AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಶ್ರೀಲಂಕಾ ಪ್ರಜೆಗಳು ಪೊಲೀಸ್ ವಶಕ್ಕೆ

ಬೆಂಗಳೂರಿಗೆ ಬಂದು ಪಾಸ್​ಪೋರ್ಟ್​, ವೀಸಾ ಇಲ್ಲದೆಯೇ ಕಳೆದ ಒಂದು ವರ್ಷದಿಂದ ಇಲ್ಲಿಯೇ ವಾಸವಿದ್ದ ಮೂವರು ಅಕ್ರಮ ವಲಸಿಗರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆಯೂ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಅಕ್ರಮ ವಲಸಿಗರು ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ಈಗ ನೆಲೆಸಿರುವ ಶ್ರೀಲಂಕನ್ನರು ಡ್ರಗ್ ಡೀಲರ್​ಗಳಾಗಿದ್ದು, ಇವರ ವಿರುದ್ಧ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಮೂವರು ಶ್ರೀಲಂಕಾ ಪ್ರಜೆಗಳು ಪೊಲೀಸ್ ವಶಕ್ಕೆ
ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದ ಮೂವರು ವಲಸಿಗರು
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ಭಾವನಾ ಹೆಗಡೆ|

Updated on:Sep 29, 2025 | 3:18 PM

Share

ಬೆಂಗಳೂರು, ಸೆಪ್ಟೆಂಬರ್ 29: ವಿದೇಶೀಯರು ಅಕ್ರಮವಾಗಿ ಬೆಂಗಳೂರಿಗೆ (Bengaluru) ಬಂದು ನೆಲಸುವ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ, ಶ್ರಿಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು (Illegal Immigrants) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಪಾಕಿಸ್ತಾನದಿಂದ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಈಗ ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶಿಗರು ಅಕ್ರಮವಾಗಿ ಬೆಂಗಳೂರಿಗೆ ಬಂದಿದ್ದು ಹೇಗೆ?

ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ ಬಂದ ಮೂವರು ಬೆಂಗಳೂರಿನ ದೇವನಹಳ್ಳಿ ಠಾಣಾ ವ್ಯಾಪ್ತಿಯ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಿದ್ದರು. ಶ್ರೀಲಂಕಾದ ಜಾಫ್ನಾದಿಂದ ಬೋಟ್​ ಮೂಲಕ ತಮಿಳುನಾಡಿಗೆ ಬಂದಿಳಿದ ವಿದೇಶೀಯರು,  ಅಲ್ಲಿಂದ ರಾಮೇಶ್ವರಂಗೆ ಹೋಗಿದ್ದರು. ಮೂವರು ಶ್ರೀಲಂಕಾದ ಪ್ರಜೆಗಳೂ ಸ್ಥಳೀಯ ವ್ಯಕ್ತಿಯೊಬ್ಬನ ಸಹಾಯ ಪಡೆದು ಬೆಂಗಳೂರಿಗೆ ಬಂದು, ಅಕ್ರಮವಾಗಿ ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು.

ಕಳೆದ ಒಂದು ವರ್ಷದಿಂದ ಪಾಸ್​ಪೋರ್ಟ್​ ಮತ್ತು ವೀಸಾವಿಲ್ಲದೆಯೇ ಇಲ್ಲಿ ಉಳಿದಿದ್ದರು. ವಿದೇಶಿ ಪ್ರಜೆಗಳು ನೆಲೆಸಿದ್ದ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿತ್ತು. ಬೆಂಗಳೂರಿನ ಸಿಸಿಬಿ ಠಾಣೆಯಲ್ಲಿ ಫಾರಿನ್ ಆ್ಯಕ್ಟ್ ಅಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಮೂವರೂ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಡೀಲರ್ಸ್ ಎಂಬ ಮಾಹಿತಿ ಲಭ್ಯವಾಗಿದ್ದು, ಓರ್ವ ಆರೋಪಿ ವಿರುದ್ಧ ಎನ್​ಸಿಬಿ ಕೇಸ್ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಧ್ಯಕ್ಕೆ  ಶ್ರೀಲಂಕಾದ ರಾಯಭಾರಿ ಕಚೇರಿಗೆ ಸಿಸಿಬಿ ಈ ಬಗ್ಗೆ ಮಾಹಿತಿ ಕಳುಹಿಸಿದೆ.

ಇದನ್ನೂ ಓದಿ ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳ ಬಂಧನ

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಾಸ ಇದೇ ಮೊದಲಲ್ಲ

ಈ ಹಿಂದೆ ಬಾಂಗ್ಲಾದೇಶದಿಂದ ಬಂದಿದ್ದ ನಾಲ್ವರು ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ನೆಲೆಸಿರುವುದು ಗೊತ್ತಾಗಿತ್ತು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್​​ಪೋರ್ಟ್​ನ್ನೂ ಸಹ ಪಡೆದಿದ್ದರು. ಇವರ ಮನೆಗಳಿಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದರು. ಅಷ್ಟೇ ಅಲ್ಲದೇ, ಇನ್ನೊಂದು  ಪ್ರಕರಣದಲ್ಲಿ ಹಿಂದೂ ಹೆಸರನ್ನಿಟ್ಟುಕೊಂಡಿದ್ದ ಪಾಕಿಸ್ತಾನಿ ಪ್ರಜೆಗಳು ದಾವಣಗೆರೆಯಲ್ಲಿ ವಾಸವಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಕ್ ಮಹಿಳೆಯೊಬ್ಬಳು ದಾವಣಗೆರೆಯ ಮುಸ್ಲಿಮ್​ ವ್ಯಕ್ತಿಯನ್ನು ಮದುವೆಯಾಗಿದ್ದಳು. ಆಕೆಯೊಂದಿಗೆ ಉಳಿದ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:44 pm, Mon, 29 September 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ