Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮಾರ್ಷಲ್‌ಗಳು ಜನರ ಜತೆ ಜಗಳ ಮಾಡಬಾರದು: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಅನ್‌ಲಾಕ್ ಬಗ್ಗೆ ಮತ್ತಷ್ಟು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಮಾರ್ಷಲ್‌ಗಳು ಜನರ ಜತೆ ಜಗಳ ಮಾಡಬಾರದು: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
Follow us
TV9 Web
| Updated By: ganapathi bhat

Updated on: Jul 03, 2021 | 3:22 PM

ಬೆಂಗಳೂರು: ಬಿಬಿಎಂಪಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ. ಅವರು ಕೊರೊನಾ ಸಮಯದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಹೇಳಿಕೆ ನೀಡಿದ್ದಾರೆ. ಕೊವಿಡ್ ಸೂಕ್ತ ನಡವಳಿಕೆಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಹೀಗೆ ತಿಳಿಸಿದ್ದಾರೆ. ಏಪ್ರಿಲ್ 30ರಂದು ರಾಜ್ಯದಲ್ಲಿ ಹೆಚ್ಚು ಸೋಂಕಿತರ ಸಂಖ್ಯೆ ಇತ್ತು. ಆಗ ಔಷಧ ಕೊರತೆ, ಬೆಡ್ ಸಮಸ್ಯೆ ಇತ್ತು. ಬಿಬಿಎಂಪಿ ಮುಖ್ಯ ಆಯುಕ್ತರ ತಂಡದಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಕಷ್ಟದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕೈಜೋಡಿಸಿದ್ದಾರೆ ಎಂದು ಸಭೆಯಲ್ಲಿ ಕಮಲ್‌ ಪಂತ್ ತಿಳಿಸಿದ್ದಾರೆ.

ಬಿಬಿಎಂಪಿಗೆ ಪೊಲೀಸ್ ಇಲಾಖೆಯಿಂದ ಎಲ್ಲ ರೀತಿ ಸಹಾಯ ನೀಡಲಾಗಿದೆ. ಬಿಬಿಎಂಪಿ ಮಾರ್ಷಲ್‌ಗಳು ಜನರ ಜತೆ ಜಗಳ ಮಾಡಬಾರದು. ಸಮಾಧಾನವಾಗಿ ಜನರ ಜೊತೆ ವರ್ತಿಸಬೇಕು. ಮಾರ್ಷಲ್‌ಗಳ ಕೆಲಸಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಕಮಲ್‌ ಪಂತ್ ವಿವರಣೆ ನೀಡಿದ್ದಾರೆ.

ಕೊವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಿನ್ನೆಯಷ್ಟೇ ಸ್ಟಾರ್‌ ಹೋಟೆಲ್‌ ಹಾಲ್‌ಗೆ ಬೀಗ ಹಾಕಿದ್ದೇವೆ. ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಬೀಗ ಹಾಕಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ನಿಯಂತ್ರಣ ಕೆಲಸಕ್ಕೆ 54 ತಂಡ ರಚನೆ ಮಾಡಲಾಗಿದೆ. ಪ್ರತಿ ಟೀಂನಲ್ಲಿ 4 ಬಿಬಿಎಂಪಿ ಮಾರ್ಷಲ್‌ಗಳು ಇರ್ತಾರೆ. ಈ ತಂಡಗಳು ಮಾಸ್ಕ್, ಅಂತರದ ಬಗ್ಗೆ ಸೂಚಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಪೊಲೀಸರು, ಮಾರ್ಷಲ್‌ಗಳ ಮಧ್ಯೆ ಸಮನ್ವಯತೆ ಅಗತ್ಯ ಇದೆ. ಪೊಲೀಸ್ ಠಾಣಾ ಮಟ್ಟದಲ್ಲಿ ಸಮನ್ವಯತೆ ಇರಬೇಕು ಎಂದು ತಿಳಿಸಿದ್ದಾರೆ.

ದಂಡ ಹಾಕಲು ಹೋಂಗಾರ್ಡ್‌ಗಳನ್ನು ಬಳಸಿಕೊಳ್ಳಬೇಕು. ಫುಟ್‌ಪಾತ್ ಮೇಲಿನ ಅಂಗಡಿ ತೆರವಿಗೆ ಸೂಚಿಸಲಾಗಿದೆ. ಹೈಕೋರ್ಟ್‌ನಿಂದ ಸೂಚನೆ ಹಿನ್ನೆಲೆ ತೆರವು ಮಾಡ್ತೇವೆ. ಫುಟ್‌ಪಾತ್ ಮೇಲಿನ ಅಂಗಡಿ ತೆರವು ಕೆಲಸವಾಗಬೇಕು ಎಂದು ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಅನ್‌ಲಾಕ್ ಬಗ್ಗೆ ಮತ್ತಷ್ಟು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು: ಕ್ರಮ ಕೈಗೊಳ್ಳದ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ: ಎಫ್ಐಆರ್ ದಾಖಲು; ಆರೋಪಿಗಳು ಯಾರು ಗೊತ್ತಾ?

ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ