ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ

ಕರ್ನಾಟಕದಲ್ಲಿನ ಖಾಸಗಿ ಸಂಸ್ಥೆಗಳು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬ ವಿಧೇಯಕಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಖಾಸಗಿ ಉದ್ಯಮಿಗಳ ಒತ್ತಡದ ಬಳಿಕ ಅದನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದುಕೊಂಡ ಬೆನ್ನಲ್ಲೇ, ಐಟಿ ಕಂಪನಿಗಳಲ್ಲಿ ಉದ್ಯೋಗ ಅವಧಿ ವಿಸ್ತರಣೆ ವಿವಾದ ಶುರುವಾಗಿದೆ.

ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ
ಪ್ರಾತಿನಿಧಿಕ ಚಿತ್ರ
Follow us
|

Updated on: Jul 21, 2024 | 5:54 PM

ಬೆಂಗಳೂರು, (ಜುಲೈ 21): ಕರ್ನಾಟಕದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹೌದು…ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ತಿದ್ದುಪಡಿಯಲ್ಲಿ ತಮ್ಮ ಬೇಡಿಕೆಯಾದ ಕೆಲಸದ ಅವಧಿ ವಿಸ್ತರಣೆಯನ್ನು ಸೇರಿಸಬೇಕು ಎಂದು ಐಟಿ ಕಂಪೆನಿಗಳು ಮನವಿ ಮಾಡಿವೆ ಎಂದು ತಿಳಿದುಬಂದಿದೆ. ಆದ್ರೆ, ಸರ್ಕಾರ ಇನ್ನೂ ಈ ಪಸ್ತಾವನೆ ಕುರಿತು ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಇನ್ನು ಈ ವಿಚಾರ ತಿಳಿಯಿತ್ತಿದ್ದಂತೆಯೇ ಕಂಪನಿಗಳ ಈ ನಡೆಗೆ ಕಾರ್ಮಿಕ ಸಂಘಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ.

ಇದೊಂದು ಅಮಾನವೀಯ ನಡೆಯಾಗಿದೆ. ಕೆಲಸದ ಅವಧಿ 9ರಿಂದ 14 ಗಂಟೆಗೆ ಹೆಚ್ಚಿಸುವುದರಿಂದ ಉದ್ಯೋಗಿಗಳ  ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೆ ಐಟಿ-ಬಿಟಿ ಕಂಪನಿಗಳು ಉದ್ಯೋಗ ಕಡಿತಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Bengaluru Real Estate: ಮನೆ ಖರೀದಿಸಲು ಎನ್​ಆರ್​ಐಗಳಿಗೆ ಬೆಂಗಳೂರೇ ಇಷ್ಟವಂತೆ; ಕಾರಣಗಳಿವು…

ಹೊಸ ಪ್ರಸ್ತಾವನೆಯಂತೆ ಐಟಿ ಉದ್ಯೋಗಿಗಳು, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು ಎಂದು ಮನವಿ ಮಾಡಲಾಗಿದೆ. ಈ ಪ್ರಸ್ತಾವನೆ ಕುರಿತು ಸರ್ಕಾರ ಒಂದು ಸುತ್ತಿನ ಮಾತುಕತೆ ನಡೆಸಿದೆ. ಐಟಿ ಕಂಪನಿಗಳ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ಈ ಕುರಿತು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿದೆ.

ಐಟಿ ಕಂಪನಿಗಳ ಈ ಪ್ರಸ್ತಾವನೆಗೆ ಆರಂಭದಲ್ಲಿಯೇ ಸಾಕಷ್ಟು ವಿರೋಧ ಕೇಳಿ ಬಂದಿದೆ. ಕರ್ನಾಟಕ ರಾಜ್ಯ ಐಟಿ/ ಐಟಿಇಎಸ್ ನೌಕರರ ಸಂಘ (ಕೆಐಟಿಯು) ಸಹ ಪ್ರಸ್ತಾವನೆಯನ್ನು ವಿರೋಧಿಸಿದೆ. ಈ ಪಸ್ತಾವನೆಗೆ ಒಪ್ಪಿಗೆ ನೀಡಿದರೆ ಕಂಪನಿಗಳು ಈಗಿರುವ 3 ಶಿಫ್ಟ್‌ಗಳಿಂದ 2 ಶಿಫ್ಟ್‌ಗಳಿಗೆ ಬದಲಾಗಲಿವೆ. ಆದ್ದರಿಂದ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಕೆಐಟಿಯು ಅಂದಾಜಿಸಿದೆ.

ಅಲ್ಲದೇ ಈಗಾಗಲೇ ಐಟಿ ಉದ್ಯೋಗಿಗಳು ಒತ್ತಡದಿಂದ ಹಲವು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ವೇಳೆ 14 ಗಂಟೆ ಕೆಲಸದ ಅವಧಿಗೆ ಒಪ್ಪಿಗೆ ನೀಡಿದರೆ ಉದ್ಯೋಗಿಗಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗಲಿದೆ. ಈ ಕುರಿತು ಈಗಾಗಲೇ ನಡೆದಿರುವ ಹಲವು ಸಮೀಕ್ಷೆಗಳನ್ನು ಕೆಐಟಿಯು ಉಲ್ಲೇಖಿಸಿದೆ.

ಇದನ್ನೂ ಓದಿ: 25,000 ಜನರಿಗೆ ಕೆಲಸ ಕೊಟ್ಟಿದ್ದೇನೆ, ನನ್ನ ಮಕ್ಕಳು ಕರ್ನಾಟಕದಲ್ಲಿ ಕೆಲಸ ಮಾಡಬಾರದಾ?: ಮೀಸಲಾತಿ ಮಸೂದೆಗೆ ಫೋನ್​ಪೆ ಸಂಸ್ಥಾಪಕರ ಕಿಡಿ

ಐಟಿ ಕಂಪನಿಗಳ ಉದ್ಯೋಗಿಗಳನ್ನು ಸರ್ಕಾರ ಯಂತ್ರದಂತೆ ನೋಡಬಾರದು. ಅವರು ಸಹ ಮನುಷ್ಯರು, 14 ಗಂಟೆಗಳ ಕೆಲಸದ ಅವಧಿಗೆ ಒಪ್ಪಿಗೆ ನೀಡುವುದು ಸರಿಯಲ್ಲ. ಈ ಪ್ರಸ್ತಾವನೆಗೆ ಒಪ್ಪಿಗೆ ನೀಡುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ವಿವರವಾದ ಅಧ್ಯಯನ ನಡೆಸಬೇಕು ಎಂದು ಐಟಿ ಉದ್ಯೋಗಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಕರ್ನಾಟಕ ಸರ್ಕಾರ 14 ಗಂಟೆ ಕೆಲಸದ ಅವಧಿ ವಿಸ್ತರಣೆಗೆ ಕಾನೂನು ಒಪ್ಪಿಗೆ ನೀಡುವ ಪ್ರಸ್ತಾವನೆಗೆ ಒಪ್ಪಿಲ್ಲ. ಆದರೆ ಐಟಿ ಕಂಪನಿಗಳ ಜೊತೆಗಿನ ಸಭೆಯಲ್ಲಿ ಯಾವ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!