AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಕಿಡ್ನಾಪ್ ಮಾಡಿದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​; ಮೂವರು ಅರೆಸ್ಟ್

ಪೊಲೀಸರ ಸೋಗಿನಲ್ಲಿ ವ್ಯಕ್ತಿ ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​ನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೂವರು ಅರೆಸ್ಟ್ ಆಗಿದ್ದಾರೆ. ಗುಜರಿ ವ್ಯಾಪಾರಿ ಹಫ್ತಾ ನೀಡಲಿಲ್ಲ ಎಂದು ರೌಡಿಶೀಟರ್ ಗ್ಯಾಂಗ್ ಪೊಲೀಸರ ಸೂಗಿನಲ್ಲಿ ಕಿಡ್ನಾಪ್ ಮಾಡಿತ್ತು. ಕಾರಿನಲ್ಲಿ ಕರೆದುಕೊಂಡು ಹೋಗುವಾಗ ವ್ಯಾಪಾರಿ ಎಸ್ಕೇಪ್ ಆಗಿದ್ದು ವ್ಯಾಪಾರಿ ಹುಡುಕಲು ಓಡುವಾಗ ನಕಲಿ ಪೊಲೀಸರು ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಕಿಡ್ನಾಪ್ ಮಾಡಿದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​; ಮೂವರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Mar 13, 2024 | 7:53 AM

Share

ಬೆಂಗಳೂರು, ಮಾರ್ಚ್​.13: ಪೊಲೀಸರಂತೆ ವೇಶ ಧರಿಸಿ ಬಂದ ನಕಲಿ ಪೊಲೀಸ್ ಅಧಿಕಾರಿಗಳಿಂದ (Fake Police) ವ್ಯಾಪಾರಿಯ ಕಿಡ್ನಾಪ್ ಆಗಿದೆ. ಕಿಡ್ನಾಪ್ (Kidnap) ಬಳಿಕ ತಪ್ಪಿಸಿಕೊಂಡ ವ್ಯಾಪಾರಿಯ ಹಿಡಿಯಲು ಓಡಿದ ನಕಲಿ ಪೊಲೀಸರು ಸದ್ಯ ಅಸಲಿ ಪೊಲೀಸರ ಕೈಗೆ ಸಿಕ್ಕಿದ್ದಾರೆ. ಪೊಲೀಸರ ಸೋಗಿನಲ್ಲಿ ವ್ಯಕ್ತಿ ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​ನನ್ನು ಬಂಧಿಸಲಾಗಿದೆ. ಮುಜಾಮಿಲ್ @ ಮುಜ್ಜು, ಸೈಯದ್ ಶಿಫಾಸ್, ಯೂಸುಫ್ ಬಂಧಿತ ಆರೋಪಿಗಳು.

ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ನಲ್ಲಿ ಹವಾ ಇಡಲು ಮುಂದಾಗಿದ್ದ ರೌಡಿ ಮುಜಾಮಿಲ್ ಅಲಿಯಾಸ್ ಮುಜ್ಜು, ಹಫ್ತಾ ವಸೂಲಿಗೆ ಮುಂದಾಗಿದ್ದ. ಇಲ್ಲಿ ಚಿಂದಿ ಆಯುವುದಕ್ಕೂ ಪ್ರತಿ ತಿಂಗಳು ರೌಡಿಶೀಟರ್​ಗೆ ಹಫ್ತಾ ಕೊಡಬೇಕಿತ್ತು. ಯಲಹಂಕ ರೌಡಿಶೀಟರ್ ಆಗಿರುವ ಮುಜಾಮಿಲ್ @ ಮುಜ್ಜು, ಪ್ರತಿ ತಿಂಗಳು ಇಂತಿಷ್ಟು ಹಣ ಕೊಡುವಂತೆ ಡಿಮ್ಯಾಂಡ್ ಮಾಡಿದ್ದ. ಹಣ ಕೊಡಲು ನಿರಾಕರಿಸಿದ್ದ ಗುಜರಿ ವ್ಯಾಪಾರಿಯನ್ನೇ ಕಿಡ್ನಾಪ್ ಮಾಡಿದ್ದ. ಮಧ್ಯರಾತ್ರಿ ಕಾರ್ ನಲ್ಲಿ ಬಂದು ಕ್ರೈಂ ಪೊಲೀಸರೆಂದು ಹೇಳಿ ಕಿಡ್ನಾಪ್ ಮಾಡಿದ್ದ. ಕೊಂಚ ದೂರ ಹೋದ ಕಾರ್ ನಿಂದ ತಪ್ಪಿಸಿಕೊಂಡ ಗುಜರಿ ವ್ಯಾಪಾರಿ ಓಡಲು ಶುರು ಮಾಡಿದ್ದ. ಆಗ ಕಿಡ್ನಾಪರ್ಸ್​ಗಳು ಆತನ ಹಿಡಿಯಲು ಹಿಂದೆ ಓಡಿದ್ದರು.

ಇನ್ನು ಮತ್ತೊಂದೆಡೆ ಮಿಡ್ ನೈಟ್ ನಲ್ಲಿ ಇಬ್ಬರ ಓಟ ಕಂಡು ಅನುಮಾನಗೊಂಡ ಅಸಲಿ ಪೊಲೀಸರು‌, ಓಡುತಿದ್ದ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ನಕಲಿ ಪೊಲೀಸ್​ನ ಅಸಲಿ ಕಿಡ್ನಾಪ್ ಸಂಗತಿ ರಿವಿಲ್ ಆಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಳವಾದ ಮೊಬೈಲ್ ಫೋನ್ ಪತ್ತೆಹಚ್ಚುವಲ್ಲಿ ಕರ್ನಾಟಕವೇ ಮುಂದೆ! ಅಂಕಿಅಂಶಗಳು ಇಲ್ಲಿವೆ

ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆತಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಆನೇಕಲ್​ ವ್ಯಾಪ್ತಿಯ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮನೆಯೊಂದರ ನಾಲ್ಕನೇ ಪ್ಲೋರ್ನ ಕೊಠಡಿಯಲ್ಲಿ ಶವ ಪತ್ತೆಯಾಗಿದೆ. ಯುವತಿಯ ಶವ ನಗ್ನ ಸ್ಥಿತಿಯಲ್ಲಿದ್ದು, ಕಳೆದ ಐದಾರು ದಿನಗಳ ಹಿಂದೆ ಕೊಲೆಗೈದಿರುವ ಶಂಕೆ ಹಿದೆ. ಆಕೆಯ ಜೊತೆಗಿದ್ದ ಸಪನ್​ ಕುಮಾರ್​ ಫೋನ್​ ಬಂದ್​ ಮಾಡಿ ನಾಪತ್ತೆಯಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:53 am, Wed, 13 March 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ