AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma metro yellow line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಶುರುವಾಗಲಿದೆ ಐದನೇ ರೈಲಿನ ಸಂಚಾರ

ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ 5ನೇ ರೈಲು ಸಂಚಾರ ಶುರುವಾಗಲಿದೆ. ಆಗಸ್ಟ್ 10 ರಂದು ಈ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಆ ನಂತರ ಮೂರು ರೈಲುಗಳು 25 ನಿಮಿಷಕ್ಕೊಂದರಂತೆ ಸಂಚಾರ ಮಾಡುತ್ತಿದ್ದವು. ನಂತರ 4ನೇ ರೈಲಿನ ಸಂಚಾರಕ್ಕೂ ಚಾಲನೆ ಸಿಕ್ಕಿತ್ತು. ಈಗ 5ನೇ ರೈಲು ಕಾರ್ಯರೋಪಕ್ಕೆ ತರಲು ಸಕಲ ಸಿದ್ಧತೆಗಳು ನಡೆಯುತ್ತಿವೆ.

Namma metro yellow line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ಶುರುವಾಗಲಿದೆ ಐದನೇ ರೈಲಿನ ಸಂಚಾರ
ನಮ್ಮ ಮೆಟ್ರೋ ಯೆಲ್ಲೋ ಲೈನ್​ಗೀಗ ಇನ್ನೋಂದು ರೈಲು ಸೇರ್ಪಡೆ
ಭಾವನಾ ಹೆಗಡೆ
|

Updated on: Oct 01, 2025 | 4:36 PM

Share

ಬೆಂಗಳೂರು, ಅಕ್ಟೋಬರ್ 1: ಪ್ರಧಾನಿ ನರೇಂದ್ರ ಮೋದಿಯವರಿಂದ (Narendra modi) ಉದ್ಘಾಟಿಸಲ್ಪಟ್ಟಿದ್ದ ಯೆಲ್ಲೋ ಲೈನ್ ಮೆಟ್ರೋ ಮತ್ತೊಮ್ಮೆ ಹೊಸ ಬೆಳವಣಿಗೆ ಕಂಡಿದೆ. ಮೊದಲು ಕೇವಲ 3 ರೈಲುಗಳ ಸಂಚಾರವಿತ್ತು. ನಂತರದಲ್ಲಿ ಇನ್ನೊಂದು ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿತ್ತು. ಈಗ ಸಂಚರಿಸಲಿರುವ ರೈಲುಗಳ ಸಂಖ್ಯೆಯನ್ನು 5 ಕ್ಕೆ ಏರಿಸಲು BMCRL ನಿರ್ಧಾರ ಮಾಡಿದೆ.

ಆಗಸ್ಟ್ 10 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಯೆಲ್ಲೋ ಮೆಟ್ರೋ ಲೈನ್​ನ್ನು ಉದ್ಘಾಟಿಸಿದ್ದರು. 18.82 ಕಿಮೀ ಉದ್ದದ ಯೆಲ್ಲೋ ಲೈನ್​ನಲ್ಲಿ ಆರ್.ವಿ ರಸ್ತೆ ಮತ್ತು ಬೊಮ್ಮಸಂದ್ರದ ನಡುವೆ 3 ರೈಲುಗಳಷ್ಟೇ ಸಂಚರಿಸುತ್ತಿದ್ದವು. 25 ನಿಮಿಷಗಳಿಗೊಂದು ರೈಲಿನ ಸೇವೆಯಿತ್ತು. ಸೆಪ್ಟೆಂಬರ್ 10 ರಂದು ರೈಲಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಿದ್ದರು. ಅದರೊಂದಿಗೆ 19 ನಿಮಿಷಗಳಿಗೊಮ್ಮೆ ಒಂದು ರೈಲು ಸೇವೆ ಒದಗಿಸುತ್ತಿತ್ತು. ಈ ವ್ಯವಸ್ಥೆಗೀಗ ಇನ್ನೊಂದು ರೈಲು ಸೇರುವ ಸೂಚನೆಯಿದೆ.

ಹೊಸ ರೈಲಿನ ವ್ಯವಸ್ಥೆ ಹೇಗಿರಲಿದೆ?

ಹೊಸ ಬೊಗಿಗಳು ಕೋಲ್ಕತ್ತಾದ ಟೀಟಾಘರ್ ರೈಲ್ವೇ ಸಿಸ್ಟಮ್ ಲಿಮಿಟೆಡ್​ನಿಂದ ಹೊರಟು ಸೆಪ್ಟೆಂಬರ್ 19 ರಂದು ಬೆಂಗಳುರು ತಲುಪಿತ್ತು. ಬೆಂಗಳೂರಿನಲ್ಲಿ ಎಲ್ಲಾ ಬೋಗಿಗಳ ಜೋಡಣೆಯಾದ ಬಳಿಕ 20 ದಿನಗಳ ಪರೀಕ್ಷೆ ನಡೆಯಲಿದೆ. ಸಿಗ್ನಲ್, ಟೆಲಿಕಮ್ಯೂನಿಕೇಷನ್ ಮತ್ತು ಪವರ್ ಸಪ್ಲೈಗಳು ಪರೀಕ್ಷೆಗೆ ಒಳಪಡಲಿವೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ  Namma Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಶುರು

ಹೊಸದಾಗಿ ಸೇರ್ಪಡೆಗೊಳ್ಳಲಿರುವ ಈ 5 ನೇ ರೈಲಿನಿಂದ ಮೆಟ್ರೋ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾದ ಜನದಟ್ಟಣೆ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ. ನೂತನ ರೈಲು ಸೇವೆ ಪೂರ್ತಿಯಾಗಿ ಸಂವಹನ ಆಧಾರಿತ ರೈಲು ನಿಯಂತ್ರಣಕ್ಕೆ (CBTC) ಒಳಪಟ್ಟಿದೆ. ಇದರಿಂದಾಗಿ ನಮ್ಮ ಮೆಟ್ರೋದಲ್ಲಿ ಪ್ರಪ್ರಥಮ ಬಾರಿಗೆ ಚಾಲಕ ರಹಿತ ರೈಲು ಸಂಚಾರವಾಗಲಿದೆ. ಈ  ವ್ಯವಸ್ಥೆಯು ಸೈದ್ಧಾಂತಿಕವಾಗಿ  ಎರಡು ರೈಲು ಸಂಚಾರದ ಮಧ್ಯೆ ಸಮಯವನ್ನು ಉಳಿಸುವ ಭರವಸೆ ನೀಡಿದೆ. ಆರಂಭಿಕ ಹಂತದಲ್ಲಿ ತರಬೇತಿ ಪಡೆದ ಲೋಕೋಮೋಟಿವ್ ಪೈಲಟ್‌ಗಳಿಂದ ಹಸ್ತಚಾಲಿತ ಕಾರ್ಯಾಚರಣೆಯು ಮುಂದುವರೆಯಲಿದೆ.

ಮುರಿದುಬಿದ್ದ ಚೀನಾದೊಂದಿನ ಒಪ್ಪಂದವೇ ವಿಳಂಬಕ್ಕೆ ಕಾರಣ

ಸಿವಿಲ್ ಕಾಮಗಾರಿ ಒಂದು ವರ್ಷದ ಕೆಳಗೇ ಮುಗಿದಿದ್ದರೂ ಸ್ಟಾಕ್ ಸಂಗ್ರಹಣೆಯಲ್ಲಿ ವಿಳಂಬ ಸೃಷ್ಟಿಯಾಗಿತ್ತು. ಇದರಿಂದಾಗಿ 5ನೇ ರೈಲು ಸಂಚಾರ ತಡವಾಗಿತ್ತು.   2019ರಲ್ಲಿ ಚೀನಾದ CRRC ಕಂಪನಿಯು 216 ಕೋಚ್​ಗಳನ್ನು ಪೂರೈಸುವುದಾಗಿ 1,578 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದ ಮುರಿದುಬಿದ್ದ ನಂತರವೂ BMRCL ಹಲವಾರು ಬಾರಿ CRRC ಯನ್ನು ಸಂಪರ್ಕಿಸಲು ಪ್ರಯತ್ನ ಪಟ್ಟಿತ್ತು. ಅದರೊಂದಿಗೆ 372 ಕೋಟಿ ರೂ.ಗಳ ಬ್ಯಾಂಕ್ ಗ್ಯಾರಂಟಿಯನ್ನೂ ನೀಡಿತ್ತು. ಕೊನೆಯಲ್ಲಿ ಟೀಟಾಘರ್​ನೊಂದಿಗೆ ಜಂಟಿಯಾಗಿ ಈ ಒಪ್ಪಂದವನ್ನು ಮತ್ತೆ ಸ್ವೀಕರಿಸಿದೆ. ಸ್ವಲ್ಪ ತಡವಾಗಿಯಾದರೂ ಈಗ ರೈಲುಸೆಟ್​ಗಳನ್ನು ಒದಗಿಸಲು ಮುಂದಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್