AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ಆಯೇಷಾ ಬಾನು|

Updated on:Jun 13, 2024 | 12:50 PM

Share

ಬೆಂಗಳೂರು, ಜೂನ್.13: ಬೆಳಗ್ಗೆ ಕೆಲಸಕ್ಕೆ ಹೊರಟಿದ್ದ ಮೆಟ್ರೋ ಪ್ರಯಾಣಿಕರು (Namma Metro) ತಾಂತ್ರಿಕ ದೋಷದಿಂದ ಭಾರೀ ಸಮಸ್ಯೆ ಎದುರಿಸುವಂತಾಯಿತು. ಇತ್ತೀಚೆಗೆ ಬೆಂಗಳೂರಿನ (Bengaluru) ನಮ್ಮ ಮೆಟ್ರೋ ಪದೇಪದೇ ಕೈ ಕೊಡ್ತಿದೆ. ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ವ್ಯತ್ಯಯ ಕಂಡು ಬಂದಿದೆ. ಇಂದು ಬೆಳಗ್ಗೆ 9.58 ಗಂಟೆ ಸುಮಾರಿಗೆ ಮೆಟ್ರೋ ಹತ್ತಿದ್ದ ಪ್ರಯಾಣಿಕರು ಇನ್ನೇನು ಇಳಿಯಬೇಕು ಎಂದು ಕಾದು ನಿಂತಿದ್ದು ಡೋರ್ ಓಪನ್ ಆಗದೆ ಬೋಗಿ ಒಳಗಡೆ ಲಾಕ್ ಆಗಿದ್ದರು.

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಬಳಿಕ ಸಮಸ್ಯೆ ಆಗಿದ್ದ ಮೆಟ್ರೋ ಬೋಗಿಯನ್ನ ಮೆಜೆಸ್ಟಿಕ್​ನ ಟ್ರ್ಯಾಕ್​ಗೆ ಶಿಫ್ಟ್ ಮಾಡಿ ಮೆಟ್ರೋ ಇಂಜಿನಿಯರ್​ಗಳನ್ನ ಕರೆಸಿ ಲಾಕ್ ಆಗಿದ್ದ ಡೋರ್ ಓಪನ್ ಮಾಡಿಸಲಾಯ್ತು. ಬಳಿಕ ಎಂದಿನಂತೆ ಸಂಚಾರ ಯಥಾಸ್ಥಿತಿಗೆ ಬಂತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ. ನಮ್ಮ ಮೆಟ್ರೋ ಎರಡು ಗಂಟೆಗಳ ಬಳಿಕ ದೋಷಯುಕ್ತ ಮೆಟ್ರೋ ಬೋಗಿ ಸರಿಪಡಿಸಿದೆ.

ಇದನ್ನೂ ಓದಿ: ಮಂಗಳೂರು: ಪೊಲೀಸರ ಹೆಸರಿನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಮುಂಜಾನೆ 9.58ರಲ್ಲಿ ವ್ಯತ್ಯಯವುಂಟಾಗಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬೆಳಗ್ಗೆ 11:30 ರ ವೇಳೆಗೆ ಸಹಜ ಸ್ಥಿತಿಗೆ ಮರಳಿದೆ. ಬೆಳಗ್ಗೆ ಕೆಲಸಕ್ಕೆ ತರಳುವ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆ ಉಂಟಾದ ಕಾರಣ ಕಚೇರಿಗಳಿಗೆ ತಲುಪಲು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಿತ್ತು. ಈಗ ಮಟ್ರೋ ಸೇವೆ ಎಂದಿನಂತೆ ಸಹಜ ಸ್ಥಿತಿಗೆ ಬಂದಿದೆ. ಆದರೂ ಜನರಲ್ಲಿ ಕೊಂಚ ಭಯ ಉಂಟಾಗಿದೆ. ಇವತ್ತು ಸಂಭವಿಸಿದ ಸಮಸ್ಯೆಯಿಂದಾಗಿ ಪ್ರಯಾಣಿಕರು ಒಂದು ಗಂಟೆಗಳ ಕಾಲ ಮೆಟ್ರೋ ರೈಲಿನ ಒಳಗಡೆಯೇ ಲಾಕ್ ಆಗುವಂತಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:46 pm, Thu, 13 June 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್