AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ಬೆಂಗಳೂರಿನ ಹೆಡ್​​ಕಾನ್ಸ್ಟೇಬಲ್​ ಅಮಾನತು

ಬೆಂಗಳೂರಿನ ಪೊಲೀಸ್​ ಪೇದೆ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ನಂದಿನಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹೆಡ್​​ಕಾನ್ಸ್ಟೇಬಲ್ ಪ್ರಶಾಂತ್​ ಕುಮಾರ್​ ಅವರನ್ನು ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ಬೆಂಗಳೂರಿನ ಹೆಡ್​​ಕಾನ್ಸ್ಟೇಬಲ್​ ಅಮಾನತು
ನಂದಿನಿ ಲೇಔಟ್ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on: Oct 20, 2024 | 11:57 AM

Share

ಬೆಂಗಳೂರು, ಅಕ್ಟೋಬರ್​ 20: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಬೆಂಗಳೂರಿನ (Bengaluru) ಪೊಲೀಸ್​ ಪೇದೆಯೊಬ್ಬರ (Police Constable) ವಿರುದ್ಧ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ (Fraud) ಆರೋಪ ಕೇಳಿಬಂದಿದೆ. ನಗರ ಸಶಸ್ತ್ರ ಮೀಸಲು ಪ್ರಧಾನ ಕಚೇರಿ (CAR) ಹೆಡ್​​ಕಾನ್ಸ್ಟೇಬಲ್​ ಆಗಿರುವ ಪ್ರಶಾಂತ್ ಕುಮಾರ್ ಅವರ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮೀಲೇಔಟ್ ನಿವಾಸಿ ಭಾಗ್ಯಮ್ಮ ಎಂಬವರು ದೂರು ನೀಡಿದ್ದಾರೆ. ದೂರು ಆಧರಿಸಿ ನಂದಿನಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ಮೂವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಪ್ರಶಾಂತ್ ಕುಮಾರ್ 2011ರಲ್ಲಿ ದೂರುದಾರೆ ಭಾಗ್ಯಮ್ಮ ಅವರಿಗೆ ಪರಿಚಯವಾಗಿದ್ದಾರೆ. “ತಮ್ಮ ಇಬ್ಬರು ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸಿ” ಎಂದು ದೂರುದಾರೆ ಭಾಗ್ಯಮ್ಮ ಪ್ರಶಾಂತ್ ಕುಮಾರ್ ಅವರಿಗೆ ಹೇಳಿದ್ದಾರೆ. ಅದಕ್ಕೆ ಪ್ರಶಾಂತ್​ ಕುಮಾರ್​ “ನನಗೆ ಹಲವು ಸರ್ಕಾರಿ ಅಧಿಕಾರಿಗಳು ಪರಿಚಯ ಇದ್ದಾರೆ. ನಿಮ್ಮ ಇಬ್ಬರು ಮಕ್ಕಳಿಗೆ ಕೆಲಸ ಕೊಡಿಸುತ್ತೇನೆ” ಎಂದಿದ್ದರು.

ಕೆಲ ದಿನಗಳ ಬಳಿಕ ದೂರುದಾರೆ ಭಾಗ್ಯಮ್ಮ ಅವರನ್ನು ಮನೆಗೆ ಕರೆಸಿಕೊಂಡ ಪೇದೆ ಪ್ರಶಾಂತ್​ ಕುಮಾರ್​ “ನಿಮ್ಮ ಇಬ್ಬರು ಮಕ್ಕಳಿಗೆ ಮೂರು ತಿಂಗಳಲ್ಲಿ ಎಫ್​ಡಿಎ, ಎಸ್​ಡಿಎ ಶ್ರೇಣಿಯ ಕೆಲಸ ಕೊಡಿಸುವುದಾಗಿ” ಭರವಸೆ ನೀಡಿದ್ದಾರೆ. ಇದಕ್ಕಾಗಿ 25 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿ ಮೇಲೆ ಸಿಸಿಬಿ ದಾಳಿ: ಸ್ಪೋಟಕ ವಿಚಾರ ಬಹಿರಂಗ

ನಂತರ, ಪೇದೆ ಪ್ರಶಾಂತ್ ಕುಮಾರ್​, ಮಂಜುನಾಥ್ ಪ್ರಸಾದ್ ಎಂಬುವರನ್ನು ತನ್ನ ಪಿಎ ಎಂದು ಭಾಗ್ಯಮ್ಮ ಅವರಿಗೆ ಪರಿಚಯ ಮಾಡಿಸಿದ್ದಾನೆ. ನಂತರ ಆರೋಪಿಗಳು ಭಾಗ್ಯಮ್ಮ ಅವರಿಂದ ಒಟ್ಟು 47 ಲಕ್ಷ ರೂ. ವಸೂಲಿ ಮಾಡಿದ್ದಾರೆ. ಜೊತೆಗೆ 857 ಗ್ರಾಂ. ಚಿನ್ನಾಭರಣವನ್ನೂ ಪಡೆದಿದ್ದಾರೆ. ಆದರೆ, ಇನ್ನೂವರೆಗೂ ಯಾವುದೇ ನೌಕರಿ ಕೊಡಿಸಿಲ್ಲ.

ಹೀಗಾಗಿ ಭಾಗ್ಯಮ್ಮ ಆರೋಪಿಗಳ ವಿರುದ್ಧ ನಂದಿನಿಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಸಿದ್ದಾರೆ. ಹೆಡ್​ ಕಾನ್ಸ್​ಟೇಬಲ್​ ಪ್ರಶಾಂತ್ ಕುಮಾರ್, ಪತ್ನಿ ದೀಪಾ ಮತ್ತು ಮಂಜುನಾಥ್​ ಪ್ರಸಾದ್​ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಶಾಂತ್​ ಕುಮಾರ್​ ಅವರನ್ನು ಅಮಾನತು ಮಾಡಲಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು