Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ ಪತ್ತೆ: ಅಧಿಕೃತ ವಿವರ ನೀಡಿದ ಐಟಿ ಇಲಾಖೆ

IT Raid: ಅಕ್ರಮವಾಗಿ 40 ಜನರ ಹೆಸರಿನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಉಪ ಗುತ್ತಿಗೆ ಪಡೆದು ಅಕ್ರಮ ಎಸಗಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ ಪತ್ತೆ: ಅಧಿಕೃತ ವಿವರ ನೀಡಿದ ಐಟಿ ಇಲಾಖೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Oct 12, 2021 | 5:54 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮನೆಗಳ ಮೇಲೆ ಐಟಿ ದಾಳಿಯಲ್ಲಿ 750 ಕೋಟಿ ಅಕ್ರಮ ಆಸ್ತಿ-ಪಾಸ್ತಿ ಪತ್ತೆಯಾಗಿದೆ ಎಂದು ಐಟಿ ಇಲಾಖೆ ಅಧಿಕಾರಿಗಳಿಂದ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.ಅಕ್ಟೋಬರ್ 7ರಂದು 4 ರಾಜ್ಯಗಳಲ್ಲಿ 47 ಕಡೆ ಐಟಿ ದಾಳಿ ನಡೆದಿತ್ತು. ಐಟಿ ದಾಳಿ ವೇಳೆ 4.69 ಕೋಟಿ ನಗದು ಜಪ್ತಿ ಮಾಡಲಾಗಿದೆ. 8.67 ಕೋಟಿ ಮೊತ್ತದ ಚಿನ್ನ, 29.83 ಲಕ್ಷ ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ 40 ಜನರ ಹೆಸರಿನಲ್ಲಿ ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಉಪ ಗುತ್ತಿಗೆ ಪಡೆದು ಅಕ್ರಮ ಎಸಗಿರುವುದು ದಾಳಿಯ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ವೇಳೆ ಮೂರು ಕಂಪನಿಗಳು ನಕಲಿಯಾಗಿ ಖರೀದಿ ಮಾಡಿ ಕೆಲಸ ಮಾಡಿದ್ದಾಗಿ ದಾಖಲೆಗಳನ್ನು ಸೃಷ್ಟಿ ಮಾಡಿ ಲಾಭ ಗಳಿಸುರುವುದು ಪತ್ತೆಯಾಗಿದೆ. ನಕಲಿಯಾಗಿ ಕಾರ್ಮಿಕ ವೆಚ್ಚ, ನಕಲಿಯಾಗಿ ಬೋಗಸ್ ಸಬ್ ಕಂಟ್ರಾಕ್ಟ್ ಗಳು ಮಾಡಿರೊದು ಪತ್ತೆಯಾಗಿದೆ. ಒಂದು ಕಂಪನಿಗೆ ಸಂಬಂಧಿಸಿದಂತೆ ಇಲ್ಲದ 40 ವ್ಯಕ್ತಿಗಳ ಹೆಸರಲ್ಲಿ ಸಬ್ ಕಾಂಟ್ರಾಕ್ಟ್ ವೆಚ್ಚ ಸೃಷ್ಟಿ ಮಾಡಿರುವುದು ಪತ್ತೆಯಾಗಿದೆ. ಜತೆಗೆ ವಿಚಾರಣೆ ವೇಳೆ ನಕಲಿಯಾಗಿ ದಾಖಲೆಗಳನ್ನು ಸೃಷ್ಟಿ ಮಾಡಿರುವುದಾಗಿ ಐಟಿ ಇಲಾಖೆಯ ಅಧಿಕಾರಿಗಳ ಮುಂದೆ ಸಬ್ ಕಾಂಟ್ರಾಕ್ಟರ್ಗಳು ಒಪ್ಪಿಕೊಂಡಿದ್ದಾರೆ ಎಂದು ಇಲಾಖೆ ತಿಳಿಸಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮನೆ ಮೇಲೆ ದಾಳಿ ನಡೆದ ಕಾರಣ ಇದು ರಾಜಕೀಯ ಸ್ವರೂಪವನ್ನೂ ಪಡೆದುಕೊಂಡಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿ ವಿಚಾರವಾಗಿ ಇಂದು (ಅಕ್ಟೋಬರ್​ 12) ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ಗೆ ಕಾರಣ. ಸಿದ್ದರಾಮಯ್ಯ ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಸಹಾ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರಬೇಕು ಎಂದು ಹೇಳಿದ್ದಾರೆ.

ಯಡಿಯೂರಪ್ಪ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ಮಾಡಲಾಗಿದೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಅನುಮಾನ ಇಲ್ಲ ಎಂದು ಚಾಮುಂಡಿಬೆಟ್ಟದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 

IT raid in Bangalore: ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ; ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ IT ರೇಡ್

ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

Published On - 5:27 pm, Tue, 12 October 21

ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ