AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ಕಿರಿಕಿರಿ ತಪ್ಪಿಸಲು ಮಾಸ್ಟರ್ ಪ್ಲ್ಯಾನ್; ಒಂದೇ ಸೂರಿನಡಿ ಬರಲಿದೆ ಬೆಂಗಳೂರಿನ ಎಲ್ಲ ಸಾರ್ವಜನಿಕ ಸಾರಿಗೆ

BMLTA Bill Passed; ಈ ವಿಧೇಯಕ ರಾಷ್ಟ್ರೀಯ ನಗರ ಸಾರಿಗೆ ನೀತಿಗೆ ಪೂರಕವಾಗಿದೆ. ಸಮಗ್ರ ಸಾರಿಗೆ ಯೋಜನೆಯನ್ನು ಸಕ್ರಿಯಗೊಳಿಸುವುದಕ್ಕಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳನ್ನು ಒಂದು ಚೌಕಟ್ಟಿನಡಿ ತರಲು ನೆರವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಸಂಚಾರ ಕಿರಿಕಿರಿ ತಪ್ಪಿಸಲು ಮಾಸ್ಟರ್ ಪ್ಲ್ಯಾನ್; ಒಂದೇ ಸೂರಿನಡಿ ಬರಲಿದೆ ಬೆಂಗಳೂರಿನ ಎಲ್ಲ ಸಾರ್ವಜನಿಕ ಸಾರಿಗೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Dec 28, 2022 | 12:21 PM

ಬೆಂಗಳೂರು: ಆಟೋ ರಿಕ್ಷಾ, ಸಿಟಿ ಬಸ್​, ಮೆಟ್ರೊ ರೈಲು ಸೇರಿದಂತೆ ನಗರದ ಎಲ್ಲ ಸಾರಿಗೆ ವ್ಯವಸ್ಥೆಯನ್ನು ಒಂದೇ ಸೂರಿನಡಿ ತರುವ ‘ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ’ಕ್ಕೆ (BMLTA Bill) ವಿಧಾನ ಮಂಡಲ ಅಧಿವೇಶನದಲ್ಲಿ ಅನುಮೋದನೆ ದೊರೆತಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ (Winter Session) ವಿಧೇಯಕಕ್ಕೆ ಅನುಮೋದನೆ ಪಡೆಯಲಾಗಿದೆ. ಬೆಂಗಳೂರಿನ ಸಂಚಾರ ಬಿಕ್ಕಟ್ಟಿನ ನಿರ್ವಹಣೆಗೆ ಈ ವಿಧೇಯಕ ನೆರವಾಗಲಿದೆ ಎನ್ನಲಾಗಿದೆ. ಈ ವಿಧೇಯಕ ರಾಷ್ಟ್ರೀಯ ನಗರ ಸಾರಿಗೆ ನೀತಿಗೆ ಪೂರಕವಾಗಿದೆ. ಸಮಗ್ರ ಸಾರಿಗೆ ಯೋಜನೆಯನ್ನು ಸಕ್ರಿಯಗೊಳಿಸುವುದಕ್ಕಾಗಿ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳನ್ನು ಒಂದು ಚೌಕಟ್ಟಿನಡಿ ತರಲು ನೆರವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ಅಂಗೀಕಾರ

ಭೂ ಸಾರಿಗೆ ಪ್ರಾಧಿಕಾರ ವಿಧೇಯಕಕ್ಕೆ ಅಂಗೀಕಾರ ದೊರೆತಿರುವ ಬಗ್ಗೆ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ಸಾರಿಗೆ ವ್ಯವಸ್ಥೆಯು ‘ಬೆಂಗಳೂರು ಮಹಾ ನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ’ದ ಅಡಿ ಬರಲಿದೆ. ಸುಮಾರು 279 ಚದರ ಕಿಲೋಮೀಟರ್ ವ್ಯಾಪ್ತಿಗೆ ಕಾಯ್ದೆ ಅನ್ವಯವಾಗಲಿದೆ. ಎಲ್ಲ ಸಾರ್ವಜನಿಕ ಸಾರಿಗೆಗಳನ್ನು ಸಂಯೋಜಿಸಿ ಹೊಸ ಪ್ರಾಧಿಕಾರ ರಚಿಸಲಾಗುವುದು. ನಗರ ಸಂಚಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಪ್ರಾಧಿಕಾರ ರೂಪಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿ ದಿನ ರಸ್ತೆಗಿಳಿಯುತ್ತಿವೆ 5,000 ವಾಹನ

ಬೆಂಗಳೂರು ಸೂಕ್ತ ಯೋಜನೆಯೊಂದಿಗೆ ಅಭಿವೃದ್ಧಿಹೊಂದಿಲ್ಲ. ನಗರ ಬೆಳೆದಿರುವುದಕ್ಕೆ ತಕ್ಕಂತೆ ರಸ್ತೆಗಳ ಅಗಲೀಕರಣವಾಗಿಲ್ಲ. ಪ್ರತಿ ದಿನ ಹೊಸದಾಗಿ 5,000 ವಾಹನಗಳು ರಸ್ತೆಗಿಳಿಯುತ್ತಿವೆ. ನಗರವು 1.3 ಕೋಟಿ ಜನಸಂಖ್ಯೆ ಹೊಂದಿದ್ದು, ಶೀಘ್ರದಲ್ಲೇ ವಾಹನಗಳ ಸಂಖ್ಯೆ ಇದನ್ನೂ ಮೀರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರ ಸಾರಿಗೆಗೆ ಸಂಬಂಧಿಸಿ ವೈಜ್ಞಾನಿಕ ಅಧ್ಯಯನ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಐಐಎಸ್​ಸಿಯನ್ನು ಸಂಪರ್ಕಿಸಲಾಗಿದ್ದು, ಅಧ್ಯಯನ ನಡೆಸುವಂತೆ ಕೋರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೂ ಸಾರಿಗೆ ಪ್ರಾಧಿಕಾರದಲ್ಲಿ ಯಾರೆಲ್ಲ ಇರಲಿದ್ದಾರೆ?

ಮುಖ್ಯಮಂತ್ರಿಗಳು ಭೂ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ. ಬೆಂಗಳೂರು ಉಸ್ತುವಾರಿ ಸಚಿವರು ಮತ್ತು ರಾಜ್ಯ ಸಾರಿಗೆ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಇತರ ಸದಸ್ಯರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಬೆಂಗಳೂರು ನಗರ ಮೇಯರ್, ಪೊಲೀಸ್ ಆಯುಕ್ತರು, ಸರ್ಕಾರದ ವಿವಿಧ ಏಜೆನ್ಸಿಗಳ ಪ್ರತಿನಿಧಿಗಳು ಇರಲಿದ್ದಾರೆ.

ಭೂ ಸಾರಿಗೆ ಪ್ರಾಧಿಕಾರದ ಕೆಲಸವೇನು?

ಭೂ ಸಾರಿಗೆ ಪ್ರಾಧಿಕಾರವು ಸುಸ್ಥಿರ ನಗರ ಸಾರಿಗೆ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ. ಲಭ್ಯವಿರುವ ಭೂ ಪ್ರದೇಶದ ಸಮರ್ಪಕ ಬಳಕೆಯೊಂದಿಗೆ ಸುಗಮ ಸಂಚಾರವನ್ನು ಉತ್ತೇಜಿಸಲು ಕ್ರಮಕೈಗೊಳ್ಳಲಿದೆ. ಭೂ ಸಾರಿಗೆ ಪ್ರಾಧಿಕಾರವನ್ನು ಸಾರ್ವಜನಿಕ ವಲಯದ ಅನೇಕರು ಸ್ವಾಗತಿಸಿದ್ದಾರೆ. ಇನ್ನು ಕೆಲವರು ಪ್ರಾಧಿಕಾರ ವಿಧೇಯಕವು ಹಲವು ಮಿತಿಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ