AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಕಿಡ್ನಾಪ್ ಮಾಡಿದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​; ಮೂವರು ಅರೆಸ್ಟ್

ಪೊಲೀಸರ ಸೋಗಿನಲ್ಲಿ ವ್ಯಕ್ತಿ ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​ನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೂವರು ಅರೆಸ್ಟ್ ಆಗಿದ್ದಾರೆ. ಗುಜರಿ ವ್ಯಾಪಾರಿ ಹಫ್ತಾ ನೀಡಲಿಲ್ಲ ಎಂದು ರೌಡಿಶೀಟರ್ ಗ್ಯಾಂಗ್ ಪೊಲೀಸರ ಸೂಗಿನಲ್ಲಿ ಕಿಡ್ನಾಪ್ ಮಾಡಿತ್ತು. ಕಾರಿನಲ್ಲಿ ಕರೆದುಕೊಂಡು ಹೋಗುವಾಗ ವ್ಯಾಪಾರಿ ಎಸ್ಕೇಪ್ ಆಗಿದ್ದು ವ್ಯಾಪಾರಿ ಹುಡುಕಲು ಓಡುವಾಗ ನಕಲಿ ಪೊಲೀಸರು ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಕಿಡ್ನಾಪ್ ಮಾಡಿದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​; ಮೂವರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:Mar 13, 2024 | 7:53 AM

Share

ಬೆಂಗಳೂರು, ಮಾರ್ಚ್​.13: ಪೊಲೀಸರಂತೆ ವೇಶ ಧರಿಸಿ ಬಂದ ನಕಲಿ ಪೊಲೀಸ್ ಅಧಿಕಾರಿಗಳಿಂದ (Fake Police) ವ್ಯಾಪಾರಿಯ ಕಿಡ್ನಾಪ್ ಆಗಿದೆ. ಕಿಡ್ನಾಪ್ (Kidnap) ಬಳಿಕ ತಪ್ಪಿಸಿಕೊಂಡ ವ್ಯಾಪಾರಿಯ ಹಿಡಿಯಲು ಓಡಿದ ನಕಲಿ ಪೊಲೀಸರು ಸದ್ಯ ಅಸಲಿ ಪೊಲೀಸರ ಕೈಗೆ ಸಿಕ್ಕಿದ್ದಾರೆ. ಪೊಲೀಸರ ಸೋಗಿನಲ್ಲಿ ವ್ಯಕ್ತಿ ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ಅ್ಯಂಡ್ ಗ್ಯಾಂಗ್​ನನ್ನು ಬಂಧಿಸಲಾಗಿದೆ. ಮುಜಾಮಿಲ್ @ ಮುಜ್ಜು, ಸೈಯದ್ ಶಿಫಾಸ್, ಯೂಸುಫ್ ಬಂಧಿತ ಆರೋಪಿಗಳು.

ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ನಲ್ಲಿ ಹವಾ ಇಡಲು ಮುಂದಾಗಿದ್ದ ರೌಡಿ ಮುಜಾಮಿಲ್ ಅಲಿಯಾಸ್ ಮುಜ್ಜು, ಹಫ್ತಾ ವಸೂಲಿಗೆ ಮುಂದಾಗಿದ್ದ. ಇಲ್ಲಿ ಚಿಂದಿ ಆಯುವುದಕ್ಕೂ ಪ್ರತಿ ತಿಂಗಳು ರೌಡಿಶೀಟರ್​ಗೆ ಹಫ್ತಾ ಕೊಡಬೇಕಿತ್ತು. ಯಲಹಂಕ ರೌಡಿಶೀಟರ್ ಆಗಿರುವ ಮುಜಾಮಿಲ್ @ ಮುಜ್ಜು, ಪ್ರತಿ ತಿಂಗಳು ಇಂತಿಷ್ಟು ಹಣ ಕೊಡುವಂತೆ ಡಿಮ್ಯಾಂಡ್ ಮಾಡಿದ್ದ. ಹಣ ಕೊಡಲು ನಿರಾಕರಿಸಿದ್ದ ಗುಜರಿ ವ್ಯಾಪಾರಿಯನ್ನೇ ಕಿಡ್ನಾಪ್ ಮಾಡಿದ್ದ. ಮಧ್ಯರಾತ್ರಿ ಕಾರ್ ನಲ್ಲಿ ಬಂದು ಕ್ರೈಂ ಪೊಲೀಸರೆಂದು ಹೇಳಿ ಕಿಡ್ನಾಪ್ ಮಾಡಿದ್ದ. ಕೊಂಚ ದೂರ ಹೋದ ಕಾರ್ ನಿಂದ ತಪ್ಪಿಸಿಕೊಂಡ ಗುಜರಿ ವ್ಯಾಪಾರಿ ಓಡಲು ಶುರು ಮಾಡಿದ್ದ. ಆಗ ಕಿಡ್ನಾಪರ್ಸ್​ಗಳು ಆತನ ಹಿಡಿಯಲು ಹಿಂದೆ ಓಡಿದ್ದರು.

ಇನ್ನು ಮತ್ತೊಂದೆಡೆ ಮಿಡ್ ನೈಟ್ ನಲ್ಲಿ ಇಬ್ಬರ ಓಟ ಕಂಡು ಅನುಮಾನಗೊಂಡ ಅಸಲಿ ಪೊಲೀಸರು‌, ಓಡುತಿದ್ದ ಇಬ್ಬರನ್ನು ಹಿಡಿದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ನಕಲಿ ಪೊಲೀಸ್​ನ ಅಸಲಿ ಕಿಡ್ನಾಪ್ ಸಂಗತಿ ರಿವಿಲ್ ಆಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಳವಾದ ಮೊಬೈಲ್ ಫೋನ್ ಪತ್ತೆಹಚ್ಚುವಲ್ಲಿ ಕರ್ನಾಟಕವೇ ಮುಂದೆ! ಅಂಕಿಅಂಶಗಳು ಇಲ್ಲಿವೆ

ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆತಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಆನೇಕಲ್​ ವ್ಯಾಪ್ತಿಯ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಮನೆಯೊಂದರ ನಾಲ್ಕನೇ ಪ್ಲೋರ್ನ ಕೊಠಡಿಯಲ್ಲಿ ಶವ ಪತ್ತೆಯಾಗಿದೆ. ಯುವತಿಯ ಶವ ನಗ್ನ ಸ್ಥಿತಿಯಲ್ಲಿದ್ದು, ಕಳೆದ ಐದಾರು ದಿನಗಳ ಹಿಂದೆ ಕೊಲೆಗೈದಿರುವ ಶಂಕೆ ಹಿದೆ. ಆಕೆಯ ಜೊತೆಗಿದ್ದ ಸಪನ್​ ಕುಮಾರ್​ ಫೋನ್​ ಬಂದ್​ ಮಾಡಿ ನಾಪತ್ತೆಯಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:53 am, Wed, 13 March 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!