AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿಗೆ ಬರಲಿದೆ ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆ: ಸ್ವಯಂಚಾಲಿತ ಶುಲ್ಕ ಪಾವತಿ

ಜಿಪಿಎಸ್(GPS) ಆಧಾರಿತ ಟೋಲ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಬೆಂಗಳೂರು-ಮೈಸೂರು ಹೆದ್ದಾರಿ (Bengaluru Mysuru Highway) ಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಜೊತೆಗೆ ಬೆಂಗಳೂರು ಉಪನಗರ ರೈಲು ಯೋಜನೆಯ ಬಗ್ಗೆಯೂ ವಿವರ ನೀಡಿದ್ದು, ಈ ನಾಲ್ಕು ಮಾರ್ಗ ಒಳಗೊಂಡಿದೆ.

ಬೆಂಗಳೂರು-ಮೈಸೂರು ಹೆದ್ದಾರಿಗೆ ಬರಲಿದೆ ಜಿಪಿಎಸ್ ಆಧಾರಿತ ಟೋಲಿಂಗ್ ವ್ಯವಸ್ಥೆ: ಸ್ವಯಂಚಾಲಿತ ಶುಲ್ಕ ಪಾವತಿ
ಬೆಂಗಳೂರು-ಮೈಸೂರು ಹೆದ್ದಾರಿ; ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ
TV9 Web
| Edited By: |

Updated on: Feb 11, 2024 | 8:44 PM

Share

ಬೆಂಗಳೂರು, ಫೆ.11: ಜಿಪಿಎಸ್(GPS) ಆಧಾರಿತ ಟೋಲ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲು ಬೆಂಗಳೂರು-ಮೈಸೂರು ಹೆದ್ದಾರಿ(Bengaluru Mysuru Highway)ಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಅಡೆತಡೆ ಇಲ್ಲದ ಫ್ರೀ-ಫ್ಲೋ-ಟೋಲಿಂಗ್​ಗೆ ಅವಕಾಶ ನೀಡುವ ಜಿಪಿಎಸ್ ಆಧಾರಿತ ವ್ಯವಸ್ಥೆಯಂತಹ ಹೊಸ ತಂತ್ರಜ್ಞಾನಗಳ ಕುರಿತು ಸಲಹೆ ಪಡೆಯಲು ರಸ್ತೆ ಸಾರಿಗೆ ಸಚಿವಾಲಯವು ಕನ್ಸಲ್ಟೆಂಟ್ ನೇಮಕ ಮಾಡಿದೆ ಎಂದು ವಿವರಿಸಿದ್ದಾರೆ.

ಸ್ವಯಂಚಾಲಿತ ಶುಲ್ಕ ಪಾವತಿ

ಜಿಎನ್ಎಸ್ಎಸ್ ಆಧಾರಿತ ಟೋಲಿಂಗ್ ಬಗ್ಗೆ ತಿಳಿಸಿದ ಸಚಿವರು, ‘ಈ ವ್ಯವಸ್ಥೆಯು ಹೆದ್ದಾರಿಯಲ್ಲಿ ವಾಹನ ಇರುವ ಜಾಗವನ್ನು ತಿಳಿಸುತ್ತದೆ ಹಾಗೂ ಪ್ರಯಾಣಿಸಿದ ದೂರವನ್ನು ಆಧರಿಸಿ ಶುಲ್ಕ ನಿರ್ಧರಿಸುತ್ತದೆ. ಲೋಕಸಭಾ ಚುನಾವಣೆಗೆ ಮೊದಲು ಬೆಂಗಳೂರು-ಮೈಸೂರು ಎನ್ಎಚ್-275 ಸೇರಿದಂತೆ ಆಯ್ದ ಹೆದ್ದಾರಿಗಳಲ್ಲಿ ಪ್ರಾಯೋಗಿಕ ಯೋಜನೆ ಜಾರಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲು ಕೇಂದ್ರದಿಂದ 688 ಕೋಟಿ ರೂ. ಬಿಡುಗಡೆ

ಸಂಸದ ಲಹರ್ ಸಿಂಗ್ ಅವರ ಉಪನಗರ ರೈಲಿಗೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ‘ಬೆಂಗಳೂರು ಹಾಗೂ ಉಪನಗರಗಳ ನಡುವೆ ರೈಲ್ವೆ ಸಂಪರ್ಕ ಕಲ್ಪಿಸಲು 742 ಕಿ.ಮೀ. ಉದ್ದದ ಮಾರ್ಗಕ್ಕಾಗಿ ಫೈನಲ್ ಲೊಕೇಶನ್ ಸರ್ವೆ (FLS) ಮಾಡಲು ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅವರು ಬೆಂಗಳೂರು ಉಪನಗರ ರೈಲು ಯೋಜನೆಯ ಬಗ್ಗೆಯೂ ವಿವರ ನೀಡಿದ್ದು, ಇದು ನಾಲ್ಕು ಮಾರ್ಗ ಒಳಗೊಂಡಿದೆ.

1. ಕಾರಿಡಾರ್-1: ಕೆಎಸ್ಆರ್ ಬೆಂಗಳೂರು – ದೇವನಹಳ್ಳಿ(41.4 Km) 2. ಕಾರಿಡಾರ್-2: ಬೈಯ್ಯಪ್ಪನಹಳ್ಳಿ– ಚಿಕ್ಕಬಾಣಾವರ (25.01 Km) 3. ಕಾರಿಡಾರ್-3: ಕೆಂಗೇರಿ – ವೈಟ್ ಫೀಲ್ಡ್ (35.52 Km) 4. ಕಾರಿಡಾರ್-4: ಹೀಲಲಿಗೆ – ರಾಜಾನುಕುಂಟೆ (46.25 Km)

ಸಚಿವರು ಈ ಯೋಜನೆಯ ಪ್ರಗತಿಯ ಬಗ್ಗೆ ತಿಳಿಸಿದ್ದು, ಕಾರಿಡಾರ್ 2 ಹಾಗೂ 4ರ ಭೂ ಸ್ವಾಧೀನ ಪೂರ್ಣಗೊಂಡಿದೆ. ಕಾರಿಡಾರ್-2 ರಲ್ಲಿ ಕಾಮಗಾರಿ ನಡೆಯುತ್ತಿದೆ. ಕಾರಿಡಾರ್-4 ಕ್ಕೆ ಇತ್ತೀಚಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾರಿಡಾರ್ 1 ಹಾಗೂ 3 ರಲ್ಲಿ ಸರ್ವೆ ಕಾರ್ಯ ಹಾಗೂ ಭೌಗೋಳಿಕ ಸಮೀಕ್ಷೆ ಪೂರ್ಣವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟು 742 ಕಿ.ಮೀ. ಉದ್ದದ ಮಾರ್ಗಕ್ಕೆ ಎಫ್ಎಲ್ಎಸ್ ಮಂಜೂರಾಗಿದೆ. ಇದು ಬೆಂಗಳೂರು ಹಾಗೂ ಸುತ್ತಲಿನ ನಗರಗಳನ್ನು ಸಂಪರ್ಕಿಸಲಿದೆ. ಬೆಂಗಳೂರು ನಗರದಲ್ಲಿ ಡಬಲ್ ಲೈನ್ ನ ವೃತ್ತಾಕಾರದ ಮಾರ್ಗ, ಬೆಂಗಳೂರು-ತುಮಕೂರು ಕ್ವಾಡ್ರಪ್ಲಿಂಗ್ (ನಾಲ್ಕು ಮಾರ್ಗ), ಚಿಕ್ಕಬಾಣಾವಾರ-ಹಾಸನ ಡಬಲಿಂಗ್, ಬೆಂಗಳೂರು-ಮೈಸೂರು ಕ್ವಾಡ್ರಪ್ಲಿಂಗ್ ಹಾಗೂ ಬಂಗಾರಪೇಟೆ-ಜೋಲಾರಪಟ್ಟಿ ಕ್ವಾಡ್ರಪ್ಲಿಂಗ್ ಕಾಮಗಾರಿಯನ್ನು ಇದು ಒಳಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!