AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ

Bengaluru Namma Metro: ಬೆಂಗಳೂರು ಜನರಿಗೆ ವೇಗದ ಮತ್ತು ಸುಖಕರ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಸಹಾಯಕಾರಿಯಾಗಿದೆ. ಹೀಗಾಗಿ ಬೆಂಗಳೂರಿನ ಜನ ತಮ್ಮ ಸ್ವಂತ ವಾಹನ ಬಿಟ್ಟು ಮೆಟ್ರೋದಲ್ಲಿ ಹೆಚ್ಚು ಪ್ರಯಾಣ ಮಾಡಲು ಬಯಸುತ್ತಿದ್ದಾರೆ. ಬಿಎಂಆರ್​ಸಿಎಲ್​ ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ ನೀಡಿದೆ.

Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ
ನಮ್ಮ ಮೆಟ್ರೋ
ವಿವೇಕ ಬಿರಾದಾರ
|

Updated on:Jun 14, 2024 | 9:46 AM

Share

ಬೆಂಗಳೂರು, ಜೂನ್​ 14: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿಹಿ ಸುದ್ದಿ ನೀಡಿದೆ. ಭಾನುವಾರ (ಜೂ.16) ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು (ಭಾನುವಾರ) ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವೈಟ್​​ಫೀಲ್ಡ್​ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ನಡುವಿನ ಮೆಟ್ರೋ ಸಂಚಾರ ಶುರು?

ನಮ್ಮ ಮೆಟ್ರೋ ಹಸಿರು ಕಾರಿಡಾರ್​ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಅಕ್ಷರಶಃ ಪಂಚವಾರ್ಷಿಕ ಯೋಜನೆಯಾಗಿತ್ತು. ಕಳೆದ ಐದು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ್ದ ಕಾಮಗಾರಿ ಅಂತಿಮ ಹಂತ ತಲುಪಿದ್ದು ಜುಲೈ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮೆಟ್ರೋ (Metro) ಸಂಚಾರ ಆರಂಭವಾಗಲಿದೆ. 298 ಕೋಟಿ ರೂ. ವೆಚ್ಚದ ಈ ಮಾರ್ಗ ಯೋಜನೆ ಪ್ರಕಾರ ಸಾಗಿದ್ದರೆ 2019ರ ಅಗಸ್ಟನಲ್ಲಿಯೇ ಜನಸಂಚಾರಕ್ಕೆ ಲಭ್ಯವಾಗಬೇಕಿತ್ತು.

ಇದನ್ನೂ ಓದಿ: ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

2017ರಲ್ಲಿ ಕಾಮಗಾರಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೋವಿಡ್ ಸಮಸ್ಯೆ ಸೇರಿ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಮೆಟ್ರೋ ನಿಲ್ದಾಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Fri, 14 June 24

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ