AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Crime: ಟಿವಿ ನೋಡುವ ವಿಷಯಕ್ಕೆ ದಂಪತಿ ಜಗಳ: ಮೂರು ವರ್ಷದ ಮಗಳನ್ನೇ ಕೊಂದ ತಾಯಿ

ಟಿವಿ ನೋಡುವ ವಿಚಾರಕ್ಕೆ ದಂಪತಿ ಜಗಳವಾಡುತ್ತಿರುವಾಗ ತನ್ನ ತಂದೆಯ ಪರ ಮಾತನಾಡಿದ್ದಾಳೆ ಎಂಬ ಕಾರಣಕ್ಕೆ 3 ವರ್ಷದ ಮಗುವನ್ನು ಕತ್ತು ಹಿಸುಕಿ ತಾಯಿ ಕೊಲೆ ಮಾಡಿರುವ ಘಟನೆ ನಡೆದಿದೆ.

Bangalore Crime: ಟಿವಿ ನೋಡುವ ವಿಷಯಕ್ಕೆ ದಂಪತಿ ಜಗಳ: ಮೂರು ವರ್ಷದ ಮಗಳನ್ನೇ ಕೊಂದ ತಾಯಿ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Apr 08, 2021 | 6:06 PM

Share

ಬೆಂಗಳೂರು: ಟಿವಿ ನೋಡುವ ವಿಚಾರಕ್ಕೆ ದಂಪತಿ ಜಗಳವಾಡುತ್ತಿರುವಾಗ ತನ್ನ ತಂದೆಯ ಪರ ಮಾತನಾಡಿದ್ದಾಳೆ ಎಂಬ ಕಾರಣಕ್ಕೆ 3 ವರ್ಷದ ಮಗುವನ್ನು ಕತ್ತು ಹಿಸುಕಿ ತಾಯಿಯೇ ಕೊಲೆ ಮಾಡಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ನಾಗರಭಾವಿ ಬಳಿಯ ಬಿಡಿಎ ಲೇಔಟ್​ ಬಳಿ ಕೊಲೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆ ದಾರಿಹೋಕರು ಬಾಲಕಿಯ ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಕಾರ್ಮಿಕರಾದ ಸುಧಾ ಮತ್ತು ಈರಣ್ಣ ಅವರ ಪುತ್ರಿ ವಿನುತಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

26 ವರ್ಷದ ಸುಧಾ ಆರೋಪಿ, ಇವರು ಮಲ್ಲತಹಳ್ಳಿ ನಿವಾಸಿ. ನಗರದ ಟೈಲ್ಸ್ ಅಂಗಡಿಯಲ್ಲಿ  ಹೌಸ್​ಕೀಪಿಂಗ್  ಕೆಲಸ ಮಾಡುತ್ತಿದ್ದರು. ಮಂಗಳವಾರ ಮಧ್ಯಾಹ್ನ 2 ಗಂಟೆ ಸುಧಾ ಗಂಡ ಈರಣ್ಣ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಆಗ ಮಗಳು ವಿನುತಾ ಟಿವಿ ನೋಡುತ್ತಿದ್ದಳು. ಈರಣ್ಣ ಹೋಗಿ ಮಗಳ ಪಕ್ಕ ಕುಳಿತು, ಟಿವಿಯಲ್ಲಿ ನ್ಯೂಸ್​ ಹಾಕಿದ್ದಾರೆ.  ಅಷ್ಟಕ್ಕೇ ಸುಧಾ ಕೆಂಡಾಮಂಡಲರಾಗಿದ್ದಾರೆ.  ನೀವು ಸದಾ ನ್ಯೂಸ್ ನೋಡುತ್ತಿರುತ್ತೀರಿ.  ಎಲ್ಲಾ ಸಮಯದಲ್ಲೂ ನ್ಯೂಸ್​ಗಳನ್ನೇ ನೋಡಬೇಕು ಅಂತಾದರೆ ನೀವು ಮನೆಗೆ ಬರಬೇಕಾಗಿಲ್ಲ ಎಂದು ಸುಧಾ ಕೋಪಗೊಂಡಿದ್ದಾಳೆ. ದಂಪತಿ ಜಗಳದ ಸಮಯದಲ್ಲಿ ಮಗಳು ಮಧ್ಯ ಪ್ರವೇಶಿಸಿ ತಾಯಿಯನ್ನು ಸುಮ್ಮನಿರಲು ಹೇಳಿದ್ದಾಳೆ. ಜತೆಗೆ ತಂದೆ ಟಿವಿ ನೋಡಲಿ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಸುಧಾ ಮಗುವನ್ನು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ವಿಚಾರಣೆಯ ಬಳಿಕ ತಿಳಿಸಿದ್ದಾರೆ.

ಕೊಲೆ ಮಾಡಿದ ತಾಯಿ ಸುಧಾ, ಮಂಗಳವಾರ ರಾತ್ರಿ ಜ್ಞಾನಭಾರತಿ ಪೊಲೀಸರಿಗೆ ಮಗು ಕಾಣೆಯಾಗಿದೆ ಎಂದು ದೂರು ನೀಡಿದ್ದರು.  ಮಲ್ಲತಹಳ್ಳಿಯ ಅಂಗಡಿಗೆ ಹೋಗಿದ್ದಾಗ ಮಗು ಕಾಣೆಯಾಗಿದೆ ಎಂದು ದೂರು ದಾಖಲಿಸಿದ್ದರು. ಬುಧವಾರ ಮಗುವಿನ ಶವವನ್ನು ಗುರುತಿಸಿದ ನಂತರ, ಪೊಲೀಸರು ದಂಪತಿಯನ್ನು ಕರೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಸುಧಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ: ತುಮಕೂರಿನ ಪಾಗಲ್ ಪ್ರೇಮಿಯಿಂದ ಅಪ್ರಾಪ್ತೆ ಕೊಲೆ

ಬೆಂಗಳೂರಿನಲ್ಲಿ ಪ್ರೇಯಸಿಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮ.. ನಿಮ್ಹಾನ್ಸ್ ಪಾಲು

(bengaluru nagarbhavi woman kills 3 year old child for supporting father during couples fight over tv held)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್