AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಒಡಿಶಾ ರೈಲು ಮಾರ್ಗ ಸಂಚಾರ ಮುಕ್ತ: 8 ರಲ್ಲಿ 2 ರೈಲು ರದ್ದು; ಇಲ್ಲಿದೆ ಮಾಹಿತಿ

ಘನ ಘೋರ ದುರಂತ ಸಂಭವಿಸಿ 51 ಗಂಟೆಗಳ ನಂತರ ಬಹನಾಗಾ ರೈಲು ಹಳಿ ಜೋಡಣಾ ಕಾರ್ಯ ಪೂರ್ಣಗೊಂಡಿದ್ದು, ರೈಲು ಸಂಚಾರಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆ ಇಂದಿನಿಂದ (ಜೂ.05) ಬೆಂಗಳೂರು-ಒಡಿಶಾ ಮಾರ್ಗದ ರೈಲುಗಳು ಸಂಚಾರ ಮಾಡಲಿವೆ.

ಬೆಂಗಳೂರು-ಒಡಿಶಾ ರೈಲು ಮಾರ್ಗ ಸಂಚಾರ ಮುಕ್ತ: 8 ರಲ್ಲಿ 2 ರೈಲು ರದ್ದು; ಇಲ್ಲಿದೆ ಮಾಹಿತಿ
ರೈಲು
ವಿವೇಕ ಬಿರಾದಾರ
|

Updated on:Jun 05, 2023 | 1:56 PM

Share

ಬೆಂಗಳೂರು: ಒಡಿಶಾದ (Odisha) ಬಾಲಾಸೋರ್ (Balasore) ಜಿಲ್ಲೆಯಲ್ಲಿ ಶುಕ್ರವಾರ (ಜೂ.2) ರಾತ್ರಿ ಸಂಭವಿಸಿದ್ದ ಭೀಕರ ತ್ರಿವಳಿ ರೈಲು ಅಪಘಾತಕ್ಕೆ (Odisha Train Accident) ದೇಶವೇ ಮರುಗುತ್ತಿದೆ. ಈ ಘಟನೆಯ ನಂತರ ಹೌರಾ (ಕೊಲ್ಕತ್ತಾ) ಕಡೆಗೆ ತೆರಳು ರೈಲುಗಳನ್ನು ರದ್ದು ಮಾಡಲಾಗಿತ್ತು. ಇದೀಗ ಘನ ಘೋರ ದುರಂತ ಸಂಭವಿಸಿ 51 ಗಂಟೆಗಳ ಬಳಿಕ ಬಹನಾಗಾ ರೈಲು ಹಳಿ ಜೋಡಣಾ ಕಾರ್ಯ ಪೂರ್ಣಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆ ಇಂದಿನಿಂದ (ಜೂ.05) ಬೆಂಗಳೂರು-ಒಡಿಶಾ (Bengaluru-Odisha) ಮಾರ್ಗದ ರೈಲುಗಳು ಸಂಚಾರ ಮಾಡಲಿವೆ.

ಇಂದು ಒಟ್ಟು ಎಂಟು ರೈಲುಗಳು ಬೆಂಗಳೂರಿನಿಂದ ಬಹನಾಗಾ ಮಾರ್ಗದಲ್ಲಿ ಸಂಚಾರ ಮಾಡಬೇಕಿತ್ತು. ಆದರೆ ಎರಡು ರೈಲುಗಳ ಸಂಚಾರ ರದ್ದಾಗಿದೆ. ಉಳಿದ ಆರು ರೈಲುಗಳು ಯಥಾಪ್ರಕಾರ ಪ್ರಯಾಣ ಮಾಡಲಿವೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೈಲು ದುರಂತ ನಡೆದ ಸ್ಥಳದಲ್ಲಿ ನಿರ್ಮಾಣವಾದ ಹೊಸ ಹಳಿಯನ್ನು ದಾಟಿದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ರದ್ದಾದ ಎರಡು ರೈಲುಗಳು

ಬೈಯಪ್ಪನಹಳ್ಳಿಯ ಸರ್​​.ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ರೈಲು ನಿಲ್ದಾಣದಿಂದ ತೆರಳಬೇಕಿದ್ದ (ರೈಲು ಸಂಖ್ಯೆ 12246) ಹೌರಾ-ದುರಂತೋ ಎಕ್ಸ್‌ಪ್ರೆಸ್, (ರೈಲು ಸಂಖ್ಯೆ 12864) ಹೌರಾ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದಾಗಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

51 ಗಂಟೆ ಬಳಿಕ ರೈಲು ಸಂಚಾರ ಪುನರಾರಂಭ

ಅಪಘಾತ ಸಂಭವಿಸಿದ 51 ಗಂಟೆ ಬಳಿಕ ರೈಲು ಸಂಚಾರ ಪುನರಾರಂಭವಾಗಿದೆ. ಹಾಳಾಗಿದ್ದ ಹಳಿ ದುರಸ್ತಿ ಕಾರ್ಯ ಶರವೇಗದಲ್ಲಿ ಮುಗಿದಿದ್ದು, ನಿನ್ನೆ (ಜೂ.04) ರಾತ್ರಿ 11 ಗಂಟೆ ಸುಮಾರಿಗೆ ಬಹಾನಾಗ ಹಳಿ ಮೇಲೆ ಮೊದಲಿಗೆ ಗೂಡ್ಸ್​​ ರೈಲುಗಳ ಸಂಚಾರ ಆರಂಭವಾಯಿತು. ವಿಶಾಖಪಟ್ಟಣಂ-ರೋರ್ಕೆಲಾ ಗೂಡ್ಸ್​ ರೈಲು ಸಂಚಾರ ಆರಂಭವಾಗಿದ್ದು, ಈ ವೇಳೆ ಸ್ಥಳದಲ್ಲೇ ಇದ್ದ ರೈಲ್ವೇ ಸಚಿವ ಅಶ್ವೀನಿ ವೈಷ್ಣವ ರೈಲಿಗೆ ನಮಸ್ಕರಿಸಿದ್ದು, ವಿಶೇಷವಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Mon, 5 June 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?