AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಡೋಸ್​ ಕೊರೊನಾ ಲಸಿಕೆ ಕೊಟ್ಟು ಯಾಮಾರಿಸ್ತಾರೆ! ಬೆಂಗಳೂರಲ್ಲಿ ಪೊಲೀಸರಿಗೇ ಮೋಸ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ

ಡಾ.ಎಂ.ಕೆ.ಪುಷ್ಪಿತಾಗೂ ಬಿಬಿಎಂಪಿಗೂ ಯಾವುದೇ ಸಂಬಂಧವಿಲ್ಲ. ಅವರು ಈಗ ನಮ್ಮ ಸಿಬ್ಬಂದಿ ಅಲ್ಲ, ಹೀಗಾಗಿ ಈ ವಿಚಾರದಲ್ಲಿ ನಮಗೆ ಸಂಬಂಧವಿಲ್ಲ ಎಂದಿರುವ ಗೌರವ್ ಗುಪ್ತಾ, ಪೋಲಿಸರೇ ಸುಮೊಟೋ ದೂರು ದಾಖಲಿಸಿದ್ದಾರೆ ತನಿಖೆ ನಡೆಸುತ್ತಾರೆ ಎಂದಿದ್ದಾರೆ.

ಅರ್ಧ ಡೋಸ್​ ಕೊರೊನಾ ಲಸಿಕೆ ಕೊಟ್ಟು ಯಾಮಾರಿಸ್ತಾರೆ! ಬೆಂಗಳೂರಲ್ಲಿ ಪೊಲೀಸರಿಗೇ ಮೋಸ ಮಾಡಿದ ಆರೋಗ್ಯ ಕೇಂದ್ರದ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Follow us
Skanda
|

Updated on:May 26, 2021 | 7:15 AM

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಇಡೀ ದೇಶವೇ ಕಂಗಾಲಾಗಿ ಹೋಗಿದೆ. ಕರ್ನಾಟಕ ರಾಜ್ಯದಲ್ಲಿ ಕಳೆದೊಂದು ವಾರದಿಂದ ಸೋಂಕಿತರ ಪ್ರಮಾಣದಲ್ಲಿ ಕೊಂಚ ಇಳಿಮುಖ ಕಂಡುಬರುತ್ತಿದೆಯಾದರೂ ಪರಿಸ್ಥಿತಿ ಹತೋಟಿಗೆ ಬಂದಿಲ್ಲ. ಇಂತಹ ಸಂದರ್ಭದಲ್ಲಿ ಮೂರನೇ ಅಲೆಯನ್ನು ಸಶಕ್ತವಾಗಿ ಎದುರಿಸಬೇಕೆಂದರೆ ಕೊರೊನಾ ಲಸಿಕೆಯೊಂದೇ ಸದ್ಯಕ್ಕಿರುವ ಪರಿಣಾಮಕಾರಿ ಮಾರ್ಗ ಎಂದು ತಜ್ಞರು ಒತ್ತಿ ಹೇಳುತ್ತಿದ್ದಾರೆ. ಜನರು ಸಹ ಲಸಿಕೆಗಾಗಿ ಮುಗಿಬೀಳುತ್ತಿದ್ದಾರೆ. ಆದರೆ, ಇಲ್ಲೊಂದೆಡೆ ಲಸಿಕೆ ಹಾಕಿಸಿಕೊಳ್ಳಲು ಬರುವವರಿಗೆ ವೈದ್ಯರಿಂದ ಭಾರೀ ಮೋಸ ಆಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಮಂಜುನಾಥನಗರದ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಂಡ ಪೊಲೀಸರಿಗೇ ಈ ಮೋಸವಾಗಿದ್ದು, ಅಲ್ಲಿನ ವೈದ್ಯರು ಕೇವಲ ಅರ್ಧ ಡೋಸ್ ಲಸಿಕೆ ನೀಡುವ ಮೂಲಕ ಕೊರೊನಾ ವಾರಿಯರ್ಸ್​ಗಳನ್ನೇ ಯಾಮಾರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಜನರ ರಕ್ಷಣೆಗಾಗಿ ತಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ರಸ್ತೆಗಳಲ್ಲಿ ಬಿಸಿಲು, ಮಳೆಯನ್ನದೇ ನಿಂತು ಕಾಯುವ ಆರಕ್ಷಕರಿಗೇ ಹೀಗೆ ಹಾಫ್​ಡೋಸ್ ನೀಡಿದರೆ ಇನ್ನು ಜನಸಾಮಾನ್ಯರ ಗತಿಯೇನು ಎಂಬ ಆತಂಕ ಕಾಡಲಾರಂಭಿಸಿದೆ. ಮಂಜುನಾಥನಗರದ ಆರೋಗ್ಯ ಕೇಂದ್ರದ ಡಾ.ಎಂ.ಕೆ.ಪುಷ್ಪಿತಾ ಈ ಅಕ್ರಮವೆಸಗುತ್ತಿದ್ದಾರೆ ಎನ್ನುವುದು ಬೆಳಕಿಗೆ ಬಂದಿದ್ದು, ಇವರ ಬಳಿ ಲಸಿಕೆ ಪಡೆದ ಬಸವೇಶ್ವರ ನಗರ ಠಾಣೆ ಪೊಲೀಸರಿಗೆ ಚಿಂತೆ ಆರಂಭವಾಗಿದೆ.

ಕೊರೊನಾ ವಾರಿಯರ್ಸ್​ ಹಣೆಪಟ್ಟಿ ಹೊತ್ತಿರುವ ಪೊಲೀಸರಿಗೇ ಮೋಸವಾಗುತ್ತಿದೆ ಎನ್ನುವುದು ಬೆಳಕಿಗೆ ಬಂದಿದ್ದರೂ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾತ್ರ ಈ ವಿಚಾರದಲ್ಲಿ ದನಿ ಎತ್ತುತ್ತಿಲ್ಲ. ಇಲ್ಲಿನ ಆರೋಗ್ಯ ಕೇಂದ್ರಕ್ಕೆ ಸರ್ಕಾರ ನೀಡಿದ್ದ ಕೊವಿಡ್ ಲಸಿಕೆಯಲ್ಲಿ ಅಕ್ರಮವಾಗುತ್ತಿದೆ ಎಂದು ಹೇಳಿದರೂ ಬಿಬಿಎಂಪಿ ಈ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಡಾ.ಎಂ.ಕೆ.ಪುಷ್ಪಿತಾ ಅವರನ್ನು ವಜಾ ಮಾಡಲಾಗಿದೆ ಎಂಬ ಸಬೂಬು ನೀಡಲಾಗುತ್ತಿದ್ದು, ಬಿಬಿಎಂಪಿ ಅಧಿಕಾರಿಗಳು ದೂರು ನೀಡದ ಬಗ್ಗೆ ಪ್ರಶ್ನಿಸಿದರೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಡಾ.ಎಂ.ಕೆ.ಪುಷ್ಪಿತಾ ಈಗ ನಮ್ಮ ಸಿಬ್ಬಂದಿ ಅಲ್ಲ ಎಂದು ಗೌರವ್ ಗುಪ್ತಾ ಉತ್ತರಿಸಿದ್ದಾರೆ.

ಡಾ.ಎಂ.ಕೆ.ಪುಷ್ಪಿತಾಗೂ ಬಿಬಿಎಂಪಿಗೂ ಯಾವುದೇ ಸಂಬಂಧವಿಲ್ಲ. ಅವರು ಈಗ ನಮ್ಮ ಸಿಬ್ಬಂದಿ ಅಲ್ಲ, ಹೀಗಾಗಿ ಈ ವಿಚಾರದಲ್ಲಿ ನಮಗೆ ಸಂಬಂಧವಿಲ್ಲ ಎಂದಿರುವ ಗೌರವ್ ಗುಪ್ತಾ, ಪೋಲಿಸರೇ ಸುಮೊಟೋ ದೂರು ದಾಖಲಿಸಿದ್ದಾರೆ ತನಿಖೆ ನಡೆಸುತ್ತಾರೆ ಎಂದಿದ್ದಾರೆ. ಇತ್ತ ಪ್ರಕರಣದ ಬಗ್ಗೆ ತನಿಖೆ ನಡೆಸಲು ಬಿಬಿಎಂಪಿ ಅಧಿಕಾರಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಬರುವಂತೆ ತಿಳಿಸಲಾಯಿತಾದರೂ, ಅಲ್ಲಿಗೆ ಬಂದ ಅಧಿಕಾರಿಗಳು ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸದೇ ಠಾಣೆಯಲ್ಲಿ ಕುಳಿತು ಬಳಿಕ ಹೊರ ನಡೆದಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಮಂಜುನಾಥ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಲು ಪೋಲಿಸರು ಪ್ರಯತ್ನಿಸುತ್ತಿರುವರಾದರೂ ಬಂಧನ ಭೀತಿಯಿಂದ ಆರೋಗ್ಯ ಕೇಂದ್ರ ಸಿಬ್ಬಂದಿ ಕಾಲ್ಕಿತ್ತಿದ್ದಾರೆ. ಲಸಿಕೆ ನೀಡುತ್ತಿದ್ದ ಆರೋಗ್ಯ ಕೇಂದ್ರ ಸಿಬ್ಬಂದಿ ಸರಸ್ವತಿ, ಸೌಮ್ಯಾ, ಬಿಬಿಎಂಪಿ ಆರೋಗ್ಯ ಇಲಾಖೆ ಅಧಿಕಾರಿ ರಘು, ಸ್ವಾಬ್ ಕಲೆಕ್ಟ್ ಮಾಡಲು ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಗಿರೀಶ್ ಸೇರಿದಂತೆ ಎಲ್ಲರೂ ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ರೂಪಾಂತರ ವೈರಸ್ ವಿರುದ್ಧ ಎರಡು ಡೋಸ್ ಲಸಿಕೆ ಮಾತ್ರ ಬಲವಾದ ರಕ್ಷಣೆ ಒದಗಿಸಬಲ್ಲದು: ವರದಿ

ಕೊವಿಡ್ ಸೋಂಕಿನಿಂದ ರಕ್ಷಿಸಲು ಲಸಿಕೆಯ 3ನೇ ಡೋಸ್ ನೀಡಬೇಕು ಎಂದ ಮಾಡೆರ್ನಾ ಕಂಪನಿಯ ಸಿಇಒ

Published On - 7:11 am, Wed, 26 May 21

ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ