ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on:Jun 13, 2024 | 12:50 PM

ಬೆಂಗಳೂರು, ಜೂನ್.13: ಬೆಳಗ್ಗೆ ಕೆಲಸಕ್ಕೆ ಹೊರಟಿದ್ದ ಮೆಟ್ರೋ ಪ್ರಯಾಣಿಕರು (Namma Metro) ತಾಂತ್ರಿಕ ದೋಷದಿಂದ ಭಾರೀ ಸಮಸ್ಯೆ ಎದುರಿಸುವಂತಾಯಿತು. ಇತ್ತೀಚೆಗೆ ಬೆಂಗಳೂರಿನ (Bengaluru) ನಮ್ಮ ಮೆಟ್ರೋ ಪದೇಪದೇ ಕೈ ಕೊಡ್ತಿದೆ. ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ವ್ಯತ್ಯಯ ಕಂಡು ಬಂದಿದೆ. ಇಂದು ಬೆಳಗ್ಗೆ 9.58 ಗಂಟೆ ಸುಮಾರಿಗೆ ಮೆಟ್ರೋ ಹತ್ತಿದ್ದ ಪ್ರಯಾಣಿಕರು ಇನ್ನೇನು ಇಳಿಯಬೇಕು ಎಂದು ಕಾದು ನಿಂತಿದ್ದು ಡೋರ್ ಓಪನ್ ಆಗದೆ ಬೋಗಿ ಒಳಗಡೆ ಲಾಕ್ ಆಗಿದ್ದರು.

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಬಳಿಕ ಸಮಸ್ಯೆ ಆಗಿದ್ದ ಮೆಟ್ರೋ ಬೋಗಿಯನ್ನ ಮೆಜೆಸ್ಟಿಕ್​ನ ಟ್ರ್ಯಾಕ್​ಗೆ ಶಿಫ್ಟ್ ಮಾಡಿ ಮೆಟ್ರೋ ಇಂಜಿನಿಯರ್​ಗಳನ್ನ ಕರೆಸಿ ಲಾಕ್ ಆಗಿದ್ದ ಡೋರ್ ಓಪನ್ ಮಾಡಿಸಲಾಯ್ತು. ಬಳಿಕ ಎಂದಿನಂತೆ ಸಂಚಾರ ಯಥಾಸ್ಥಿತಿಗೆ ಬಂತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ. ನಮ್ಮ ಮೆಟ್ರೋ ಎರಡು ಗಂಟೆಗಳ ಬಳಿಕ ದೋಷಯುಕ್ತ ಮೆಟ್ರೋ ಬೋಗಿ ಸರಿಪಡಿಸಿದೆ.

ಇದನ್ನೂ ಓದಿ: ಮಂಗಳೂರು: ಪೊಲೀಸರ ಹೆಸರಿನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಮುಂಜಾನೆ 9.58ರಲ್ಲಿ ವ್ಯತ್ಯಯವುಂಟಾಗಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬೆಳಗ್ಗೆ 11:30 ರ ವೇಳೆಗೆ ಸಹಜ ಸ್ಥಿತಿಗೆ ಮರಳಿದೆ. ಬೆಳಗ್ಗೆ ಕೆಲಸಕ್ಕೆ ತರಳುವ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆ ಉಂಟಾದ ಕಾರಣ ಕಚೇರಿಗಳಿಗೆ ತಲುಪಲು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಿತ್ತು. ಈಗ ಮಟ್ರೋ ಸೇವೆ ಎಂದಿನಂತೆ ಸಹಜ ಸ್ಥಿತಿಗೆ ಬಂದಿದೆ. ಆದರೂ ಜನರಲ್ಲಿ ಕೊಂಚ ಭಯ ಉಂಟಾಗಿದೆ. ಇವತ್ತು ಸಂಭವಿಸಿದ ಸಮಸ್ಯೆಯಿಂದಾಗಿ ಪ್ರಯಾಣಿಕರು ಒಂದು ಗಂಟೆಗಳ ಕಾಲ ಮೆಟ್ರೋ ರೈಲಿನ ಒಳಗಡೆಯೇ ಲಾಕ್ ಆಗುವಂತಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:46 pm, Thu, 13 June 24

ತಾಜಾ ಸುದ್ದಿ
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ