AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದರು.

ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತ ತಾಣ: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Dec 09, 2023 | 9:04 PM

Share

ವಿಜಯಪುರ, ಡಿ.9: ಉಗ್ರಗಾಮಿಗಳಿಗೆ ಬೆಂಗಳೂರು ಸುರಕ್ಷಿತವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ. ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ರಾಜಧಾನಿ ಬೆಂಗಳೂರಿನ ಪುಲಕೇಶಿ ನಗರದ ಮನೆಯೊಂದರ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಯತ್ನಾಳ್ ಅವರು ಎಕ್ಸ್​ನಲ್ಲಿ (ಟ್ವಿಟರ್) ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ಅಪರಾಧಿಗಳಿಗೆ ಸುರಕ್ಷಿತ ತಾಣವಾಗಿದೆ. ನಗರದಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂಬ ಅಂಶವನ್ನು ಎನ್‌ಐಎ ಅಧಿಕಾರಿಗಳ ಇಂದಿನ ದಾಳಿಯಿಂದ ಸಾಬೀತುಪಡಿಸಲಾಗಿದೆ. ಮುಸ್ಲಿಂ ಉಗ್ರಗಾಮಿಗಳು ರೂಪಿಸಿರುವ ಯಾವುದೇ ಕೆಟ್ಟ ಯೋಜನೆಗಳನ್ನು ವಿಫಲಗೊಳಿಸಲು ಸರ್ಕಾರ ಮತ್ತು ಪೋಲೀಸರು ತಮ್ಮ ಕಣ್ಗಾವಲು ಹೆಚ್ಚಿಸುವುದು ಮತ್ತು ತಮ್ಮ ಗುಪ್ತಚರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಯತ್ನಾಳ್ ಬರೆದುಕೊಂಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್

ಇದನ್ನೂ ಓದಿ: ಶಿವಕುಮಾರ್ ನನಗೆ ಸಲಹೆ ನೀಡುವ ಬದಲು ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಬಸನಗೌಡ ಯತ್ನಾಳ್

ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ಮಾಡಿದ್ದರು. ಬೆಂಗಳೂರಿನಲ್ಲೂ ನಡೆದ ದಾಳಿ ವೇಳೆ ಶಂಕಿತ ಉಗ್ರ ಅಲಿ ಅಬ್ಬಾಸ್ ಎಂಬಾತನನ್ನು ಬಂಧಿಸಲಾಗಿದೆ. ಶಂಕಿತ ಉಗ್ರರನು ಐಸಿಸ್​ ಜೊತೆ ನಂಟು ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್​ಐಎ ದಾಳಿ ನಡೆಸಿ ಬಂಧಿಸಿದೆ.

ಎನ್​ಐಎ ಅಧಿಕಾರಿಗಳು ನಸುಕಿನ ಜಾವ 5:30 ಸುಮಾರಿಗೆ ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್​​ವೊಂದರ ಮೂರನೇ ಮಹಡಿಯಲ್ಲಿ ವಾಸವಾಗಿದ್ದ ಮನೆ ಮೇಲೆ ದಾಳಿ ನಡೆಸಿ ಉರ್ದು ಶಾಲೆ ನಡೆಸುತ್ತಿದ್ದ ಅಲಿ ಅಬ್ಬಾಸ್​ನನ್ನು ಬಂಧಿಸಿದ್ದರು. ಈತನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Sat, 9 December 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!