AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐದೇ ತಿಂಗಳಲ್ಲಿ 570 ಅಪಘಾತ, 55 ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಮೇ ವರೆಗೆ ಒಟ್ಟು 570 ಅಪಘಾತಗಳು ವರದಿಯಾಗಿವೆ. ಇವುಗಳಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದರೆ, 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐದೇ ತಿಂಗಳಲ್ಲಿ 570 ಅಪಘಾತ, 55 ಸಾವು
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ
ಗಣಪತಿ ಶರ್ಮಾ
|

Updated on: Jun 10, 2023 | 1:22 PM

Share

ಬೆಂಗಳೂರು: ಕೇವಲ ಐದು ತಿಂಗಳಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) 570 ಅಪಘಾತಗಳು (Accidents) ಸಂಭವಿಸಿದ್ದು, 55 ಮಂದಿ ಮೃತಪಟ್ಟಿದ್ದಾರೆ. ಇದು ಎಕ್ಸ್‌ಪ್ರೆಸ್‌ವೇ ಬಗ್ಗೆ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ. ಅತಿವೇಗದ ಚಾಲನೆ, ಚಾಲಕರ ನಿರ್ಲಕ್ಷ್ಯ, ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಎಕ್ಸ್​​​ಪ್ರೆಸ್ ವೇಯಲ್ಲಿ ಹೆಚ್ಚಿನ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಮೇ ವರೆಗೆ ಒಟ್ಟು 570 ಅಪಘಾತಗಳು ವರದಿಯಾಗಿವೆ. ಇವುಗಳಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದರೆ, 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 184 ಮಂದಿ ಮೂಳೆ ಮುರಿತದಂಥ ಸಮಸ್ಯೆಗಳಿಗೆ ಒಳಗಾಗಿದ್ದರೆ, 279 ಜನರು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸರಕಾರವು ಎಕ್ಸ್‌ಪ್ರೆಸ್‌ವೇನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವಾಹನಗಳ ವೇಗಕ್ಕೆ ತಡೆಯೊಡ್ಡಲು ಕ್ರಮ ಕೈಗೊಳ್ಳಬೇಕು ಮತ್ತು ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಬೇಕು ಎಂದು ಸಂಚಾರ ತಜ್ಞರು ಸಲಹೆ ನೀಡಿದ್ದಾರೆ. ಹೆಚ್ಚಿನ ವಾಹನಗಳು ಎಕ್ಸ್‌ಪ್ರೆಸ್‌ವೇಯಲ್ಲಿ ಸಾಮಾನ್ಯ 160 ಕಿಮೀ ವೇಗದಲ್ಲಿ ಸಂಚರಿಸುತ್ತಿವೆ. ಇದು ಹೆದ್ದಾರಿಯಲ್ಲಿ ಬಹು ಪ್ರವೇಶ ಮತ್ತು ನಿರ್ಗಮನ ಪ್ರದೇಶಗಳಿರುವುದರಿಂದ ಅಪಾಯಕಾರಿಯಾಗಿದೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Bengaluru Mysuru Expressway: ಬೆಂಗಳೂರಿನಿಂದ ಮೈಸೂರಿಗೆ ತೆರಳಲು ಪರ್ಯಾಯ ಮಾರ್ಗಗಳಿವು

ರಾಜ್ಯ ರಾಜಧಾನಿ ಬೆಂಗಳೂರಿನ ನಂತರ ಮೈಸೂರು ಕರ್ನಾಟಕದಲ್ಲಿ ಎರಡನೇ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಪರಿಗಣಿಸಲಾಗಿದೆ. ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 119 ಕಿಮೀ ಉದ್ದದ ಎಕ್ಸ್‌ಪ್ರೆಸ್ ವೇ ಅನ್ನು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್​​ಪ್ರೆಸ್​ ವೇಯನ್ನು ಮಂಡ್ಯದಲ್ಲಿ ಲೋಕಾರ್ಪಣೆ ಮಾಡಿದ್ದರು. ಆರಂಭದಿಂದಲೂ ದಶಪಥ ಹೆದ್ದಾರಿಯು ಒಂದಿಲ್ಲೊಂದು ಕಾರಣಕ್ಕಾಗಿ ಸುದ್ದಿಯಾಗುತ್ತಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ