AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ; ದಶಪಥ ಹೆದ್ದಾರಿಯ ವಿಶೇಷಗಳಿವು

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ (Bengaluru-Mysuru Expressway) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆಗೊಳಿಸಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಹೊತ್ತಿನಲ್ಲಿ ದಶಪಥ ಹೆದ್ದಾರಿ ಬಗ್ಗೆ ತಿಳಿಯಲೇಬೇಕಾದ ಕೆಲವು ಮಾಹಿತಿ ಇಲ್ಲಿ ನೀಡಲಾಗಿದೆ.

ಗಣಪತಿ ಶರ್ಮಾ
|

Updated on: Mar 11, 2023 | 10:24 PM

Share
Bengaluru Mysuru expressway things to know PM Modi to inaugurate march 12th

ಬೆಂಗಳೂರಿನಿಂದ ನಿಡಘಟ್ಟ ಹಾಗೂ ನಿಡಘಟ್ಟದಿಂದ ಮೈಸೂರನ್ನು ಸಂಪರ್ಕಿಸುವ 117 ಕಿಲೋಮೀಟರ್ ಉದ್ದದ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ, ಎನ್​​ಎಚ್ 275 ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಭಾರತ್ ಮಾಲಾ ಯೋಜನೆಯಡಿ ನಿರ್ಮಾಣ ಮಾಡಲಾಗಿದೆ. ಇದರ ನಿರ್ಮಾಣಕ್ಕೆ 8,408 ಕೋಟಿ ರೂ. ವ್ಯಯಿಸಲಾಗಿದೆ.

1 / 7
Bengaluru Mysuru expressway things to know PM Modi to inaugurate march 12th

ಎಕ್ಸ್​​ಪ್ರೆಸ್​ ವೇಯ ಆರು ಲೇನ್​ಗಳನ್ನು ಮುಖ್ಯ ಲೇನ್​ಗಳೆಂದು ಪರಿಗಣಿಸಲಾಗುತ್ತದೆ. ಎರಡೂ ಬದಿಯಲ್ಲಿ 2+2 ಲೇನ್​ನ ಸರ್ವೀಸ್ ರಸ್ತೆ ಇರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿ ನಿತಿನ್ ಗಡ್ಕರಿ ಹೆದ್ದಾರಿ ಇತ್ತೀಚೆಗೆ ತಿಳಿಸಿದ್ದಾರೆ.

2 / 7
Bengaluru Mysuru expressway things to know PM Modi to inaugurate march 12th

ತಜ್ಞರು ಹೇಳುವ ಪ್ರಕಾರ, ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ 10 ಲೇನ್​ಗಳದ್ದಾದರೂ 6 ಲೇನ್​ಗಳನ್ನು ಪ್ರಮುಖ ಲೇನ್​​ಗಳೆಂದು ಪರಿಗಣಿಸಲಾಗುತ್ತದೆ. ಉಳಿದ ನಾಲ್ಕನ್ನು (ಎರಡೂ ಬದಿಯ ತಲಾ 2 ಲೇನ್) ಸರ್ವೀಸ್ ರಸ್ತೆ ಎಂದೇ ಪರಿಗಣಿಸಲಾಗುತ್ತದೆ.

3 / 7
Bengaluru Mysuru expressway things to know PM Modi to inaugurate march 12th

ಎಕ್ಸ್​​ಪ್ರೆಸ್ ವೇ ಸಂಪೂರ್ಣವಾಗಿ ಕಾರ್ಯಾಚರಣೆಗೆ ತೆರೆದುಕೊಂಡ ಬಳಿಕ ಬೆಂಗಳೂರು ಮೈಸೂರು ನಡುವಣ ಪ್ರಯಾಣದ ಸಮಯ 3.5 ಗಂಟೆಯಿಂದ 1.5 ಗಂಟೆಗೆ ಇಳಿಕೆಯಾಗಲಿದೆ. ಒಂದೂ ಕಾಲು ಗಂಟೆಯಲ್ಲೇ ಪ್ರಯಾಣಿಸಬಹುದು ಎಂದೂ ಕೆಲವು ಮೂಲಗಳು ಹೇಳಿವೆ.

4 / 7
Bengaluru Mysuru expressway things to know PM Modi to inaugurate march 12th

8 ಕಿಲೋಮೀಟರ್ ಉದ್ದದ ಎಲಿವೇಟೆಡ್ ಕಾರಿಡಾರ್, 9 ಪ್ರಮುಖ ಸೇತುವೆಗಳು, 42 ಕಿರು ಸೇತುವೆಗಳು, 64 ಅಂಡರ್​ ಪಾಸ್​ಗಳನ್ನು ದಶಪಥ ಹೆದ್ದಾರಿ ಒಳಗೊಂಡಿದೆ.

5 / 7
Bengaluru Mysuru expressway things to know PM Modi to inaugurate march 12th

1 ಓವರ್​ ಪಾಸ್​, 4 ರೈಲ್ವೆ ಮೇಲ್ಸೇತುವೆಗಳು, 5 ಬೈಪಾಸ್​​ಗಳನ್ನು (ಮಂಡ್ಯ, ಮದ್ದೂರು, ರಾಮನಗರ, ಚನ್ನಪಟ್ಣ, ಬಿಡಡಿ) ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಮತ್ತು ಸುಗಮ ಸಂಚಾರದ ದೃಷ್ಟುಯಿಂದ ನಿರ್ಮಾಣ ಮಾಡಲಾಗಿದೆ.

6 / 7
Bengaluru Mysuru expressway things to know PM Modi to inaugurate march 12th

ಬೆಂಗಳೂರು ಮೈಸೂರಿನ ನಡುವಣ ಸಂಪರ್ಕದ ದೃಷ್ಟಿಯಿಂದ ಎಕ್ಸ್​ಪ್ರೆಸ್ ವೇ ಮಹತ್ವದ್ದಾಗಿದೆ. ಅದೇ ರೀತಿ ಊಟಿ, ಕೇರಳ, ಕೊಡಗು ಪ್ರದೇಶಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿಯೂ ಪ್ರಮುಖವಾದದ್ದಾಗಿದೆ. ಅದೇ ರೀತಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದಲೂ ಪ್ರಮುಖವಾದದ್ದಾಗಿದೆ ಎಂದು ಸರ್ಕಾರ ಹೇಳಿದೆ.

7 / 7
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್