AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಮಾರ್ಷಲ್‌ಗಳು ಜನರ ಜತೆ ಜಗಳ ಮಾಡಬಾರದು: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಅನ್‌ಲಾಕ್ ಬಗ್ಗೆ ಮತ್ತಷ್ಟು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಮಾರ್ಷಲ್‌ಗಳು ಜನರ ಜತೆ ಜಗಳ ಮಾಡಬಾರದು: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on: Jul 03, 2021 | 3:22 PM

Share

ಬೆಂಗಳೂರು: ಬಿಬಿಎಂಪಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ. ಅವರು ಕೊರೊನಾ ಸಮಯದಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಹೇಳಿಕೆ ನೀಡಿದ್ದಾರೆ. ಕೊವಿಡ್ ಸೂಕ್ತ ನಡವಳಿಕೆಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಹೀಗೆ ತಿಳಿಸಿದ್ದಾರೆ. ಏಪ್ರಿಲ್ 30ರಂದು ರಾಜ್ಯದಲ್ಲಿ ಹೆಚ್ಚು ಸೋಂಕಿತರ ಸಂಖ್ಯೆ ಇತ್ತು. ಆಗ ಔಷಧ ಕೊರತೆ, ಬೆಡ್ ಸಮಸ್ಯೆ ಇತ್ತು. ಬಿಬಿಎಂಪಿ ಮುಖ್ಯ ಆಯುಕ್ತರ ತಂಡದಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಕಷ್ಟದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಕೈಜೋಡಿಸಿದ್ದಾರೆ ಎಂದು ಸಭೆಯಲ್ಲಿ ಕಮಲ್‌ ಪಂತ್ ತಿಳಿಸಿದ್ದಾರೆ.

ಬಿಬಿಎಂಪಿಗೆ ಪೊಲೀಸ್ ಇಲಾಖೆಯಿಂದ ಎಲ್ಲ ರೀತಿ ಸಹಾಯ ನೀಡಲಾಗಿದೆ. ಬಿಬಿಎಂಪಿ ಮಾರ್ಷಲ್‌ಗಳು ಜನರ ಜತೆ ಜಗಳ ಮಾಡಬಾರದು. ಸಮಾಧಾನವಾಗಿ ಜನರ ಜೊತೆ ವರ್ತಿಸಬೇಕು. ಮಾರ್ಷಲ್‌ಗಳ ಕೆಲಸಕ್ಕೆ ಅಡ್ಡಿ ಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದೂ ಕಮಲ್‌ ಪಂತ್ ವಿವರಣೆ ನೀಡಿದ್ದಾರೆ.

ಕೊವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಿನ್ನೆಯಷ್ಟೇ ಸ್ಟಾರ್‌ ಹೋಟೆಲ್‌ ಹಾಲ್‌ಗೆ ಬೀಗ ಹಾಕಿದ್ದೇವೆ. ಕೊವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಬೀಗ ಹಾಕಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ನಿಯಂತ್ರಣ ಕೆಲಸಕ್ಕೆ 54 ತಂಡ ರಚನೆ ಮಾಡಲಾಗಿದೆ. ಪ್ರತಿ ಟೀಂನಲ್ಲಿ 4 ಬಿಬಿಎಂಪಿ ಮಾರ್ಷಲ್‌ಗಳು ಇರ್ತಾರೆ. ಈ ತಂಡಗಳು ಮಾಸ್ಕ್, ಅಂತರದ ಬಗ್ಗೆ ಸೂಚಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಪೊಲೀಸರು, ಮಾರ್ಷಲ್‌ಗಳ ಮಧ್ಯೆ ಸಮನ್ವಯತೆ ಅಗತ್ಯ ಇದೆ. ಪೊಲೀಸ್ ಠಾಣಾ ಮಟ್ಟದಲ್ಲಿ ಸಮನ್ವಯತೆ ಇರಬೇಕು ಎಂದು ತಿಳಿಸಿದ್ದಾರೆ.

ದಂಡ ಹಾಕಲು ಹೋಂಗಾರ್ಡ್‌ಗಳನ್ನು ಬಳಸಿಕೊಳ್ಳಬೇಕು. ಫುಟ್‌ಪಾತ್ ಮೇಲಿನ ಅಂಗಡಿ ತೆರವಿಗೆ ಸೂಚಿಸಲಾಗಿದೆ. ಹೈಕೋರ್ಟ್‌ನಿಂದ ಸೂಚನೆ ಹಿನ್ನೆಲೆ ತೆರವು ಮಾಡ್ತೇವೆ. ಫುಟ್‌ಪಾತ್ ಮೇಲಿನ ಅಂಗಡಿ ತೆರವು ಕೆಲಸವಾಗಬೇಕು ಎಂದು ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಅನ್‌ಲಾಕ್ ಬಗ್ಗೆ ಮತ್ತಷ್ಟು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು: ಕ್ರಮ ಕೈಗೊಳ್ಳದ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ: ಎಫ್ಐಆರ್ ದಾಖಲು; ಆರೋಪಿಗಳು ಯಾರು ಗೊತ್ತಾ?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ