Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ: ಕಾರಣವೇನು ಗೊತ್ತಾ?

ಬೆಂಗಳೂರಿನ ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್​ 18 ಮತ್ತು 19 ರಂದು ಶ್ರೀ ಕೋದಂಡರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಸಂಜೆ 5 ಗಂಟೆವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸ್ಟಾರ್ ಹೋಟೆಲ್‌, ಕ್ಲಬ್‌ಗಳಲ್ಲಿ ಹೊರತುಪಡಿಸಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಹಲಸೂರ್ ಗೇಟ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧ: ಕಾರಣವೇನು ಗೊತ್ತಾ?
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on: Apr 17, 2024 | 4:14 PM

ಬೆಂಗಳೂರು, ಏಪ್ರಿಲ್ 17: ನಾಳೆ ಮತ್ತು ನಾಡಿದ್ದು (ಏ. 18,19) ಶ್ರೀ ಕೋದಂಡರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಿನ್ನೆಲೆ ಹಲಸೂರ್ (Halasuru) ಗೇಟ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ನಾಡಿದ್ದು ಸಂಜೆ 5 ಗಂಟೆವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸ್ಟಾರ್ ಹೋಟೆಲ್‌, ಕ್ಲಬ್‌ಗಳಲ್ಲಿ ಹೊರತುಪಡಿಸಿ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ (alcohol) ಮಾರಾಟಕ್ಕೆ ನಿಷೇಧ ಹೇರಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್​ ಬುಧವಾರ ಆದೇಶ ಹೊರಡಿಸಿದ್ದಾರೆ. ಕಾನೂನು ಮತ್ತ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಈ ನಿರ್ಧಾರಕೈಗೊಳ್ಳಲಾಗಿದೆ.

ಏಪ್ರಿಲ್ 23 ರಂದು ಬೆಂಗಳೂರಿನ ಕರಗ ಉತ್ಸವ 

ಬೆಂಗಳೂರಿನಲ್ಲಿ ಅತ್ಯಂತ ಹಳೆಯ ಹಾಗೂ ವ್ಯಾಪಕವಾಗಿ ಆಚರಿಸ್ಪಡುವ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಕರಗ ಮಹೋತ್ಸವಕ್ಕೆ ಮಹಾಭಾರತದಲ್ಲಿ ಪುರಾವೆಯನ್ನು ಹೊಂದಿದೆ. ಶಕ್ತಿ ಮಾತೆಯ ರೂಪವಾದ ದ್ರೌಪದಿಯ ಆರಾಧನೆಗೆ ಧರ್ಮರಾಯ ದೇವಸ್ಥಾನ ಸಮಿತಿ ಸಜ್ಜಾಗಿದ್ದು, ಲೋಕಸಭಾ ಚುನಾವಣೆಯ ನಡುವೆಯೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಏಪ್ರಿಲ್ 23 ರಿಂದ ಒಂಬತ್ತು ದಿನಗಳ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹುಣ್ಣಿಮೆಯ ದಿನದಂದು ಮುಖ್ಯ ಕಾರ್ಯಕ್ರಮವಾದ ದ್ರೌಪದಿ ದೇವಿ ಹೂವಿನ ಕರಗ ನಡೆಯಲಿದೆ.

ಇದನ್ನೂ ಓದಿ: CCB Raid: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

ಕರಗ ಮಹೋತ್ಸವವನ್ನು ಪ್ರತಿ ವರ್ಷ ಚೈತ್ರ ಮಾಸದಲ್ಲಿ ಮಾರ್ಚ್ ಅಥವಾ ಏಪ್ರಿಲ್ ನಡುವಿನ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಕರಗ ಉತ್ಸವಕ್ಕೆ ಬಿಬಿಎಂಪಿ ಹಾಗೂ ಸರ್ಕಾರ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದೆ. ಕರಗ ವ್ಯವಸ್ಥಾಪನಾ ಸಮಿತಿಯಿಂದ ಈ ಬಾರಿ ಅರಾಜಕೀಯವಾಗಿ ಎಂದಿನಂತೆ ಸಕಲ ಸಾಂಪ್ರದಾಯಿಕ ವೈಭವದೊಂದಿಗೆ ಕರಗ ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗವು ಕರಗ ಮೇಲೆ ನಿಗಾ ಇರಿಸಿದೆ. ಜಾತ್ರೆಗೆ ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದ್ದು, ಪ್ರತಿ ವರ್ಷದಂತೆ ಈ ವರ್ಷವೂ ಹಲವು ರಾಜಕೀಯ ಮುಖಂಡರು ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೇಸಿಗೆ ಬೇಗೆ: ರಾಜ್ಯದಲ್ಲಿ 11 ದಿನಗಳಲ್ಲಿ 17 ಲಕ್ಷ ಲೀ ಕೋಲ್ಡ್​ ಬಿಯರ್ ಮಾರಾಟ !

ಒಂದು ವೇಳೆ ರಾಜಕೀಯ ನಾಯಕರು ಭೇಟಿ ಮಾಡಿದರೆ ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡುವುದಾಗಲಿ ಅಥವಾ ಅವರನ್ನು ಸನ್ಮಾನಿಸುವುದಾಗಲಿ ಮಾಡದಂತೆ ದೇವಸ್ಥಾನದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾವುದೇ ನಿಯಮ ಉಲ್ಲಂಘನೆಯಾದಲ್ಲಿ ಚುನಾವಣಾ ಆಯೋಗವು ಕರಗ ಸಮಿತಿ ವಿರುದ್ಧ ಕ್ರಮ ಕೈಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ