Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ; ದಶಪಥ ಹೆದ್ದಾರಿಯ ವಿಶೇಷಗಳಿವು

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ (Bengaluru-Mysuru Expressway) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆಗೊಳಿಸಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಈ ಹೊತ್ತಿನಲ್ಲಿ ದಶಪಥ ಹೆದ್ದಾರಿ ಬಗ್ಗೆ ತಿಳಿಯಲೇಬೇಕಾದ ಕೆಲವು ಮಾಹಿತಿ ಇಲ್ಲಿ ನೀಡಲಾಗಿದೆ.

|

Updated on: Mar 11, 2023 | 10:24 PM

Bengaluru Mysuru expressway things to know PM Modi to inaugurate march 12th

ಬೆಂಗಳೂರಿನಿಂದ ನಿಡಘಟ್ಟ ಹಾಗೂ ನಿಡಘಟ್ಟದಿಂದ ಮೈಸೂರನ್ನು ಸಂಪರ್ಕಿಸುವ 117 ಕಿಲೋಮೀಟರ್ ಉದ್ದದ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ, ಎನ್​​ಎಚ್ 275 ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಭಾರತ್ ಮಾಲಾ ಯೋಜನೆಯಡಿ ನಿರ್ಮಾಣ ಮಾಡಲಾಗಿದೆ. ಇದರ ನಿರ್ಮಾಣಕ್ಕೆ 8,408 ಕೋಟಿ ರೂ. ವ್ಯಯಿಸಲಾಗಿದೆ.

1 / 7
Bengaluru Mysuru expressway things to know PM Modi to inaugurate march 12th

ಎಕ್ಸ್​​ಪ್ರೆಸ್​ ವೇಯ ಆರು ಲೇನ್​ಗಳನ್ನು ಮುಖ್ಯ ಲೇನ್​ಗಳೆಂದು ಪರಿಗಣಿಸಲಾಗುತ್ತದೆ. ಎರಡೂ ಬದಿಯಲ್ಲಿ 2+2 ಲೇನ್​ನ ಸರ್ವೀಸ್ ರಸ್ತೆ ಇರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿ ನಿತಿನ್ ಗಡ್ಕರಿ ಹೆದ್ದಾರಿ ಇತ್ತೀಚೆಗೆ ತಿಳಿಸಿದ್ದಾರೆ.

2 / 7
Bengaluru Mysuru expressway things to know PM Modi to inaugurate march 12th

ತಜ್ಞರು ಹೇಳುವ ಪ್ರಕಾರ, ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ 10 ಲೇನ್​ಗಳದ್ದಾದರೂ 6 ಲೇನ್​ಗಳನ್ನು ಪ್ರಮುಖ ಲೇನ್​​ಗಳೆಂದು ಪರಿಗಣಿಸಲಾಗುತ್ತದೆ. ಉಳಿದ ನಾಲ್ಕನ್ನು (ಎರಡೂ ಬದಿಯ ತಲಾ 2 ಲೇನ್) ಸರ್ವೀಸ್ ರಸ್ತೆ ಎಂದೇ ಪರಿಗಣಿಸಲಾಗುತ್ತದೆ.

3 / 7
Bengaluru Mysuru expressway things to know PM Modi to inaugurate march 12th

ಎಕ್ಸ್​​ಪ್ರೆಸ್ ವೇ ಸಂಪೂರ್ಣವಾಗಿ ಕಾರ್ಯಾಚರಣೆಗೆ ತೆರೆದುಕೊಂಡ ಬಳಿಕ ಬೆಂಗಳೂರು ಮೈಸೂರು ನಡುವಣ ಪ್ರಯಾಣದ ಸಮಯ 3.5 ಗಂಟೆಯಿಂದ 1.5 ಗಂಟೆಗೆ ಇಳಿಕೆಯಾಗಲಿದೆ. ಒಂದೂ ಕಾಲು ಗಂಟೆಯಲ್ಲೇ ಪ್ರಯಾಣಿಸಬಹುದು ಎಂದೂ ಕೆಲವು ಮೂಲಗಳು ಹೇಳಿವೆ.

4 / 7
Bengaluru Mysuru expressway things to know PM Modi to inaugurate march 12th

8 ಕಿಲೋಮೀಟರ್ ಉದ್ದದ ಎಲಿವೇಟೆಡ್ ಕಾರಿಡಾರ್, 9 ಪ್ರಮುಖ ಸೇತುವೆಗಳು, 42 ಕಿರು ಸೇತುವೆಗಳು, 64 ಅಂಡರ್​ ಪಾಸ್​ಗಳನ್ನು ದಶಪಥ ಹೆದ್ದಾರಿ ಒಳಗೊಂಡಿದೆ.

5 / 7
Bengaluru Mysuru expressway things to know PM Modi to inaugurate march 12th

1 ಓವರ್​ ಪಾಸ್​, 4 ರೈಲ್ವೆ ಮೇಲ್ಸೇತುವೆಗಳು, 5 ಬೈಪಾಸ್​​ಗಳನ್ನು (ಮಂಡ್ಯ, ಮದ್ದೂರು, ರಾಮನಗರ, ಚನ್ನಪಟ್ಣ, ಬಿಡಡಿ) ಸಂಚಾರ ದಟ್ಟಣೆ ತಡೆಯುವ ಸಲುವಾಗಿ ಮತ್ತು ಸುಗಮ ಸಂಚಾರದ ದೃಷ್ಟುಯಿಂದ ನಿರ್ಮಾಣ ಮಾಡಲಾಗಿದೆ.

6 / 7
Bengaluru Mysuru expressway things to know PM Modi to inaugurate march 12th

ಬೆಂಗಳೂರು ಮೈಸೂರಿನ ನಡುವಣ ಸಂಪರ್ಕದ ದೃಷ್ಟಿಯಿಂದ ಎಕ್ಸ್​ಪ್ರೆಸ್ ವೇ ಮಹತ್ವದ್ದಾಗಿದೆ. ಅದೇ ರೀತಿ ಊಟಿ, ಕೇರಳ, ಕೊಡಗು ಪ್ರದೇಶಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿಯೂ ಪ್ರಮುಖವಾದದ್ದಾಗಿದೆ. ಅದೇ ರೀತಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದಲೂ ಪ್ರಮುಖವಾದದ್ದಾಗಿದೆ ಎಂದು ಸರ್ಕಾರ ಹೇಳಿದೆ.

7 / 7
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು