AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾವಶ್ಯಕವಾಗಿ ಹೊರಗೆ ಬಂದ್ರೆ ಹುಷಾರ್! ಗಾಡಿ ಸೀಜ್ ಮಾಡಿ ಕೇಸ್ ಹಾಕ್ತೀವಿ -ಕಮಲ್ ಪಂತ್ ಎಚ್ಚರಿಕೆ

ನೈಟ್ ಕರ್ಫ್ಯೂ ವೇಳೆ ಗಾಡಿ ಹೊರಗೆ ತಂದ್ರೆ ಗಾಡಿ ಸೀಜ್ ಮಾಡಿ ದಂಡ ಹಾಕಲಾಗುತ್ತೆ. ದಂಡದ ಜೊತೆಗೆ ಕೇಸ್ ಕೂಡ ಬೀಳುತ್ತೆ. ಸುಮ್ಮನೆ ಬಿಟ್ಟು ಕಳಿಸೋ ಮಾತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ಕೊಟ್ಟಿದ್ದಾರೆ.

ಅನಾವಶ್ಯಕವಾಗಿ ಹೊರಗೆ ಬಂದ್ರೆ ಹುಷಾರ್! ಗಾಡಿ ಸೀಜ್ ಮಾಡಿ ಕೇಸ್ ಹಾಕ್ತೀವಿ -ಕಮಲ್ ಪಂತ್ ಎಚ್ಚರಿಕೆ
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
ಆಯೇಷಾ ಬಾನು
ಆಯೇಷಾ ಬಾನು|

Updated on: Apr 22, 2021 | 7:54 AM

Share

ಬೆಂಗಳೂರು: ಅನಾವಶ್ಯಕವಾಗಿ ಹೊರಗೆ ಬಂದ್ರೆ ಹುಷಾರ್. ರಾತ್ರಿ ವೇಳೆ ಓಡಾಡಿದ್ರೆ ಐಡಿ ತೋರಿಸಬೇಕು, ಪ್ರಯಾಣಿಕರು ಟಿಕೆಟ್ ತೋರಿಸಬೇಕು. ನೈಟ್ ಕರ್ಫ್ಯೂ ವೇಳೆ ಗಾಡಿ ಹೊರಗೆ ತಂದ್ರೆ ಗಾಡಿ ಸೀಜ್ ಮಾಡಿ ದಂಡ ಹಾಕಲಾಗುತ್ತೆ. ದಂಡದ ಜೊತೆಗೆ ಕೇಸ್ ಕೂಡ ಬೀಳುತ್ತೆ. ಸುಮ್ಮನೆ ಬಿಟ್ಟು ಕಳಿಸೋ ಮಾತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ಕೊಟ್ಟಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ಕೊರೊನಾ 2ನೇ ಅಲೆಯ ಆರ್ಭಟ ಹೆಚ್ಚಾಗಿದ್ದು ಪ್ರತಿ ದಿನ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೊರೊನಾಗೆ ಕಡಿವಾಣ ಹಾಕಲು ಪೊಲೀಸರು ತಯಾರಿ ಮಾಡಿಕೊಂಡಿದ್ದು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಅನಾವಶ್ಯಕವಾಗಿ ರಸ್ತೆಗೆ ಇಳಿಯದಂತೆ ಸಾರ್ವಜನಿಕರಿಗೆ ಕಮಲ್ ಪಂತ್ ಎಚ್ಚರಿಕೆ ಕೊಟ್ಟಿದ್ದಾರೆ.

ಸಭೆ ಸಮಾರಂಭ ಧಾರ್ಮಿಕ ಕಾರ್ಯಕ್ರಮಗಳಿಗೆ ಬ್ರೇಕ್ ಬೀಳಲಿದೆ. ರೆಸ್ಟೋರೆಂಟ್ ಹೋಟೆಲ್ನಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶ ನೀಡಲಾಗಿದೆ. 144 ಸೆಕ್ಷನ್ ಪ್ರಕಾರ ಎಲ್ಲೂ ಕೂಡ 4 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಬಸ್ಗಳಲ್ಲಿ 50% ರಷ್ಟು ಮಾತ್ರ ಜನ ತುಂಬಿಸಿಕೊಳ್ಳಬೇಕು. ಆದೇಶ ಪಾಲನೆ ಮಾಡದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ. ಇನ್ನು ಕಲ್ಯಾಣ ಮಂಟಪ ಮಾಲೀಕರಿಂದ ನಿಯಮ‌ ಉಲ್ಲಂಘನೆಯಾದ್ರೆ ಕಲ್ಯಾಣ ಮಂಟಪ ಸೀಜ್ ಮಾಡಲು ನಿರ್ಧಾರ ಮಾಡಲಾಗಿದೆ.

ಚೆಕ್ ಪೋಸ್ಟ್ಗಳಲ್ಲಿ ಸೂಕ್ತ ಐಡಿ, ದಾಖಲೆಗಳನ್ನು ತೋರಿಸಿದ್ರೆ ಸಂಚಾರಕ್ಕೆ ಅವಕಾಶ ನೀಡಲಾಗುತ್ತೆ. ಆದ್ರೆ ಅನವಶ್ಯಕ ಸಂಚಾರಕ್ಕೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ. ವಾಹನಗಳನ್ನು ಸೀಜ್ ಮಾಡಿ ದಂಡ ವಿಧಿಸಲಾಗುವುದು. ನಾಗರೀಕರು ಸಹಕರಿಸಬೇಕು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಬೇಕು. ತಮ್ಮ ಭದ್ರತೆ ಸಲುವಾಗಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ನಗರ ಪೊಲೀಸ್ ಆಯುಕ್ತ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ನೈಟ್ ಕರ್ಫ್ಯೂ: ಭದ್ರತೆಗೆ ಪೊಲೀಸರಿಂದ ಸಿದ್ಧತೆ, ಎಲ್ಲಾ ಡಿಸಿಪಿಗಳ ಜೊತೆ ಕಮಲ್ ಪಂತ್ ಚರ್ಚೆ

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ