AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ವಿಚಾರಕ್ಕೆ 7 ಸ್ಟಾರ್ ಹೋಟೆಲ್​ಗೆ ನುಗ್ಗಿ ದಾಂಧಲೆ; ಐವರು ಬಂಧನ

ನಾವು ಲೋಕಲ್ ಹುಡುಗರು, ನೀನು ಫೋನ್ ಮಾಡಿ ಕರೆಸುವ ತನಕ ಕಾಯಬೇಕಾ ಎಂದು ಯುವಕರು ಗಲಾಟೆ ಮಾಡಿದ್ದಾರೆ. ಎಲ್ಲಿಂದಲೋ ಬಂದು ಇಲ್ಲಿ ವ್ಯಾಪಾರ ಮಾಡುತ್ತಿದ್ದೀರಾ. ನಮಗೆ ಎದುರು ಮಾತಾಡ್ತೀರಾ ಅಂತ ಗಲಾಟೆ ಮಾಡಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ 7 ಸ್ಟಾರ್ ಹೋಟೆಲ್​ಗೆ ನುಗ್ಗಿ ದಾಂಧಲೆ; ಐವರು ಬಂಧನ
ಹೋಟೆಲ್​ಗೆ ನುಗ್ಗಿ ದಾಂಧಲೆ ನಡೆಸಿದ ಯುವಕರು
TV9 Web
| Edited By: |

Updated on: Jul 11, 2021 | 2:24 PM

Share

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕರು ಹೋಟೆಲ್​ಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಜುಲೈ 4 ರಂದು ರಾತ್ರಿ 8.30 ರ ಸುಮಾರಿಗೆ ಭುವನೇಶ್ವರಿನಗರ ಮುಖ್ಯರಸ್ತೆಯಲ್ಲಿರುವ 7 ಸ್ಟಾರ್ ಹೋಟೆಲ್ನಲ್ಲಿ ದಾಂಧಲೆ ನಡೆದಿದೆ. ಮೂವರು ಯುವಕರು ಹೊಟೇಲ್ ಸಿಬ್ಬಂದಿ ಮನೀಶ್ ಎಂಬಾತನನ್ನ ಕೇಳಿಕೊಂಡು ಬಂದಿದ್ದರು. ಈ ವೇಳೆ ಮನೀಶ್ ಊಟ ಪಾರ್ಸೆಲ್ ಕೊಡೊಕೆ ಹೋಗಿದ್ದಾನೆ ಎಂದು ಮಾಲೀಕ ಹೇಳಿದರು. ಈ ವೇಳೆ ಮಾಲೀಕ ಹಾಗು ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.

ನಾವು ಲೋಕಲ್ ಹುಡುಗರು, ನೀನು ಫೋನ್ ಮಾಡಿ ಕರೆಸುವ ತನಕ ಕಾಯಬೇಕಾ ಎಂದು ಯುವಕರು ಗಲಾಟೆ ಮಾಡಿದ್ದಾರೆ. ಎಲ್ಲಿಂದಲೋ ಬಂದು ಇಲ್ಲಿ ವ್ಯಾಪಾರ ಮಾಡುತ್ತಿದ್ದೀರಾ. ನಮಗೆ ಎದುರು ಮಾತಾಡ್ತೀರಾ ಅಂತ ಗಲಾಟೆ ಮಾಡಿದ್ದಾರೆ. ಅಲ್ಲದೇ ಸ್ಥಳಕ್ಕೆ ಒಂದಷ್ಟು ಸ್ಥಳೀಯ ಯುವಕರನ್ನ ಕರೆಯಿಸಿಕೊಂಡು ದಾಂಧಲೆ ಮಾಡಿದ್ದಾರೆ.

ಹೋಟೆಲ್ ಮಾಲೀಕರಾದ ಆಂಜನೇಯಲು ಹಾಗೂ ಹರೀಶ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ದೊಣ್ಣೆ, ಕಲ್ಲುಗಳಿಂದ ಹೋಟೆಲ್ ಗಾಜು, ಟೇಬಲ್, ಚೇರ್​ಗಳನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿದ್ದಾರೆ. ಯುವಕರ ಗುಂಪು ಹೂ ಕುಂಡಗಳನ್ನ ಗಾಜುಗಳ ಮೇಲೆ ಎಸೆದು ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಶಿವರಾಜ್, ವಿಶ್ವನಾಥ್ ಮತ್ತು ಚೇತನ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

Viral Video: ಮೈದುನನ ಮದುವೆಯಲ್ಲಿ ಹಮ್ ಆಪ್ ಕೆ ಹೈ ಕೋನ್​ ಚಿತ್ರದ ಹಾಡಿ​ಗೆ ಅತ್ತಿಗೆಯ ಸಕತ್​ ಸ್ಟೆಪ್​! ವಿಡಿಯೋ ವೈರಲ್

Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

(Bengaluru Police have arrested the youths who broke into a 7 star hotel)

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​