AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ […]

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 30, 2020 | 12:48 PM

Share

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ ಬಜಾರ್​ನಲ್ಲಂತೂ ಕಲರ್ ಕಲರ್ ಹೂವಿನ ಹಾರಗಳು, ವೆರೈಟಿ ವೆರೈಟಿ ಹಣ್ಣುಗಳು ಲಕ್ಷ್ಮೀಯನ್ನ ಅಲಂಕರಿಸೋಕೆ ಕಾತರದಿಂದ ಕಾಯ್ತಿವೆ.

ಆದ್ರೆ ರೇಟ್ ಕೇಳಿದ್ರೆನೇ ತಲೆ ತಿರುಗ್ತಿದೆ. ಕೊರೊನಾ ಭೀತಿಯಿಂದ ಹೂ ಹಣ್ಣಿನ ರಫ್ತಿನಲ್ಲಿ ಇಳಿಕೆಯಾಗಿದೆ. ರೈತರು ನೇರವಾಗಿ ಮಾರ್ಕೆಟ್​ಗೆ ಬಂದು ವ್ಯಾಪಾರ ಮಾಡೋದನ್ನ ನಿಲ್ಲಿಸಿದ್ದಾರೆ. ಅದ್ರಲ್ಲೂ ಕೆ.ಆರ್ ಮಾರ್ಕೆಟ್ ಬಂದ್ ಆಗಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹೂ ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

ಹೂ/ಹಣ್ಣಿನದರ(ಕೆಜಿಗೆ) ಒಂದು ಕೆಜಿ ಮಲ್ಲಿಗೆ ಹೂವಿನ ರೇಟ್ 600 ರೂಪಾಯಿಯಾದ್ರೆ, ಕನಕಾಂಬರ 3 ಸಾವಿರ ಇದೆ. ಕೆಜಿ ಸೇವಂತಿಗೆ 300 ರೂಪಾಯಿಗೆ ಸಿಕ್ತಿದ್ರೆ. ಬಿಡಿ ಹೂವಿನ ಬೆಲೆ 350ರಿಂದ 400 ರೂಪಾಯಿಯಿದೆ. ಲಕ್ಷ್ಮೀಗೆ ಪ್ರಿಯವಾದ ತಾವರೆ ಹೂವು ಒಂದಕ್ಕೆ 50 ರೂಪಾಯಿ ಇದೆ. ಅದೇ ರೀತಿ ಹಣ್ಣುಗಳ ಬೆಲೆ ನೋಡೋದಾದ್ರೆ, ಕೆಜಿ ಌಪಲ್ ದರ 260 ರೂಪಾಯಿಯಿದ್ರೆ, ದಾಳಿಂಬೆ 160 ರೂಪಾಯಿಗೆ ಸಿಕ್ತಿದೆ. ಜೊತೆಗೆ ಸಪೋಟ/ದ್ರಾಕ್ಷಿ ರೇಟ್ ಕೆಜಿಗೆ 100 ರೂಪಾಯಿಯಾಗಿದೆ.

ಒಟ್ನಲ್ಲಿ ಕೊರೊನಾ ರಣಕೇಕೆ ನಡುವೆ ಸಿಂಪಲ್ಲಾಗಿ ಹಬ್ಬ ಮಾಡಿ ಫ್ಯಾಮಿಲಿ ಜೊತೆ ಖುಷಿಯಾಗಿರಿ. ಆದ್ರೆ ಖುಷಿಯಲ್ಲಿ ಮಾಸ್ಕ್ ಧರಿಸೋದು, ದೈಹಿಕ ಅಂತರ ಕಾಪಾಡೋದು ಮಾತ್ರ ಮರೀಬೇಡಿ.

Published On - 6:41 am, Thu, 30 July 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ