AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ಮಾಡೋದೇ ದೊಡ್ಡ ಸವಾಲು: ಯೆಲ್ಲೋ ಲೈನ್​ನಲ್ಲಿ ಭಾರಿ ಸಮಸ್ಯೆ

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದರೊಂದಿಗೆ ಪಾರ್ಕಿಂಗ್ ಸಮಸ್ಯೆ ಮತ್ತು ಸಿಬ್ಬಂದಿಗಳ ಕೊರತೆಯೂ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೇಸರವನ್ನುಂಟುಮಾಡಿದೆ. ಪರ್ಪಲ್ ಲೈನ್​ನಲ್ಲಿ ಟಿಕೆಟ್ ಕೊಡಲು ಸಿಬ್ಬಂದಿಗಳ ಕೊರತೆಯಿದ್ದು, ದಿನ ನಿತ್ಯ ಕಾಲೇಜಿಗೆ ಮೆಟ್ರೋದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ಮಾಡೋದೇ ದೊಡ್ಡ ಸವಾಲು: ಯೆಲ್ಲೋ ಲೈನ್​ನಲ್ಲಿ ಭಾರಿ ಸಮಸ್ಯೆ
ಮೆಟ್ರೊ ಪ್ರಯಾಣಿಕರಿಗೆ ಪಾರ್ಕಿಂಗ್ ಅವ್ಯವಸ್ಥೆ
ಕಿರಣ್​ ಸೂರ್ಯ
| Edited By: |

Updated on: Sep 19, 2025 | 12:49 PM

Share

ಬೆಂಗಳೂರು, ಸೆಪ್ಟೆಂಬರ್ 19: ಬೆಂಗಳೂರಿನ ಆರ್.ವಿ ರೋಡ್ ಬೊಮ್ಮಸಂದ್ರ ಯೆಲ್ಲೋ ಲೈನ್​ನ ಕೆಲವೊಂದು ಮೆಟ್ರೋ ಸ್ಟೇಷನ್​ಗಳಲ್ಲಿ (Namma metro) ಪ್ರಯಾಣಿಕರಿಗೆ ವಾಹನಗಳನ್ನು ಪಾರ್ಕಿಂಗ್ ಮಾಡಲು ವ್ಯವಸ್ಥೆ ಇಲ್ಲ, ಇತ್ತ ಪರ್ಪಲ್ ಲೈನ್​ನ ಕೆಲ ಮೆಟ್ರೋ ಸ್ಟೇಷನ್​ಗಳಲ್ಲಿ ಟಿಕೆಟ್ ಕೊಡಲು ಸಿಬ್ಬಂದಿಯೇ ಇಲ್ಲ. ಇದರಿಂದ 20 ರಿಂದ 30 ನಿಮಿಷಗಳ ಕಾಲ ಕ್ಯೂನಲ್ಲಿ ನಿಂತು ಪ್ರಯಾಣಿಕರು ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಬಂದಿದೆ.

ಮೆಟ್ರೋ ಪರ್ಪಲ್ ಲೈಲ್ ಸ್ಟೇಷನ್​ನಲ್ಲಿ ಆಗಿರುವ ಸಮಸ್ಯೆಗಳೇನು?

ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗುತ್ತಿದೆ. ಚಲ್ಲಘಟ್ಟ ಟು ವೈಟ್ ಫೀಲ್ಡ್ (ಪರ್ಪಲ್ ಲೈನ್) ನ ಕೆಲ ಮೆಟ್ರೋ ಸ್ಟೇಷನ್​ಗಳಲ್ಲಿ ಮೆಟ್ರೋ ಟಿಕೆಟ್ ಪಡೆಯಲು 30 ನಿಮಿಷ ಸಮಯ ಬೇಕಾಗುತ್ತಿದೆ. ಮೆಟ್ರೋ ಟಿಕೆಟ್ ಪಡೆಯಲು ಪ್ರಯಾಣಿಕರು ಉದ್ದದ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಪರ್ಪಲ್ ಲೈನ್​ನ ಕೆಲ ಸ್ಟೇಷನ್ಗಳಲ್ಲಂತೂ ಟಿಕೆಟ್ ಕೊಡಲು ಸಿಬ್ಬಂದಿಯೇ ಇಲ್ಲ.      ಇದೆಲ್ಲದರ ಜೊತೆಗೆ ಲಿಫ್ಟ್, ಎಸ್ಕಲೇಟರ್​ಗಳು  ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಮೆಟ್ರೋದಲ್ಲಿ 15 ನಿಮಿಷಕ್ಕೇ ತಲುಪುವ ಜಾಗಕ್ಕೆ ಹೋಗಲು 90 ನಿಮಿಷಗಳು ಹಿಡಿಯುತ್ತಿವೆ. ಮೆಟ್ರೋ ಟೋಕನ್ಗಾಗಿ ಅರ್ಧ ಗಂಟೆ ಕಾಯಬೇಕು. ಇದೆಲ್ಲದರಿಂದಾಗಿ ಮೆಟ್ರೋ ಪ್ರಯಾಣಿಕರು ಅದರಲ್ಲಿಯೂ ವಿದ್ಯಾರ್ಥಿಗಳು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಸಿಬ್ಬಂದಿಯ ಕೊರತೆಯಿಂದಾಗಿ ಕಾಲೇಜಿಗೆ ಹೋಗಲು ತಡವಾಗುತ್ತಿದೆ. ಕ್ಲಾಸ್​ಗಳು ತಪ್ಪಿಹೋಗುತ್ತಿವೆ. ಸಧ್ಯದ ಪರಿಸ್ಥಿತಿಯಲ್ಲಿ BMTC ಬಸ್​ನಲ್ಲೇ ಬೇಗ ಹೋಗಬಹುದು. ಬಿಎಂಆರ್‌ಸಿಎಲ್ ಇದರ ಬಗ್ಗೆ ಗಮನ ಹರಿಸಬೇಕೆಂದು ವಿದ್ಯಾರ್ಥಿಗಳು ಬೇಡಿಕೆಯಿಟ್ಟಿದ್ದಾರೆ.

ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್​ಗಾಗಿ ಪ್ರಯಾಣಿಕರ ಪರದಾಟ!

ಯೆಲ್ಲೂ ಲೈನ್ ಮೆಟ್ರೋ ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ  ಪ್ರಯಾಣಿಕರು ಪರದಾಡುವಂತಾಗಿದೆ. ಆರ್.ವಿ ರೋಡ್​ನಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗದ 16 ಮೆಟ್ರೋ ಸ್ಟೇಷನ್​ಗಳ ಪೈಕಿ 11 ಸ್ಟೇಷನ್ ಗಳಲ್ಲಿ ಮಾತ್ರ ಪಾರ್ಕಿಂಗ್ ವ್ಯವಸ್ಥೆ ಇದೆ. ಉಳಿದ 5 ಮೆಟ್ರೋ ಸ್ಟೇಷನ್​ಳಲ್ಲಿ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ. ಪ್ರತಿದಿನ ನಮ್ಮ ಮೆಟ್ರೋದ ಮೂರು ಮಾರ್ಗದಲ್ಲೂ ಸುಮಾರು 10 ಲಕ್ಷ ಮೆಟ್ರೋ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ. ಅದರಲ್ಲಿ ಯೆಲ್ಲೋ ಲೈನ್​ನಲ್ಲಿ ಸುಮಾರು 70 ರಿಂದ 80 ಸಾವಿರ ಪ್ರಯಾಣಿಕರು ಪ್ರಯಾಣ ಮಾಡುತ್ತಾರೆ. ನಮ್ಮ ಮೆಟ್ರೋದ ಗ್ರೀನ್ ಮತ್ತು ನೇರಳೆ ಮಾರ್ಗದಲ್ಲಿ ಒಟ್ಟು 83 ಮೆಟ್ರೋ ಸ್ಟೇಷನ್​ಗಳಿವೆ. ಅವುಗಳಲ್ಲಿ 18 ಸ್ಟೇಷನ್​ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲ.  ಈ ಅವ್ಯವಸ್ಥೆಯಿಂದ ಬೇಸತ್ತ ಜನರು ಸ್ಟೇಷನ್​ಗಳ ಅಕ್ಕ ಪಕ್ಕದಲ್ಲಿರುವ ಮನೆಗಳ ಮುಂದೆ ವಾಹನಗಳನ್ನು ಪಾರ್ಕ್ ಮಾಡಿ ಹೋಗುತ್ತಿದ್ದಾರೆ.

ಇದನ್ನೂ ಓದಿ ನಮ್ಮ ಮೆಟ್ರೋ ಬ್ಲೂ ಲೈನ್ ಉದ್ಘಾಟನೆ ಯಾವಾಗ? ಡೆಡ್​ಲೈನ್ ನಿದಿಪಡಿಸಿದ ಬಿಎಂಆರ್​ಸಿಎಲ್

ಈ ಬಗ್ಗೆ ಪ್ರಯಾಣಿಕರು ಮೆಟ್ರೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಮೆಟ್ರೋ ಅಧಿಕಾರಿಗಳು ಈಗಾಗಲೇ ಪಾರ್ಕಿಂಗ್ ನೀಡಿದ್ದೇವೆ ಆದರೆ ಟೆಂಡರ್ ಸಮಸ್ಯೆ ಆಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಮುಂದಾಗುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ದಿನನಿತ್ಯ ಓಡಾಡುವ ಮೆಟ್ರೋ ಪ್ರಯಾಣಿಕರು ಈ ಬಗ್ಗೆ ಬಿಎಂಆರ್​ಸಿಎಲ್ ಅಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!