ಲಿಂ ಉಗ್ರಗಾಮಿಗಳು ರೂಪಿಸಿರುವ ಯಾವುದೇ ಕೆಟ್ಟ ಯೋಜನೆಗಳನ್ನು ವಿಫಲಗೊಳಿಸಲು ಸರ್ಕಾರ ಮತ್ತು ಪೋಲೀಸರು ತಮ್ಮ ಕಣ್ಗಾವಲು ಹೆಚ್ಚಿಸುವುದು ಮತ್ತು ತಮ್ಮ ಗುಪ್ತಚರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಯತ್ನಾಳ್ ಬರೆದುಕೊಂಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್

ಇದನ್ನೂ ಓದಿ: ಶಿವಕುಮಾರ್ ನನಗೆ ಸಲಹೆ ನೀಡುವ ಬದಲು ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಬಸನಗೌಡ ಯತ್ನಾಳ್

ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಬೆಂಗಳೂರಿನಲ್ಲೂ ನಡೆದ ದಾಳಿ ವೇಳೆ ಶಂಕಿತ ಉಗ್ರ ಅಲಿ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ. ಶಂಕಿತ ಉಗ್ರರನು ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ದಾಳಿ ನಡೆಸಿ ಬಂಧಿಸಿದೆ.

ಎನ್​ಐಎ ಅಧಿಕಾರಿಗಳು ನಸುಕಿನ ಜಾವ 5:30 ಸುಮಾರಿಗೆ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್​​ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದ ಮನೆ ಮೇಲೆ ದಾಳಿ ನಡೆಸಿ ಉರ್ದು ಶಾಲೆ ನಡೆಸುತ್ತಿದ್ದ ಅಲಿ ಅಬ್ಬಾಸ್​ನನ್ನು ಬಂಧಿಸಿದ್ದರು. ಈತನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sat, 9 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ