AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Panchaganga Express: ಬೆಂಗಳೂರು – ಕಾರವಾರ ನಡುವಿನ ರೈಲಿಗೆ ಪಂಚಗಂಗಾ ಎಕ್ಸ್​ಪ್ರೆಸ್​ ಎಂದು ನಾಮಕರಣ ಮಾಡಿದ ರೈಲ್ವೆ ಇಲಾಖೆ

ಉಡುಪಿ ಜಿಲ್ಲೆಯ 5 ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಠಿಯಾಗುವ ಪಂಚಗಂಗಾವಳಿ ನದಿಯ ಹೆಸರನ್ನು ಆಧರಿಸಿ ಪಂಚಗಂಗಾ ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಆರಿಸಲಾಗಿದ್ದು, ಬೆಂಗಳೂರು ಹಾಗೂ ಕಾರವಾರ ನಡುವಿನ ನೂತನ ರೈಲು ಈ ಹೆಸರಿನಲ್ಲಿ ಸಂಚರಿಸಲಿದೆ.

Panchaganga Express: ಬೆಂಗಳೂರು - ಕಾರವಾರ ನಡುವಿನ ರೈಲಿಗೆ ಪಂಚಗಂಗಾ ಎಕ್ಸ್​ಪ್ರೆಸ್​ ಎಂದು ನಾಮಕರಣ ಮಾಡಿದ ರೈಲ್ವೆ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 03, 2021 | 8:46 AM

Share

ಬೆಂಗಳೂರು: ಬೆಂಗಳೂರು ಹಾಗೂ ಕಾರವಾರ ನಡುವೆ ಸಂಚರಿಸುವ ರೈಲಿಗೆ ಪಂಚಗಂಗಾ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲಿಗೆ ಪಂಚಗಂಗಾ ಎಕ್ಸ್​ಪ್ರೆಸ್​ ಎಂಬ ಹೆಸರಿಡುವುದಾಗಿ ತಿಳಿಸಿದೆ. ಉಡುಪಿ ಜಿಲ್ಲೆಯ 5 ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಠಿಯಾಗುವ ಪಂಚಗಂಗಾವಳಿ ನದಿಯ ಹೆಸರನ್ನು ಆಧರಿಸಿ ಪಂಚಗಂಗಾ ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಆರಿಸಲಾಗಿದ್ದು, ಬೆಂಗಳೂರು ಹಾಗೂ ಕಾರವಾರ ನಡುವಿನ ನೂತನ ರೈಲು ಈ ಹೆಸರಿನಲ್ಲಿ ಸಂಚರಿಸಲಿದೆ.

ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಈ ಬಗ್ಗೆ ಮನವಿ ಸಲ್ಲಿಸಿದ್ದು, ಅದನ್ನೀಗ ಕೇಂದ್ರ ರೈಲ್ವೆ ಸಚಿವಾಲಯ ಪುರಸ್ಕರಿಸಿದೆ. ಇದೇ ವಿಚಾರದ ಕುರಿತಾಗಿ ನಿನ್ನೆ (ಶುಕ್ರವಾರ) ಸಂಸದೆ ಶೋಭಾ ಕರಂದ್ಲಾಜೆ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ ನದಿ, ಜಿಲ್ಲೆಯ ತೀರ್ಥ ಕ್ಷೇತ್ರ, ಪ್ರವಾಸೊದ್ಯಮ, ಮೀನುಗಾರಿಕೆ, ಕೃಷಿ ಹಾಗೂ ಜನಜೀವನಕ್ಕೆ ಆಧಾರವಾಗಿದೆ. ಈ ಕಾರಣದಿಂದ ಬೆಂಗಳೂರು – ಕಾರವಾರ ರೈಲಿಗೆ ಪಂಚಗಂಗಾ ಎನ್ನುವ ಹೆಸರಿಡಬೇಕು ಎಂದು ಅನೇಕ ಸಮಯದ ಹಿಂದೆಯೇ ಅಂದಿನ ರೈಲ್ವೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರಿಗೆ ಮನವಿ ಸಲ್ಲಿಸಲಾಗಿತ್ತು ಎಂದಿದ್ದಾರೆ.

ಇದೀಗ ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ ಪಂಚಗಂಗಾ ಎಕ್ಸ್‌ಪ್ರೆಸ್‌ ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು-ಕಾರವಾರ ರೈಲಿಗೆ ನಾಮಕರಣ ಮಾಡಿದ ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವಾಲಯಕ್ಕೆ ಧನ್ಯವಾದ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಕರಾವಳಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಸೇತು ಆಗಿರುವ ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲು ಪ್ರತಿದಿನ ಓಡಾಡಲಿದ್ದು, ಇನ್ನುಮುಂದೆ ಅದನ್ನು ಪಂಚಗಂಗಾ ಎಕ್ಸ್​ಪ್ರೆಸ್ ಎಂದು ಕರೆಯಲಾಗುತ್ತದೆ. ಕಾರವಾರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನ ರೈಲನ್ನು ಸದುಪಯೋಗಪಡಿಸಿಕೊಳ್ಳಬೇಕು.. ಕಡಿಮೆ ಪ್ರಯಾಣ ದರ, ಸುಲಭ ಸಂಚಾರದ ಜತೆ ಮೂಲಭೂತ ಸೌಕರ್ಯಗಳು ರೈಲಿನಲ್ಲಿ ಇರುವ ಕಾರಣ ಬೆಂಗಳೂರಿಗೆ ಓಡಾಡುವ ಜನರು ಇದನ್ನು ಬಳಸಿ ಎಂದು ಶೋಭಾ ಕರಂದ್ಲಾಜೆ ಇದೇ ಸಂದರ್ಭದಲ್ಲಿ ಕರೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್