AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ […]

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 30, 2020 | 12:48 PM

Share

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ ಬಜಾರ್​ನಲ್ಲಂತೂ ಕಲರ್ ಕಲರ್ ಹೂವಿನ ಹಾರಗಳು, ವೆರೈಟಿ ವೆರೈಟಿ ಹಣ್ಣುಗಳು ಲಕ್ಷ್ಮೀಯನ್ನ ಅಲಂಕರಿಸೋಕೆ ಕಾತರದಿಂದ ಕಾಯ್ತಿವೆ.

ಆದ್ರೆ ರೇಟ್ ಕೇಳಿದ್ರೆನೇ ತಲೆ ತಿರುಗ್ತಿದೆ. ಕೊರೊನಾ ಭೀತಿಯಿಂದ ಹೂ ಹಣ್ಣಿನ ರಫ್ತಿನಲ್ಲಿ ಇಳಿಕೆಯಾಗಿದೆ. ರೈತರು ನೇರವಾಗಿ ಮಾರ್ಕೆಟ್​ಗೆ ಬಂದು ವ್ಯಾಪಾರ ಮಾಡೋದನ್ನ ನಿಲ್ಲಿಸಿದ್ದಾರೆ. ಅದ್ರಲ್ಲೂ ಕೆ.ಆರ್ ಮಾರ್ಕೆಟ್ ಬಂದ್ ಆಗಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹೂ ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

ಹೂ/ಹಣ್ಣಿನದರ(ಕೆಜಿಗೆ) ಒಂದು ಕೆಜಿ ಮಲ್ಲಿಗೆ ಹೂವಿನ ರೇಟ್ 600 ರೂಪಾಯಿಯಾದ್ರೆ, ಕನಕಾಂಬರ 3 ಸಾವಿರ ಇದೆ. ಕೆಜಿ ಸೇವಂತಿಗೆ 300 ರೂಪಾಯಿಗೆ ಸಿಕ್ತಿದ್ರೆ. ಬಿಡಿ ಹೂವಿನ ಬೆಲೆ 350ರಿಂದ 400 ರೂಪಾಯಿಯಿದೆ. ಲಕ್ಷ್ಮೀಗೆ ಪ್ರಿಯವಾದ ತಾವರೆ ಹೂವು ಒಂದಕ್ಕೆ 50 ರೂಪಾಯಿ ಇದೆ. ಅದೇ ರೀತಿ ಹಣ್ಣುಗಳ ಬೆಲೆ ನೋಡೋದಾದ್ರೆ, ಕೆಜಿ ಌಪಲ್ ದರ 260 ರೂಪಾಯಿಯಿದ್ರೆ, ದಾಳಿಂಬೆ 160 ರೂಪಾಯಿಗೆ ಸಿಕ್ತಿದೆ. ಜೊತೆಗೆ ಸಪೋಟ/ದ್ರಾಕ್ಷಿ ರೇಟ್ ಕೆಜಿಗೆ 100 ರೂಪಾಯಿಯಾಗಿದೆ.

ಒಟ್ನಲ್ಲಿ ಕೊರೊನಾ ರಣಕೇಕೆ ನಡುವೆ ಸಿಂಪಲ್ಲಾಗಿ ಹಬ್ಬ ಮಾಡಿ ಫ್ಯಾಮಿಲಿ ಜೊತೆ ಖುಷಿಯಾಗಿರಿ. ಆದ್ರೆ ಖುಷಿಯಲ್ಲಿ ಮಾಸ್ಕ್ ಧರಿಸೋದು, ದೈಹಿಕ ಅಂತರ ಕಾಪಾಡೋದು ಮಾತ್ರ ಮರೀಬೇಡಿ.

Published On - 6:41 am, Thu, 30 July 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’