AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ.

ಕೆಟ್ಟು ನಿಂತ ಮೆಟ್ರೋ: ಡೋರ್ ಓಪನ್ ಆಗದೆ ಒಳಗಿದ್ದ ಪ್ರಯಾಣಿಕರು ಪರದಾಟ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Jun 13, 2024 | 12:50 PM

Share

ಬೆಂಗಳೂರು, ಜೂನ್.13: ಬೆಳಗ್ಗೆ ಕೆಲಸಕ್ಕೆ ಹೊರಟಿದ್ದ ಮೆಟ್ರೋ ಪ್ರಯಾಣಿಕರು (Namma Metro) ತಾಂತ್ರಿಕ ದೋಷದಿಂದ ಭಾರೀ ಸಮಸ್ಯೆ ಎದುರಿಸುವಂತಾಯಿತು. ಇತ್ತೀಚೆಗೆ ಬೆಂಗಳೂರಿನ (Bengaluru) ನಮ್ಮ ಮೆಟ್ರೋ ಪದೇಪದೇ ಕೈ ಕೊಡ್ತಿದೆ. ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ವ್ಯತ್ಯಯ ಕಂಡು ಬಂದಿದೆ. ಇಂದು ಬೆಳಗ್ಗೆ 9.58 ಗಂಟೆ ಸುಮಾರಿಗೆ ಮೆಟ್ರೋ ಹತ್ತಿದ್ದ ಪ್ರಯಾಣಿಕರು ಇನ್ನೇನು ಇಳಿಯಬೇಕು ಎಂದು ಕಾದು ನಿಂತಿದ್ದು ಡೋರ್ ಓಪನ್ ಆಗದೆ ಬೋಗಿ ಒಳಗಡೆ ಲಾಕ್ ಆಗಿದ್ದರು.

ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ ಪ್ರಯಾಣಿಕರು ಪರದಾಡುವಂತಾಗಿತ್ತು. ಬಳಿಕ ಸಮಸ್ಯೆ ಆಗಿದ್ದ ಮೆಟ್ರೋ ಬೋಗಿಯನ್ನ ಮೆಜೆಸ್ಟಿಕ್​ನ ಟ್ರ್ಯಾಕ್​ಗೆ ಶಿಫ್ಟ್ ಮಾಡಿ ಮೆಟ್ರೋ ಇಂಜಿನಿಯರ್​ಗಳನ್ನ ಕರೆಸಿ ಲಾಕ್ ಆಗಿದ್ದ ಡೋರ್ ಓಪನ್ ಮಾಡಿಸಲಾಯ್ತು. ಬಳಿಕ ಎಂದಿನಂತೆ ಸಂಚಾರ ಯಥಾಸ್ಥಿತಿಗೆ ಬಂತು. ಮೆಟ್ರೋ ಪ್ರಯಾಣಿಕರಿಗೆ ಆದ ಅಡಚಣೆ ಬಗ್ಗೆ ಬಿಎಂಆರ್​ಸಿಎಲ್ ವಿಷಾಧ ವ್ಯಕ್ತಪಡಿಸಿದೆ. ನಮ್ಮ ಮೆಟ್ರೋ ಎರಡು ಗಂಟೆಗಳ ಬಳಿಕ ದೋಷಯುಕ್ತ ಮೆಟ್ರೋ ಬೋಗಿ ಸರಿಪಡಿಸಿದೆ.

ಇದನ್ನೂ ಓದಿ: ಮಂಗಳೂರು: ಪೊಲೀಸರ ಹೆಸರಿನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ಮುಂಜಾನೆ 9.58ರಲ್ಲಿ ವ್ಯತ್ಯಯವುಂಟಾಗಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬೆಳಗ್ಗೆ 11:30 ರ ವೇಳೆಗೆ ಸಹಜ ಸ್ಥಿತಿಗೆ ಮರಳಿದೆ. ಬೆಳಗ್ಗೆ ಕೆಲಸಕ್ಕೆ ತರಳುವ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆ ಉಂಟಾದ ಕಾರಣ ಕಚೇರಿಗಳಿಗೆ ತಲುಪಲು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಿತ್ತು. ಈಗ ಮಟ್ರೋ ಸೇವೆ ಎಂದಿನಂತೆ ಸಹಜ ಸ್ಥಿತಿಗೆ ಬಂದಿದೆ. ಆದರೂ ಜನರಲ್ಲಿ ಕೊಂಚ ಭಯ ಉಂಟಾಗಿದೆ. ಇವತ್ತು ಸಂಭವಿಸಿದ ಸಮಸ್ಯೆಯಿಂದಾಗಿ ಪ್ರಯಾಣಿಕರು ಒಂದು ಗಂಟೆಗಳ ಕಾಲ ಮೆಟ್ರೋ ರೈಲಿನ ಒಳಗಡೆಯೇ ಲಾಕ್ ಆಗುವಂತಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:46 pm, Thu, 13 June 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ