AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣಾ ತರಬೇತಿಯಲ್ಲಿ ಅವ್ಯವಸ್ಥೆ: ರೊಚ್ಚಿಗೆದ್ದ ಸರ್ಕಾರಿ ನೌಕರರು

ಲೋಕಸಭಾ ಚುನಾವಣಾ ತರಬೇತಿಗೆಂದು 2,500 ಜನರನ್ನು ಸೇರಿಸಿದ್ದು, ಆದರೆ ಕಾರ್ಯಾಗಾರದಲ್ಲಿ ನೀರು, ಊಟ ಕೊಟ್ಟಿಲ್ಲ. ಶೌಚಾಲಯದ ವ್ಯವಸ್ಥೆ ಕೂಡ ಮಾಡಿಲ್ಲ ಅಂತಾ ಸರ್ಕಾರಿ ನೌಕರರು ಆರೋಪ ಮಾಡಿದ್ದಾರೆ. ಆರ್.ಆರ್.ನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಚುನಾವಣಾ ತರಬೇತಿ ಕಾರ್ಯಾಗಾರ ವೇಳೆ ಘಟನೆ ಸಂಭವಿಸಿದೆ. ಈ ವೇಳೆ ಚುನಾವಣಾಧಿಕಾರಿ ಮತ್ತು ಸರ್ಕಾರಿ ನೌಕರರ ನಡುವೆ ಮಾತಿನ ಚಕಮಕಿ ಉಂಟಾಗಿದೆ.

TV9 Web
| Edited By: |

Updated on:Apr 17, 2024 | 5:06 PM

Share

ಬೆಂಗಳೂರು, ಏಪ್ರಿಲ್​ 17: ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha election) ಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ಪಕ್ಷಗಳು ಸದ್ಯ ಭರ್ಜರಿ ಮತಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ಮಧ್ಯೆ ಬೆಂಗಳೂರಿನಲ್ಲಿ ಚುನಾವಣೆಯ ತರಬೇತಿ ವೇಳೆ ಅವ್ಯವಸ್ಥೆ ಆರೋಪ ಕೇಳಿಬಂದಿದ್ದು, ಬಿಬಿಎಂಪಿ (BBMP) ಅಧಿಕಾರಿಗಳ ವಿರುದ್ಧ ಸರ್ಕಾರಿ ನೌಕರರು ರೊಚ್ಚಿಗೆದಿದ್ದಾರೆ. ಆರ್.ಆರ್.ನಗರದ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಚುನಾವಣಾ ತರಬೇತಿ ಕಾರ್ಯಾಗಾರ ವೇಳೆ ಘಟನೆ ಸಂಭವಿಸಿದೆ.

2,500 ಜನರನ್ನು ಸೇರಿಸಿ ಸೂಕ್ತ ವ್ಯವಸ್ಥೆ ಮಾಡಿಲ್ಲ ಅಂತಾ ಗಲಾಟೆ ಮಾಡಲಾಗಿದ್ದು, ಊಟವಿಲ್ಲದೇ ಕಾದು ಕುಳಿತ ಸರ್ಕಾರಿ ನೌಕರರಿಂದ ತೀವ್ರ ಆಕ್ರೋಶ ಹೊರಹಾಕಲಾಗಿದೆ. ಚುನಾವಣಾ ತರಬೇತಿ ಕಾರ್ಯಾಗಾರದಲ್ಲಿ ನೀರು, ಊಟ ಕೊಟ್ಟಿಲ್ಲ. ಶೌಚಾಲಯದ ವ್ಯವಸ್ಥೆ ಕೂಡ ಮಾಡಿಲ್ಲ ಅಂತಾ ನೌಕರರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ: ಕಾರಣವೇನು ಗೊತ್ತಾ?

ಚುನಾವಣಾ ತರಬೇತಿಗಾಗಿ ಕೋಟ್ಯಂತರ ರೂ. ಬಿಲ್ ಮಾಡುತ್ತಾರೆ. ಆದರೆ ನಮ್ಮನ್ನು ತುಂಬಾ ಕೀಳಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಸರ್ಕಾರಿ ನೌಕರರು ಹೇಳಿದ್ದಾರೆ. ಆದರೆ ಯಾವುದೇ ಸಮಸ್ಯೆ ಆಗಿಲ್ಲ ಅಂತಾ R.R.ನಗರ ವಲಯ ಚುನಾವಣಾಧಿಕಾರಿ ಅಜಯ್​ರಿಂದ ಸಮಜಾಯಿಸಿ ನೀಡಿದ್ದಾರೆ.

ಇದನ್ನೂ ಓದಿ: Glanders Disease: ಬೆಂಗಳೂರಿನ ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

ಈ ಕುರಿತಾಗಿ ವಿಡಿಯೋ ಒಂದು ಹರಿದಾಡುತ್ತಿದ್ದು, ಸರ್ಕಾರಿ ನೌಕರರು ಮತ್ತು R.R.ನಗರ ವಲಯ ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಸರ್ಕಾರಿ ನೌಕರರು ಮಾತ್ರ ತೀವ್ರ ಆಕ್ರೋಶಗೊಂಡಿದ್ದು, ವ್ಯವಸ್ಥೆ ಬಗ್ಗೆ ಆರೋಪಿಸುತ್ತಿದ್ದಾರೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಲಕ್ಷ ರೂ ವಶಕ್ಕೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಕಾಗವಾಡ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬೀಡ್ ಗ್ರಾಮದಿಂದ ಗೋವಾ ಕಡೆಗೆ ಹೊರಟ್ಟಿದ್ದ ಕಾರಿನಲ್ಲಿ ಹಣ ಪತ್ತೆ ಆಗಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವರದಿ: ಶಾಂತ ಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Wed, 17 April 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್