AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Jun 13, 2024 | 12:50 PM

Share

ಬೆಂಗಳೂರು, ಜೂನ್.13: ಬೆಳಗ್ಗೆ ಕೆಲಸಕ್ಕೆ ಹೊರಟಿದ್ದ ಮೆಟ್ರೋ ಪ್ರಯಾಣಿಕರು (Namma Metro) ತಾಂತ್ರಿಕ ದೋಷದಿಂದ ಭಾರೀ ಸಮಸ್ಯೆ ಎದುರಿಸುವಂತಾಯಿತು. ಇತ್ತೀಚೆಗೆ ಬೆಂಗಳೂರಿನ (Bengaluru) ನಮ್ಮ ಮೆಟ್ರೋ ಪದೇಪದೇ ಕೈ ಕೊಡ್ತಿದೆ. ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ವ್ಯತ್ಯಯ ಕಂಡು ಬಂದಿದೆ. ಇಂದು ಬೆಳಗ್ಗೆ 9.58 ಗಂಟೆ ಸುಮಾರಿಗೆ ಮೆಟ್ರೋ ಹತ್ತಿದ್ದ ಪ್ರಯಾಣಿಕರು ಇನ್ನೇನು ಇಳಿಯಬೇಕು ಎಂದು ಕಾದು ನಿಂತಿದ್ದು ಡೋರ್ ಓಪನ್ ಆಗದೆ ಬೋಗಿ ಒಳಗಡೆ ಲಾಕ್ ಆಗಿದ್ದರು.

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಬಳಿಕ ಸಮಸ್ಯೆ ಆಗಿದ್ದ ಮೆಟ್ರೋ ಬೋಗಿಯನ್ನ ಮೆಜೆಸ್ಟಿಕ್​ನ ಟ್ರ್ಯಾಕ್​ಗೆ ಶಿಫ್ಟ್ ಮಾಡಿ ಮೆಟ್ರೋ ಇಂಜಿನಿಯರ್​ಗಳನ್ನ ಕರೆಸಿ ಲಾಕ್ ಆಗಿದ್ದ ಡೋರ್ ಓಪನ್ ಮಾಡಿಸಲಾಯ್ತು. ಬಳಿಕ ಎಂದಿನಂತೆ ಸಂಚಾರ ಯಥಾಸ್ಥಿತಿಗೆ ಬಂತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ. ನಮ್ಮ ಮೆಟ್ರೋ ಎರಡು ಗಂಟೆಗಳ ಬಳಿಕ ದೋಷಯುಕ್ತ ಮೆಟ್ರೋ ಬೋಗಿ ಸರಿಪಡಿಸಿದೆ.

ಇದನ್ನೂ ಓದಿ: ಮಂಗಳೂರು: ಪೊಲೀಸರ ಹೆಸರಿನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಮುಂಜಾನೆ 9.58ರಲ್ಲಿ ವ್ಯತ್ಯಯವುಂಟಾಗಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬೆಳಗ್ಗೆ 11:30 ರ ವೇಳೆಗೆ ಸಹಜ ಸ್ಥಿತಿಗೆ ಮರಳಿದೆ. ಬೆಳಗ್ಗೆ ಕೆಲಸಕ್ಕೆ ತರಳುವ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆ ಉಂಟಾದ ಕಾರಣ ಕಚೇರಿಗಳಿಗೆ ತಲುಪಲು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಿತ್ತು. ಈಗ ಮಟ್ರೋ ಸೇವೆ ಎಂದಿನಂತೆ ಸಹಜ ಸ್ಥಿತಿಗೆ ಬಂದಿದೆ. ಆದರೂ ಜನರಲ್ಲಿ ಕೊಂಚ ಭಯ ಉಂಟಾಗಿದೆ. ಇವತ್ತು ಸಂಭವಿಸಿದ ಸಮಸ್ಯೆಯಿಂದಾಗಿ ಪ್ರಯಾಣಿಕರು ಒಂದು ಗಂಟೆಗಳ ಕಾಲ ಮೆಟ್ರೋ ರೈಲಿನ ಒಳಗಡೆಯೇ ಲಾಕ್ ಆಗುವಂತಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:46 pm, Thu, 13 June 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್