AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ […]

ಕೊರೊನಾ ನಡುವೆಯೇ ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಸಜ್ಜು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 30, 2020 | 12:48 PM

Share

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದ್ರೆ ಕೊರೊನಾ ಹಾವಳಿ ನಡುವೆ ಹಬ್ಬ ಮಾಡೋದೇ ಕಷ್ಟವಾಗಿದೆ. ಸಿಂಪಲ್ಲಾಗಿ ಲಕ್ಷ್ಮೀ ಪ್ರತಿಷ್ಟಾಪನೆ ಮಾಡ್ತೀವಿ ಅನ್ನೋರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಹಬ್ಬದ ತಯಾರಿಯಲ್ಲಿರೋ ಸಿಟಿಮಂದಿಗೆ ಡಬಲ್ ರೇಟ್​ಗೆ ಹೂ ಹಣ್ಣು ಖರೀದಿಸಬೇಕಾದ ಪರಿಸ್ಥಿತಿ ಬಂದೊದಗಿದೆ.

ಬೆಂಗಳೂರಲ್ಲಿ ಖರೀದಿಯ ಭರಾಟೆ ಜೋರು! ಬೆಂಗಳೂರಲ್ಲಿ ಕೊರೊನಾ ಅಬ್ಬರ ಊಹೆಗೂ ನಿಲುಕುತ್ತಿಲ್ಲ. ಹೆಮ್ಮಾರಿ ಅಟ್ಟಹಾಸದ ನಡುವೆಯೂ ಸಿಟಿ ಮಂದಿ ವರಮಹಾಲಕ್ಷ್ಮೀ ಹಬ್ಬ ಮಾಡೋಕೆ ರೆಡಿಯಾಗಿದ್ದಾರೆ. ಹೀಗಾಗಿ ನಿನ್ನೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಗಾಂಧಿ ಬಜಾರ್​ನಲ್ಲಂತೂ ಕಲರ್ ಕಲರ್ ಹೂವಿನ ಹಾರಗಳು, ವೆರೈಟಿ ವೆರೈಟಿ ಹಣ್ಣುಗಳು ಲಕ್ಷ್ಮೀಯನ್ನ ಅಲಂಕರಿಸೋಕೆ ಕಾತರದಿಂದ ಕಾಯ್ತಿವೆ.

ಆದ್ರೆ ರೇಟ್ ಕೇಳಿದ್ರೆನೇ ತಲೆ ತಿರುಗ್ತಿದೆ. ಕೊರೊನಾ ಭೀತಿಯಿಂದ ಹೂ ಹಣ್ಣಿನ ರಫ್ತಿನಲ್ಲಿ ಇಳಿಕೆಯಾಗಿದೆ. ರೈತರು ನೇರವಾಗಿ ಮಾರ್ಕೆಟ್​ಗೆ ಬಂದು ವ್ಯಾಪಾರ ಮಾಡೋದನ್ನ ನಿಲ್ಲಿಸಿದ್ದಾರೆ. ಅದ್ರಲ್ಲೂ ಕೆ.ಆರ್ ಮಾರ್ಕೆಟ್ ಬಂದ್ ಆಗಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹೂ ಹಣ್ಣಿನ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

ಹೂ/ಹಣ್ಣಿನದರ(ಕೆಜಿಗೆ) ಒಂದು ಕೆಜಿ ಮಲ್ಲಿಗೆ ಹೂವಿನ ರೇಟ್ 600 ರೂಪಾಯಿಯಾದ್ರೆ, ಕನಕಾಂಬರ 3 ಸಾವಿರ ಇದೆ. ಕೆಜಿ ಸೇವಂತಿಗೆ 300 ರೂಪಾಯಿಗೆ ಸಿಕ್ತಿದ್ರೆ. ಬಿಡಿ ಹೂವಿನ ಬೆಲೆ 350ರಿಂದ 400 ರೂಪಾಯಿಯಿದೆ. ಲಕ್ಷ್ಮೀಗೆ ಪ್ರಿಯವಾದ ತಾವರೆ ಹೂವು ಒಂದಕ್ಕೆ 50 ರೂಪಾಯಿ ಇದೆ. ಅದೇ ರೀತಿ ಹಣ್ಣುಗಳ ಬೆಲೆ ನೋಡೋದಾದ್ರೆ, ಕೆಜಿ ಌಪಲ್ ದರ 260 ರೂಪಾಯಿಯಿದ್ರೆ, ದಾಳಿಂಬೆ 160 ರೂಪಾಯಿಗೆ ಸಿಕ್ತಿದೆ. ಜೊತೆಗೆ ಸಪೋಟ/ದ್ರಾಕ್ಷಿ ರೇಟ್ ಕೆಜಿಗೆ 100 ರೂಪಾಯಿಯಾಗಿದೆ.

ಒಟ್ನಲ್ಲಿ ಕೊರೊನಾ ರಣಕೇಕೆ ನಡುವೆ ಸಿಂಪಲ್ಲಾಗಿ ಹಬ್ಬ ಮಾಡಿ ಫ್ಯಾಮಿಲಿ ಜೊತೆ ಖುಷಿಯಾಗಿರಿ. ಆದ್ರೆ ಖುಷಿಯಲ್ಲಿ ಮಾಸ್ಕ್ ಧರಿಸೋದು, ದೈಹಿಕ ಅಂತರ ಕಾಪಾಡೋದು ಮಾತ್ರ ಮರೀಬೇಡಿ.

Published On - 6:41 am, Thu, 30 July 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ