AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

Summer Special Trains: ನೈರುತ್ಯ ರೈಲ್ವೆ ಇಲಾಖೆ ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನಿಂದ ಮಂಗಳೂರು ಮತ್ತು ಕೊಲ್ಲಂಗೆ ವಿಶೇಷ ರೈಲುಗಳ ಸಂಚಾರಕ್ಕೆ ಮುಂದಾಗಿದೆ. ಎಸ್‌ಎಂವಿಟಿ ಬೆಂಗಳೂರಿನಿಂದ ಕೊಲ್ಲಂ ಮತ್ತು ಮಂಗಳೂರಿಗೆ ರೈಲುಗಳ ಸಂಚಾರ ದಿನಾಂಕ, ಸಮಯ ಮತ್ತು ಕೋಚ್ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 16, 2025 | 10:21 AM

Share

ಬೆಂಗಳೂರು, ಏಪ್ರಿಲ್​ 16: ಪ್ರಯಾಣಿಕರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ನೈರುತ್ಯ ರೈಲು (South Western Railway) ಬೇಸಿಗೆ ರಜೆಯ ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದೆ. ಎಸ್​ಎಂವಿಟಿ (SMVT) ಬೆಂಗಳೂರು ಟು ಕೊಲ್ಲಂ ಎಕ್ಸ್‌ಪ್ರೆಸ್ (Bengaluru-Kollam) ಮತ್ತು ಎಸ್​ಎಂವಿಟಿ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲುಗಳು ಸಂಚರಿಸಲಿವೆ. ಈ ಬಗ್ಗೆ ನೈರುತ್ಯ ರೈಲ್ವೆ ಇಲಾಖೆ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳ ಸಮಯ, ದಿನಾಂಕ ಸೇರಿದಂತೆ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ವಿಶೇಷ ರೈಲುಗಳ ವಿವರ

ರೈಲು ಸಂಖ್ಯೆ 06585: ಎಸ್​​ಎಂವಿಟಿ ಬೆಂಗಳೂರು ಟು ಕೊಲ್ಲಂ ಎಕ್ಸ್‌ಪ್ರೆಸ್. ಏಪ್ರಿಲ್ 19 (ಶನಿವಾರ) ಮಧ್ಯಾಹ್ನ 3:50 ಗಂಟೆಗೆ ಹೊರಟು ಭಾನುವಾರ ಬೆಳಿಗ್ಗೆ 06:20 ಕೊಲ್ಲಂ ತಲುಪುತ್ತದೆ. ದಿನಕ್ಕೆ ಒಂದು ಸೇವೆ ಮಾತ್ರ ಇರಲಿದೆ.

ಇದನ್ನೂ ಓದಿ
Image
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
Image
ಕೆಎಸ್​ಆರ್ಟಿಸಿ ಬಳಿಕ ಮತ್ತೊಂದು ಶಾಕ್: ಖಾಸಗಿ ಬಸ್ ಟಿಕೆಟ್ ದರ ಶೀಘ್ರ ಏರಿಕೆ
Image
ಮೆಟ್ರೋ ಕಾಮಗಾರಿ ವೇಳೆ ದುರಂತ:ಹೊಸದಾಗಿ ಖರೀದಿಸಿದ್ದ ಆಟೋ ಜಖಂ, ಚಾಲಕನೂ ಸಾವು
Image
ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?

ಇದನ್ನೂ ಓದಿ: ಬೆಂಗಳೂರು ಮೆಟ್ರೋ ಕಾಮಗಾರಿ ವೇಳೆ ದುರಂತ: ವಯಾಡೆಕ್ಟ್​​ ಬಿದ್ದು ಆಟೋ ಚಾಲಕ ಸಾವು, ಜನರು ಆಕ್ರೋಶ

ರೈಲು ಸಂಖ್ಯೆ 06586: ಕೊಲ್ಲಂ ಟು ಎಸ್​ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್. 20 ಏಪ್ರಿಲ್ (ಭಾನುವಾರ) ಸಂಜೆ 5:50 ಕ್ಕೆ ಹೊರಟು ಮರುದಿನ ಅಂದರೆ ಸೋಮವಾರ ಎಸ್​ಎಂವಿಟಿ ಬೆಂಗಳೂರು ಬೆಳಿಗ್ಗೆ 08:35 ಕ್ಕೆ ತಲುಪಲಿದೆ. ದಿನಕ್ಕೆ ಒಂದು ಸೇವೆ ಮಾತ್ರ ಇರಲಿದೆ.

ಯಾವೆಲ್ಲಾ ಕೋಚ್​ಗಳು ಲಭ್ಯ

1 ಎಸಿ ಟು ಟೈಯರ್ ಕೋಚ್, 1 ಎಸಿ ತ್ರೀ ಟೈಯರ್ ಕೋಚ್, 8 ಸ್ಲೀಪರ್ ಕ್ಲಾಸ್ ಕೋಚ್‌ಗಳು, 4 ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು ಮತ್ತು 2 ಸೆಕೆಂಡ್ ಕ್ಲಾಸ್ ಕೋಚ್‌ಗಳು ಹೊಂದಿವೆ.

ಎಲ್ಲೆಲ್ಲಿ ನಿಲುಗಡೆ?

SMVT ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ, ಕೊಟ್ಟಾಯಂ, ಚಂಗನಾಸ್ಸೆರಿ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕ್ಕರ, ಕಾಯಕುಲಂ ಹಾಗೂ ಕೊಲ್ಲಂ.

ಎಸ್​ಎಂವಿಟಿ ಬೆಂಗಳೂರು-ಮಂಗಳೂರು ವಿಶೇಷ ರೈಲು

ಇದೇ ರೀತಿಯಾಗಿ ಎಸ್​ಎಂವಿಟಿ ಬೆಂಗಳೂರು ಟು ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲುಗಳು ಸಂಚಸಿಲಿವೆ. ರೈಲು ಸಂಖ್ಯೆ 06579: SMVT ಬೆಂಗಳೂರು ಟು ಮಂಗಳೂರು ಜಂಕ್ಷನ್. ಏಪ್ರಿಲ್ 17 ರಂದು ರಾತ್ರಿ 11.55 ಕ್ಕೆ SMVT ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 4 ಗಂಟೆಗೆ ಮಂಗಳೂರು ಜಂಕ್ಷನ್ ತಲುಪುತ್ತದೆ.

ರೈಲು ಸಂಖ್ಯೆ 06580: ಮಂಗಳೂರು ಜಂಕ್ಷನ್ ಟು SMVT ಬೆಂಗಳೂರು. ಏಪ್ರಿಲ್ 20 ರಂದು ಮಧ್ಯಾಹ್ನ 2.10 ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಿಗ್ಗೆ 7.30 ಕ್ಕೆ SMVT ಬೆಂಗಳೂರು ತಲುಪುತ್ತದೆ.

ಎಲ್ಲೆಲ್ಲಿ ನಿಲುಗಡೆ?

SMVT ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋದನೂರು, ಪಾಲಕ್ಕಾಡ್, ತ್ರಿಶೂರ್, ಕೋಜಿಕೋಡ್, ವಡಕರ, ತಲಸ್ಸೆರಿ, ಕಣ್ಣೂರು, ಪಯ್ಯನೂರು, ಕಾಞಂಗಾಡ್, ಕಾಸರಗೋಡು ಹಾಗೂ ಮಂಗಳೂರು.

ಯಾವೆಲ್ಲಾ ಕೋಚ್​ಗಳು ಲಭ್ಯ

1 ಪ್ರಥಮ ದರ್ಜೆ ಎಸಿ ಕೋಚ್, 2 ಎಸಿ ಟೂ-ಟೈರ್ ಕೋಚ್‌ಗಳು, 4 ಎಸಿ ತ್ರೀ-ಟೈರ್ ಕೋಚ್‌ಗಳು, 7 ಸ್ಲೀಪರ್ ಕ್ಲಾಸ್ ಕೋಚ್‌ಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಕೋಚ್‌ಗಳು ಮತ್ತು 2 ಸಾಮಾನ್ಯ ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್​​ ಕೋಚ್‌ಗಳು ಹೊಂದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:41 am, Wed, 16 April 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ