AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ

Bengaluru Namma Metro: ಬೆಂಗಳೂರು ಜನರಿಗೆ ವೇಗದ ಮತ್ತು ಸುಖಕರ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಸಹಾಯಕಾರಿಯಾಗಿದೆ. ಹೀಗಾಗಿ ಬೆಂಗಳೂರಿನ ಜನ ತಮ್ಮ ಸ್ವಂತ ವಾಹನ ಬಿಟ್ಟು ಮೆಟ್ರೋದಲ್ಲಿ ಹೆಚ್ಚು ಪ್ರಯಾಣ ಮಾಡಲು ಬಯಸುತ್ತಿದ್ದಾರೆ. ಬಿಎಂಆರ್​ಸಿಎಲ್​ ಮೆಟ್ರೋ ಪ್ರಯಾಣಿಕರಿಗೆ ಸಹಿ ಸುದ್ದಿ ನೀಡಿದೆ.

Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ
ನಮ್ಮ ಮೆಟ್ರೋ
ವಿವೇಕ ಬಿರಾದಾರ
|

Updated on:Jun 14, 2024 | 9:46 AM

Share

ಬೆಂಗಳೂರು, ಜೂನ್​ 14: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿಹಿ ಸುದ್ದಿ ನೀಡಿದೆ. ಭಾನುವಾರ (ಜೂ.16) ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು (ಭಾನುವಾರ) ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ ಎಂದು ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವೈಟ್​​ಫೀಲ್ಡ್​ (ಕಾಡುಗೋಡಿ), ಚಲ್ಲಘಟ್ಟ, ನಾಗಸಂದ್ರ ಮತ್ತು ರೇಷ್ಮೆಸಂಸ್ಥೆ ನಿಲ್ದಾಣಗಳಿಂದ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಪ್ರಯಾಣಿಕರು ಮತ್ತು ಪರೀಕ್ಷಾರ್ಥಿಗಳು ಈ ಸೇವೆಯ ಪ್ರಯೋಜನ ಪಡೆದುಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಜುಲೈ ಅಂತ್ಯಕ್ಕೆ ನಾಗಸಂದ್ರ-ಮಾದಾವರ ನಡುವಿನ ಮೆಟ್ರೋ ಸಂಚಾರ ಶುರು?

ನಮ್ಮ ಮೆಟ್ರೋ ಹಸಿರು ಕಾರಿಡಾರ್​ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ ಅಕ್ಷರಶಃ ಪಂಚವಾರ್ಷಿಕ ಯೋಜನೆಯಾಗಿತ್ತು. ಕಳೆದ ಐದು ವರ್ಷಗಳಿಂದ ಆಮೆಗತಿಯಲ್ಲಿ ಸಾಗಿದ್ದ ಕಾಮಗಾರಿ ಅಂತಿಮ ಹಂತ ತಲುಪಿದ್ದು ಜುಲೈ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮೆಟ್ರೋ (Metro) ಸಂಚಾರ ಆರಂಭವಾಗಲಿದೆ. 298 ಕೋಟಿ ರೂ. ವೆಚ್ಚದ ಈ ಮಾರ್ಗ ಯೋಜನೆ ಪ್ರಕಾರ ಸಾಗಿದ್ದರೆ 2019ರ ಅಗಸ್ಟನಲ್ಲಿಯೇ ಜನಸಂಚಾರಕ್ಕೆ ಲಭ್ಯವಾಗಬೇಕಿತ್ತು.

ಇದನ್ನೂ ಓದಿ: ಸುರಂಗ ಕೊರೆಯುವ ಯಂತ್ರಗಳಿಗೆ ಬಂಡೆಗಳು ಅಡ್ಡಿ; ಮೆಟ್ರೋ ಪಿಂಕ್ ಲೈನ್ ಸುರಂಗ ಕಾಮಗಾರಿ ವಿಳಂಬ

2017ರಲ್ಲಿ ಕಾಮಗಾರಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೆ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೋವಿಡ್ ಸಮಸ್ಯೆ ಸೇರಿ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ) ಮೆಟ್ರೋ ನಿಲ್ದಾಣಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Fri, 14 June 24

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​